Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಫೆ.14 ಕ್ಕೆ ಬಿಎಪಿಎಸ್‌ ಹಿಂದೂ ದೇವಾಲಯ ಉದ್ಘಾಟನೆ; ಎಲ್ಲಿ? ದೇವಸ್ಥಾನದ ವೈಶಿಷ್ಟ್ಯವೇನು?

Public TV
Last updated: January 11, 2024 4:51 pm
Public TV
Share
3 Min Read
abu dhabi hindu temple
SHARE

2024 ರ ವರ್ಷ ಹಿಂದೂಗಳಿಗೆ ಹರ್ಷ ತಂದಿದೆ. ಹೊಸ ವರ್ಷದ ಮೊದಲ ತಿಂಗಳಲ್ಲೇ ಅಯೋಧ್ಯೆ ರಾಮಮಂದಿರದಲ್ಲಿ (Ram Mandir) ಪ್ರಾಣ ಪ್ರತಿಷ್ಠಾಪನೆಯ ಸಂತಸ ಒಂದುಕಡೆಯಾದರೆ, 2ನೇ ತಿಂಗಳಲ್ಲಿ ಮುಸ್ಲಿಮರ ನೆಲದಲ್ಲಿ ಮೊಟ್ಟ ಮೊದಲ ಐತಿಹಾಸಿಕ ಹಿಂದೂ ದೇವಾಲಯ ಲೋಕಾರ್ಪಣೆ ಕಣ್ತುಂಬಿಕೊಳ್ಳುವ ಸೌಭಾಗ್ಯ ಹಿಂದೂಗಳಿಗೆ ಒಲಿದು ಬಂದಿದೆ.

ಹೌದು, ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ನಡೆದ ವಾರಗಳ ನಂತರ, ಫೆಬ್ರವರಿ 14 ರಂದು ಹೊರದೇಶದಲ್ಲಿ ಮತ್ತೊಂದು ಮಹತ್ವದ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮುಸ್ಲಿಮರ ನೆಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಮೊದಲ ಬಿಎಪಿಎಸ್ ಹಿಂದೂ ದೇವಾಲಯ (BAPS Hindu Temple) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ದೇವಾಲಯವು ಭಾರತದ ಹೊರಗಿನ ಅತ್ಯಂತ ದೊಡ್ಡ ಮತ್ತು ಅತ್ಯಂತ ಸುಂದರವಾದ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಾಲಯವೂ ಹೌದು. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಕನ್ನಡದ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಹಾಡು ಪ್ರಸಾರ

abu dhabi BAPS hindu temple 1

ಅಷ್ಟಕ್ಕೂ ಅದು ಯಾವ ದೇವಾಲಯ? ಉದ್ಘಾಟನೆಗೊಳ್ಳುತ್ತಿರುವುದು ಎಲ್ಲಿ? ದೇವಾಲಯದ ವೈಶಿಷ್ಟ್ಯವೇನು ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ.

ಅಬುಧಾಬಿಯಲ್ಲಿ ಹಿಂದೂ ದೇವಾಲಯ
ಅರಬ್ ಸಂಯುಕ್ತ ಒಕ್ಕೂಟದ (UAE) ಅಬುಧಾಬಿಯಲ್ಲಿ ಇತಿಹಾಸದಲ್ಲೇ ಮೊದಲ ದೇವಾಲಯ ಉದ್ಘಾಟನೆಯಾಗುತ್ತಿದೆ. ಬಿಎಪಿಎಸ್ ಹಿಂದೂ ದೇವಾಲಯವು ಅಬು ಮುರೇಖಾ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಹಿಂದೂ ದೇವಾಲಯ ಇದೇ ಫೆಬ್ರವರಿ 14 ರಂದು ಲೋಕಾರ್ಪಣೆಗೊಳ್ಳಲಿದೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ ಹರಿದುಬಂದ ದೇಣಿಗೆ ಎಷ್ಟು? ಅತಿ ಹೆಚ್ಚು ದೇಣಿಗೆ ಕೊಟ್ಟವರ‍್ಯಾರು ಗೊತ್ತಾ?

ಇಂದಿರಾ ಗಾಂಧಿ ಬಳಿಕ ಯುಎಇಗೆ ಭೇಟಿ ನೀಡಿದ ಮೊದಲ ಪ್ರಧಾನಿ
2015 ರಲ್ಲಿ ಪ್ರಧಾನಿ ಮೋದಿಯವರು ಯುಎಇಗೆ ಮೊದಲ ಭೇಟಿ ನೀಡಿದ ಸಂದರ್ಭದಲ್ಲಿ, ಯುಎಇ ಅಬುಧಾಬಿಯಲ್ಲಿ (Abu Dhabi) ದೇವಾಲಯವನ್ನು ನಿರ್ಮಿಸಲು ಜಾಗ ಮಂಜೂರು ಮಾಡಲು ನಿರ್ಧರಿಸಲಾಯಿತು. ಪ್ರಧಾನಮಂತ್ರಿಯವರ ಭೇಟಿಯು ರಾಜತಾಂತ್ರಿಕವಾಗಿ ನಿರ್ಣಾಯಕವಾಗಿತ್ತು. ಏಕೆಂದರೆ ಅವರು ಇಂದಿರಾ ಗಾಂಧಿಯವರ ನಂತರ 34 ವರ್ಷಗಳಲ್ಲಿ ಈ ಕೊಲ್ಲಿ ರಾಷ್ಟ್ರಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ.

