– 5 ವಿಶೇಷ ತಂಡ ರಚನೆ, ಪೊಲೀಸರ ತನಿಖೆ ಚುರುಕು
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ರಹಿಮಾನ್ ಹತ್ಯೆ (Abdul Rahiman Murder Case) ಪ್ರಕರಣದಲ್ಲಿ ಒಟ್ಟು ಐವರು ಆರೋಪಿಗಳ ಬಂಧನವಾಗಿದೆ. ದ್ವೇಷದ ಹಿನ್ನೆಲೆ ಹತ್ಯೆ ನಡೆದಿದೆ ಅನ್ನೋದು ತನಿಖೆಯಿಂದ ಗೊತ್ತಾಗಿದ್ರೂ, ಹತ್ಯೆ ನಡೆದಿರೋ ನಿಖರ ಕಾರಣ ಏನು ಅನ್ನೋ ಬಗ್ಗೆ ತನಿಖೆ ಮುಂದುವರಿದಿದೆ.
ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಬಂಧಿತ ಆರೋಪಿಗಳು. ಹಳೇ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಿದ್ದಾರೆ ಅನ್ನೋದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದ್ರೆ ನಿಖರ ಕಾರಣ ಇನ್ನೂನಿಗೂಢವಾಗಿಯೇ ಉಳಿದಿದೆ. ಪೂರ್ವದ್ವೇಷದ ಹತ್ಯೆಯೋ, ಕೋಮುದ್ವೇಷದ ಹತ್ಯೆಯೋ, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರದ ಹತ್ಯೆಯೋ ಅನ್ನೋದು ಖಚಿತಗೊಂಡಿಲ್ಲ. ಬಂಟ್ವಾಳ ಡಿವೈಎಸ್ಪಿ ವಿಜಯ್ ಪ್ರಸಾದ್ ನೇತೃತ್ವದಲ್ಲಿ 5 ವಿಶೇಷ ತಂಡಗಳನ್ನ ಮಾಡಿ ತನಿಖೆ ನಡೆಸುತ್ತಿದ್ದು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಲ್ಲಿ ಸಾಲು ಸಾಲು ಹತ್ಯೆ ಬೆನ್ನಲ್ಲೇ ಇಬ್ಬರು ಐಪಿಎಸ್ ಅಧಿಕಾರಿಗಳ ಎತ್ತಂಗಡಿ
1 ತಿಂಗಳಲ್ಲಿ ಮೂವರ ಹತ್ಯೆ:
ರಹಿಮಾನ್ ಹತ್ಯೆ ಯಾವ ಕಾರಣಕ್ಕಾಗಿ ನಡೆದಿದೆ ಅನ್ನೋದು ಸ್ಪಷ್ಟವಾಗದಿದ್ದರೂ ಇದು ಸುಹಾಸ್ ಶೆಟ್ಟಿ ಹತ್ಯೆಗೆ ರಿವೇಂಜ್ ಎಂದು ಎಲ್ಲೆಡೆ ಸುದ್ದಿಯಾಗಿದೆ. ಇನ್ನೊಂದೆಡೆ ಇದು ಬೇರೆಯೇ ದ್ವೇಷದಿಂದ ನಡೆದ ಹತ್ಯೆ ಅನ್ನೋ ಮಾತು ಹರಿದಾಡುತ್ತಿದೆ. ಇದಕ್ಕೆಲ್ಲ ಪೊಲೀಸ್ ತನಿಖೆಯೇ ಉತ್ತರ ನೀಡಬೇಕಿದೆ. ಈ ನಡುವೆ ಕಳೆದ ಒಂದು ತಿಂಗಳಲ್ಲಿ ಅಂದ್ರೆ ಎಪ್ರಿಲ್ 27 ರಿಂದ ಮೇ 27ರ ವರೆಗೆ ಬರೋಬ್ಬರಿ ಮೂವರ ಹತ್ಯೆಯಾಗಿದೆ. ಮೇ 27ಕ್ಕೆ ಕುಡುಪುನಲ್ಲಿ ಅಶ್ರಫ್ ಎಂಬ ಯುವಕನನ್ನು ಹಿಂದೂ ಯುವಕರು ಗುಂಪು ಹತ್ಯೆ ನಡೆಸಿದ್ದರು. ಇದಾದ ನಾಲ್ಕೇ ದಿನದಲ್ಲಿ ಅಂದ್ರೆ ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿಯನ್ನು ಮುಸ್ಲಿಂ ಯುವಕರ ಗುಂಪು ಹತ್ಯೆ ಮಾಡಿತ್ತು. ಇದಾದ ಬಳಿಕ ಮೇ 27 ರಂದು ಬಂಟ್ವಾಳದ ಕುರಿಯಾಳ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್ನನ್ನ ಹಿಂದೂ ಯುವಕರು ಹತ್ಯೆ ನಡೆಸಿದ್ದಾರೆ. ಇದನ್ನೂ ಓದಿ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಮೂವರು ಆರೋಪಿಗಳ ಬಂಧನ
ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಿಂದೂ-ಮುಸ್ಲಿಮರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ರಹಿಮಾನ್ ಹತ್ಯೆಯ ಬಳಿಕವಂತು ಜಿಲ್ಲೆಯ ಕಾಂಗ್ರೆಸಿಗರು, ಮುಸ್ಲಿಮರು ಸೇರಿ ಎಲ್ಲರೂ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಕಿಡಿಕಾರಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಂಟ್ರೋಲ್ ಮಾಡಲಾಗದ ಇಬ್ಬರು ಐಪಿಎಸ್ ಅಧಿಕಾರಿಗಳನ್ನ ಏಕಕಾಲದಲ್ಲಿ ವರ್ಗಾವಣೆ ಮಾಡಿದೆ. ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ರನ್ನ ಎತ್ತಂಗಡಿ ಮಾಡಿ ನೂತನ ಕಮೀಷನರ್ ಆಗಿ ಖಡಕ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರನ್ನ ನೇಮಕ ಮಾಡಿದೆ. ಇದನ್ನೂ ಓದಿ: ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