ಅರ್ಜುನ್ ಗುರೂಜಿ ಆಶೀರ್ವಾದ ಪಡೆದ ಅಭಿಮನ್ಯು!

Public TV
2 Min Read
FotoJet 1 20

ಭಿಮನ್ಯು ಕಾಶಿನಾಥ್ (Abhimanyu Kashinath) ಅಭಿನಯದ ‘ಎಲ್ಲಿಗೆ ಪಯಣ ಯಾವುದೋ ದಾರಿ’ (Ellige Payana Yaavudo Dari) ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಯಶಸ್ವಿ ಪ್ರದರ್ಶನ ಕಾಣುತ್ತಿರುವ ಖುಷಿ ಚಿತ್ರತಂಡದಲ್ಲಿದೆ. ಇದೇ ಹೊತ್ತಿನಲ್ಲಿ ಅಭಿಮನ್ಯು ಕಾಶಿನಾಥ್ ಚಿತ್ರತಂಡದೊಂದಿಗೆ ಮೈಸೂರಿನ ಅವಧೂತ ಅರ್ಜುನ್ ಗುರೂಜಿಯನ್ನು ಭೇಟಿಯಾಗಿದ್ದಾರೆ. ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಅರ್ಜುನ್ ಗುರೂಜಿ ಅಭಿಮನ್ಯು ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳಿತಾಗಲಿ, ಈ ಸಿನಿಮಾ ಇನ್ನಷ್ಟು ಯಶಸ್ಸು ಕಾಣಲೆಂದು ಆಶೀರ್ವಾದ ಮಾಡಿದ್ದಾರೆ.

FotoJet 2 13ಅವಧೂತ ಅರ್ಜುನ್ ಗುರೂಜಿ ಅವರ ನಿವಾಸಕ್ಕೆ ಚಿತ್ರತಂಡದೊಂದಿಗೆ ತೆರಳಿದ್ದ ಅಭಿಮನ್ಯು ಅವರು ತಮ್ಮ ತಂದೆ ಕಾಶಿನಾಥ್ ಅವರ ಹೆಸರು ಅಜರಾಮರವಾಗಲೆಂದು ಬೇಡಿಕೊಂಡಿದ್ದಾರೆ. ನಂತರ ಆಶೀರ್ವಾದ ನೀಡಿದ ಅವಧೂತ ಅರ್ಜುನ್ ಗುರೂಜಿ ಈ ಸಿನಿಮಾ ಸಂಪೂರ್ಣವಾಗಿ ಯಶಸ್ಸು ಗಳಿಸಲೆಂದು ಹಾರೈಸುತ್ತಲೇ, ಯುವ ನಟ ಅಭಿಮನ್ಯು ಕಾಶಿನಾಥ್ ತಮ್ಮ ಸಿನಿಮಾಗಳ ಮೂಲಕ ಯುವ ಜನತೆಗೆ ಉತ್ತಮ ಸಂದೇಶಗಳನ್ನು ದಾಟಿಸವಂತೆ ಆಗಲಿ ಎಂದು ಹರಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ನಟ ಅಭಿಮನ್ಯು  ಅವರೊಂದಿಗೆ ನಾಯಕಿ ಸ್ಫೂರ್ತಿ ಉಡಿಮನೆ, ನಿರ್ದೇಶಕ ಕಿರಣ್ ಎಸ್ ಸೂರ್ಯ ಮತ್ತು ಚಿತ್ರತಂಡ ಭಾಗಿಯಾಗಿತ್ತು.

FotoJet 44
ಸೂಕ್ಷ್ಮ ಕಥೆ ಒಳಗೊಂಡಿರುವ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ದಿನದಿಂದ ದಿನಕ್ಕೆ ಉತ್ತಮ ಪ್ರದರ್ಶನ ನೀಡುತ್ತಿದೆ. ನಾಯಕ ಅಭಿಮನ್ಯು ಕಾಶಿನಾಥ್ ಈ ಸಿನಿಮಾವನ್ನು ಮತ್ತಷ್ಟು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಚಿತ್ರತಂಡದೊಂದಿಗೆ ಸಕ್ರಿಯರಾಗಿದ್ದಾರೆ. ಇದರ ನಡುವಲ್ಲಿಯೇ ಅವಧೂತ ಅರ್ಜುನ್ ಗುರೂಜಿಯನ್ನು ಭೇಟಿಯಾಗುವ ಮೂಲಕ ಆಧ್ಯಾತ್ಮಿಕ ಅನುಭೂತಿಯೊಂದಿಗೆ ಮತ್ತಷ್ಟು ಹುರುಪು ತುಂಬಿಕೊಂಡಿದ್ದಾರೆ. ಇದನ್ನೂ ಓದಿ:ವರ್ಷ ಮೂರು, ಮರೆಯದ ನೆನಪು ನೂರು: ಅಪ್ಪು ನೆನೆದ ರಾಘಣ್ಣ

abhimanyu 1

ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್. ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ.

Share This Article