abu dhabi BAPS hindu temple 2

700 ಕೋಟಿ ರೂ. ವೆಚ್ಚ
ಫೆಬ್ರವರಿ 2018 ರಲ್ಲಿ ಪ್ರಧಾನ ಮೋದಿ ಅವರು ದೇವಾಲಯದ ಯೋಜನೆ ಉದ್ಘಾಟಿಸಿದ್ದರು. ಡಿಸೆಂಬರ್ 2019 ರಲ್ಲಿ ನಿರ್ಮಾಣ ಪ್ರಾರಂಭವಾಯಿತು. ದೇವಾಲಯವನ್ನು 5.4 ಹೆಕ್ಟೇರ್ ಭೂಮಿ ಜಾಗದಲ್ಲಿ ನಿರ್ಮಿಸಲಾಗುತ್ತಿದೆ. 700 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ.

ದೇವಸ್ಥಾನದ ವೈಶಿಷ್ಟ್ಯ ಏನು?
ವಿಶಾಲವಾದ ಸಂಕೀರ್ಣದಲ್ಲಿ ದೇವಾಲಯ ಅಷ್ಟೇ ಅಲ್ಲ, ದೊಡ್ಡ ಆಂಫಿಥಿಯೇಟರ್, ಗ್ಯಾಲರಿ, ಗ್ರಂಥಾಲಯ, ಫುಡ್ ಕೋರ್ಟ್, ಮಜ್ಲಿಸ್ ಮತ್ತು 5,000 ಜನರಿಗೆ ಸ್ಥಳಾವಕಾಶವಿರುವ ಎರಡು ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಉದ್ಯಾನಗಳು ಮತ್ತು ಮಕ್ಕಳಿಗಾಗಿ ಆಟದ ಮೈದಾನ ಕೂಡ ಮಾಡಲಾಗಿದೆ. ಇದು ಸಂಕೀರ್ಣವಾಗಿ ವಿನ್ಯಾಸಗೊಳಿಸಲಾದ ಗುಲಾಬಿ ಮರಳುಗಲ್ಲು ಮತ್ತು ಅಮೃತಶಿಲೆಯ ಮುಂಭಾಗವನ್ನು ಏಳು ಗೋಪುರಗಳೊಂದಿಗೆ ಸಂಯೋಜಿಸುತ್ತದೆ. ಅದು ದೇಶದ ಪ್ರತಿಯೊಂದು ಎಮಿರೇಟ್ಸ್ ಅನ್ನು ಪ್ರತಿನಿಧಿಸುತ್ತದೆ. ದೇವಾಲಯವನ್ನು 40,000 ಕ್ಯೂಬಿಕ್ ಮೀಟರ್ ಅಮೃತಶಿಲೆ, 1,80,000 ಘನ ಮೀಟರ್ ಮರಳುಗಲ್ಲು ಮತ್ತು 18 ಲಕ್ಷ ಇಟ್ಟಿಗೆಗಳನ್ನು ಬಳಸಿ ನಿರ್ಮಿಸಲಾಗಿದೆ. ಇದನ್ನೂ ಓದಿ: ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ

ದೇವಾಲಯದ ವಿನ್ಯಾಸವು ವೈದಿಕ ವಾಸ್ತುಶಿಲ್ಪ ಮತ್ತು ಶಿಲ್ಪಗಳಿಂದ ಸ್ಫೂರ್ತಿ ಪಡೆದಿದೆ. ಅನೇಕ ಪ್ರತಿಮೆಗಳು ಮತ್ತು ಕೆತ್ತನೆಗಳನ್ನು ಭಾರತದ ಕುಶಲಕರ್ಮಿಗಳು ಮಾಡಿದ್ದಾರೆ. ಅವುಗಳನ್ನು ಅಬುಧಾಬಿಗೆ ರವಾನಿಸಲಾಗಿದೆ. 2024 ರ ಫೆಬ್ರುವರಿ 14 ರಂದು ಪವಿತ್ರವಾದ ವಸಂತ ಪಂಚಮಿಯಂದು ದೇವಾಲಯದ ಪವಿತ್ರೀಕರಣವನ್ನು ನಿಗದಿಪಡಿಸಲಾಗಿದೆ.

