28 ದಿನಗಳಲ್ಲಿ ಮಾದಪ್ಪನಿಗೆ ಹರಿದು ಬಂತು ಎರಡೂವರೆ ಕೋಟಿ ರೂ.ಗಿಂತಲೂ ಹೆಚ್ಚು ಕಾಣಿಕೆ

Public TV
1 Min Read
Male Mahadeshwara 2

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಮಾ.11ರಂದು ತಡರಾತ್ರಿಯವರೆಗೂ ನಡೆದಿದ್ದು, 28 ದಿನಗಳಲ್ಲಿ ಒಟ್ಟು 2.83 ಕೋಟಿ ರೂ. ಸಂಗ್ರಹವಾಗಿದೆ.

Male Mahadeshwara 3

ಹುಂಡಿ ಎಣಿಕೆ ಕಾರ್ಯದಲ್ಲಿ 300 ಸಿಬ್ಬಂದಿ ಪಾಲ್ಗೊಂಡಿದ್ದರು. ಹೆಚ್ಚಿನ ಮೊತ್ತವಿದ್ದ ಹಿನ್ನೆಲೆ ಶುಕ್ರವಾರ ತಡರಾತ್ರಿ ತನಕ ನಡೆದ ಎಣಿಕೆ ಕಾರ್ಯದಲ್ಲಿ 2,83,12,841 ರೂ. ನಗದು ಸಂಗ್ರಹವಾಗಿದೆ. 73 ಗ್ರಾಂ ಚಿನ್ನ, 3 ಕೆ.ಜಿ 800 ಗ್ರಾಂ ಬೆಳ್ಳಿ ದೊರೆತಿದೆ. ಶಿವರಾತ್ರಿ ಮಹೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ ಕಾಣಿಕೆ ಅರ್ಪಿಸಿದೆ. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

male mahadeshwara 9

ಇದಕ್ಕೂ ಮುನ್ನ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಫೆಬ್ರವರಿ 10ರಂದು ನಡೆದಿತ್ತು. ಆಗ 1.87 ಕೋಟಿ ರೂ. ಸಂಗ್ರಹವಾಗಿತ್ತು. ಇದನ್ನೂ ಓದಿ: ಹೆಚ್‍ಡಿಕೆ ಸದನದಲ್ಲಿ ಸದ್ದು ಮಾಡಿದ್ರೂ ನಿಂತಿಲ್ಲ ಜೂಜಾಟ- ಪೊಲೀಸ್ ಅಧಿಕಾರಿಯೇ ಕಿಂಗ್‍ಪಿನ್

Share This Article
Leave a Comment

Leave a Reply

Your email address will not be published. Required fields are marked *