ನವದೆಹಲಿ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತನಿಂದಲೇ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಹಲ್ಲೆಯಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ದೆಹಲಿಯ ಮೋತಿ ನಗರ್ ಬಳಿ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದ ಗಂಭೀರವಾಗಿ ತೆಗೆದುಕೊಂಡ ದೆಹಲಿ ಪೊಲೀಸರು ಡಿಸಿಪಿ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಸಿದ್ದರು. ಈ ವೇಳೆ ಬಂಧಿತ ಸುರೇಶ್ ಮೋತಿ ನಗರ್ ನಿವಾಸಿ ಎಂದು ತಿಳಿದು ಬಂದಿದೆ.
Delhi CM Arvind Kejriwal: A Chief Minister was attacked and the Central govt says, 'didn't receive the complaint, unable to move ahead with further proceedings, the PM should resign over it. It's not an attack on Arvind Kejriwal, it is an attack on Delhi's mandate. pic.twitter.com/RsUlRFhlVn
— ANI (@ANI) May 5, 2019
ತನ್ನ ವ್ಯಾಪ್ತಿಯ ಪ್ರದೇಶದಲ್ಲಿ ಎಎಪಿ ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದ ಸುರೇಶ್, ಪಕ್ಷದ ಸಭೆಗಳನ್ನು ನಡೆಸುವ ಹಾಗೂ ನಿರ್ವಹಣೆ ಮಾಡುವ ಕೆಲಸ ಮಾಡುತ್ತಿದ್ದ. ಆದರೆ ಪಕ್ಷದ ನಾಯಕರ ನಡೆ ಹಾಗೂ ವರ್ತನೆಯಿಂದ ಬೇಸತ್ತಿದ್ದ ಸುರೇಶ್ ಅಸಮಾಧಾನಗೊಂಡು ಕೃತ್ಯ ಎಸಗಿದ್ದಾನೆ ಎಂಬ ಮಾಹಿತಿ ಲಭಿಸಿದ್ದಾಗಿ ದೆಹಲಿ ಪೊಲೀಸ್ ಹೆಚ್ಚುವರಿ ಪಿಆರ್ ಒ ಅನಿಲ್ ಮಿಟ್ಟಲ್ ಮಾಹಿತಿ ನೀಡಿದ್ದಾರೆ.
ಪಕ್ಷದ ಮುಖಂಡರು ಸೇನೆಯ ಬಗ್ಗೆ ಅವಹೇಳಕಾರಿಯಾಗಿ ಹೇಳಿಕೆ ನೀಡಿದ್ದು ಕೂಡ ಆತ ಕೋಪಗೊಳ್ಳುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ. ಅಲ್ಲದೇ ಈ ವೇಳೆ ಭದ್ರತೆಯ ಕುರಿತು ಕೂಡ ತನಿಖೆ ನಡೆಸಲಾಗುತ್ತಿದೆ ಸ್ಪಷ್ಟಪಡಿಸಿದ್ದಾರೆ. ಸದ್ಯ ಯುವಕನ ವಿರುದ್ಧ ಸೆಕ್ಷನ್ 323ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಘಟನೆ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡಿದ್ದ ಎಎಪಿ ಪಕ್ಷದ ನಾಯಕರು ರಾಜಕೀಯ ಪ್ರಾಯೋಜಿತ ಘಟನೆ ಎಂದು ಕಿಡಿಕಾರಿದ್ದರು. ಅಲ್ಲದೇ ಪೊಲೀಸರ ಹೇಳಿಕೆ ವಿರುದ್ಧ ಕಿಡಿಕಾರಿರುವ ಎಎಪಿ ಮುಖಂಡ ಸೌರಭ್ ಭಾರಧ್ವಜ್, ಆರೋಪಿಯ ಪತ್ನಿ ತನ್ನ ಪತಿ ಸುರೇಶ್ ಮೋದಿ ಬೆಂಬಲಿಗ ಹೇಳಿಕೆ ನೀಡಿದ್ದಾರೆ. ಆದರೆ ಪೊಲೀಸರ ಪ್ರಕರಣವನ್ನು ತಿರುಚಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿ ಟ್ವೀಟ್ ಮಾಡಿದ್ದಾರೆ.
@DelhiPolice is planting News that Man belonged to AAP – This is really shameful given the fact that wife of the attacker has herself said that attacker was Modi Bhakt and did not like anyone talking against Modi.
— Saurabh Bharadwaj (@Saurabh_MLAgk) May 4, 2019