abu dhabi BAPS hindu temple 3

ಬಿಎಪಿಎಸ್ ಎಂದರೇನು?
ಬಿಎಪಿಎಸ್ ಎಂದರೆ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್). 1700 ರ ದಶಕದ ಉತ್ತರಾರ್ಧದಲ್ಲಿ ವಾಸಿಸುತ್ತಿದ್ದ ಧಾರ್ಮಿಕ ಮುಖಂಡ ಭಗವಾನ್ ಸ್ವಾಮಿನಾರಾಯಣ ಅವರ ಹೆಸರನ್ನು ಈ ಸಂಸ್ಥೆಗೆ ಇಡಲಾಗಿದೆ. ಇದು ವೇದಗಳಲ್ಲಿ ಬೇರುಗಳನ್ನು ಹೊಂದಿರುವ ಸಾಮಾಜಿಕ-ಆಧ್ಯಾತ್ಮಿಕ ಹಿಂದೂ ನಂಬಿಕೆಯಾಗಿದೆ. ಇದನ್ನು 18 ನೇ ಶತಮಾನದ ಕೊನೆಯಲ್ಲಿ ಭಗವಾನ್ ಸ್ವಾಮಿನಾರಾಯಣ (1781-1830) ಪ್ರವರ್ತಿಸಿದರು. 1907 ರಲ್ಲಿ ಶಾಸ್ತ್ರೀಜಿ ಮಹಾರಾಜ್ (1865-1951) ಸ್ಥಾಪಿಸಿದರು.

ಬಿಎಪಿಎಸ್ ಪ್ರಪಂಚದಾದ್ಯಂತ 3,850 ಕೇಂದ್ರಗಳನ್ನು ಹೊಂದಿದೆ. ಆ ಮೂಲಕ 1,100 ದೇವಾಲಯಗಳನ್ನು ನಡೆಸುತ್ತಿದೆ. ಈ ಸಂಸ್ಥೆಯು ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆಯಲ್ಲಿರುವ ಅಕ್ಷರಧಾಮದ ಹಿಂದೆಯೂ ಇತ್ತು. ಇದು ಭಾರತದ ಹೊರಗೆ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯವಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ತಲುಪಿತು 2,400 ಕೆ.ಜಿಯ ದೇಶದ ಅತೀ ದೊಡ್ಡ ಘಂಟೆ

ನ್ಯೂಯಾರ್ಕ್ ನಗರದ ದಕ್ಷಿಣಕ್ಕೆ 99 ಕಿಲೋಮೀಟರ್ ದೂರದಲ್ಲಿರುವ ಅಕ್ಷರಧಾಮ ಮಹಾಮಂದಿರವು ನ್ಯೂಜೆರ್ಸಿಯಲ್ಲಿ 185 ಎಕರೆ ಪ್ರದೇಶದಲ್ಲಿದೆ. ಅಲ್ಲದೇ 191 ಅಡಿ ಎತ್ತರವಿದೆ. ಬಲ್ಗೇರಿಯಾ, ಇಟಲಿ, ಗ್ರೀಸ್, ಟರ್ಕಿ ಮತ್ತು ಭಾರತ ಸೇರಿದಂತೆ ಪ್ರಪಂಚದಾದ್ಯಂತ 29 ಕ್ಕೂ ಹೆಚ್ಚು ವಿವಿಧ ಸ್ಥಳಗಳಿಂದ 1.9 ಮಿಲಿಯನ್ ಘನ ಅಡಿ ಕಲ್ಲುಗಳನ್ನು ತಂದು ದೇವಾಲಯ ನಿರ್ಮಿಸಲಾಯಿತು. ದೆಹಲಿ ಮತ್ತು ಗುಜರಾತ್‌ನಲ್ಲಿರುವ ಅಕ್ಷರಧಾಮ ದೇವಾಲಯಗಳನ್ನು ಸಹ ಬಿಎಪಿಎಸ್ ಸಂಸ್ಥೆ ನಡೆಸುತ್ತಿದೆ.

TAGGED:abu dhabiBAPS Hindu Templenarendra modiuaeಅಬುಧಾಬಿನರೇಂದ್ರ ಮೋದಿಬಿಎಪಿಎಸ್‌ ಹಿಂದೂ ದೇವಾಲಯಯುಎಇ
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
9 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
9 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
10 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
11 hours ago

You Might Also Like

mumbai indians
Cricket

IPL: 121 ಕ್ಕೆ ಡೆಲ್ಲಿ ಆಲೌಟ್‌ – ಪ್ಲೇ-ಆಫ್‌ಗೆ ಮುಂಬೈ ಲಗ್ಗೆ

Public TV
By Public TV
6 hours ago
IndiGo Flight Damege
Latest

ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

Public TV
By Public TV
6 hours ago
Narendra Modi
Latest

ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

Public TV
By Public TV
6 hours ago
Karnataka elephants to andhra pradesh
Bengaluru City

ಆಂಧ್ರಕ್ಕೆ 4 ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ಕರ್ನಾಟಕ

Public TV
By Public TV
7 hours ago
m.a.saleem
Bengaluru City

ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Public TV
By Public TV
7 hours ago
lokayukta raid 1
Bengaluru City

NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?