ನವದೆಹಲಿ: ಪಂಜಾಬ್ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಹೊತ್ತಲ್ಲಿ ಆಮ್ ಅದ್ಮಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗುತ್ತಿದೆ. ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹೊತ್ತಲ್ಲಿ ರಾಜಕೀಯ ಪಕ್ಷಗಳಲ್ಲಾಗುತ್ತಿರುವ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.
I have said again & again that when the time comes we will give you a good CM face, it could be anyone. We are not thinking about it right now: AAP national convener and Delhi CM Arvind Kejriwal in Ludhiana, when asked about the party’s CM face for Punjab elections pic.twitter.com/UmHs8Lb01r
— ANI (@ANI) September 30, 2021
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ಬಳಿಕ ಆಮ್ ಅದ್ಮಿ ಸೇರ್ಪಡೆಯಾಗಬಹುದು ಎಂದು ಪಂಜಾಬ್ ನಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೆ ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು ಎನ್ನುವ ಊಹೆಗಳು ಕೇಳಿ ಬಂದಿವೆ. ಇದನ್ನೂ ಓದಿ: ಆರ್ಎಸ್ಎಸ್ ಸದಸ್ಯನಾಗಿದ್ದ ಡಿಕೆಶಿಯವರೇ ಸಿದ್ದರಾಮಯ್ಯನವರ ಮಾತನ್ನು ಒಪ್ಪುತ್ತೀರಾ – ಬಿಜೆಪಿ ಪ್ರಶ್ನೆ
ಈ ಚರ್ಚೆಗಳ ಬೆನ್ನಲ್ಲೇ ಪಂಜಾಬ್ ಗೆ ಭೇಟಿ ನೀಡಿದ ದೆಹಲಿಯ ಸಿಎಂ ಮತ್ತು ಆಮ್ ಅದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ನವಜೋತ್ ಸಿಂಗ್ ಸಿಧು ನಮ್ಮ ಸಂಪರ್ಕದಲ್ಲಿ ಇಲ್ಲ. ಇದೊಂದು ಊಹಾತ್ಮಕ ಪಕ್ಷ ಎಂದು ಪ್ರತಿಕ್ರಿಯಿಸಿದ್ದಾರೆ.
It is a hypothetical question, if anything like that happens we will tell you first of all: AAP national convener and Delhi CM Arvind Kejriwal when asked if Navjot Singh Sidhu will join Aam Aadmi Party pic.twitter.com/IuosVYaBSa
— ANI (@ANI) September 30, 2021
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಲೋಕಸಭಾ ಸದಸ್ಯ ಭಗವಂತ್ ಮನ್ ನನ್ನ ಕಿರಿಯ ಸಹೋದರ. ಅವರು ಪಂಜಾಬ್ ಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದು ಅವರು ಶ್ಲಾಘಿಸಿದ್ದಾರೆ. ಈ ಹೇಳಿಕೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದ್ದು, ಭಗವಂತ್ ಮನ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.