ಬೆಂಗಳೂರು: ಬೆಂಗಳೂರು ವಿವಿಯಲ್ಲಿ ಸರಣಿ ಪ್ರತಿಭಟನೆಗಳಿಂದ ಅವಾಂತರಗಳು ನಡೆದ ಬೆನ್ನಲ್ಲೇ ಬೆಂಗಳೂರು ವಿವಿ ಕುಲಸಚಿವರು ಮಹತ್ವದ ಆದೇಶ ಹೊರಡಿಸಿದ್ದಾರೆ. ರಾಜಕೀಯ ಸಂಘಟನೆಗಳಾದ ಎಬಿವಿಪಿ, ಎನ್ಎಸ್ಯುಐ, ಎಸ್ಎಫ್ಐ ಸೇರಿ ಯಾವುದೇ ಬಾಹ್ಯ ಸಂಘಟನೆಗಳಿಗೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಸುತ್ತೋಲೆ ಹೊರಡಿಸಿದ್ದಾರೆ.
- Advertisement 2
ಸದ್ಯ ಕೊರೊನಾ ಕಾರಣದಿಂದ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ. ಕೊರೊನಾ ಕಡಿಮೆ ಆದ ನಂತರ ಏನೇ ಸಮಸ್ಯೆಯಿದ್ದರೂ ಸಂಶೋಧನಾ & ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟ ಮಾತ್ರ ಪ್ರತಿಭಟನೆ ನಡೆಸಬಹುದು ಎಂದಿದೆ. ಅಲ್ಲದೆ ರಾಜಕೀಯ ಪಕ್ಷಗಳ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳ ಫ್ಲೆಕ್ಸ್, ಬ್ಯಾನರ್ಗೂ ನಿಷೇಧವಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದನ್ನು ಎಬಿವಿಪಿ ತೀವ್ರವಾಗಿ ವಿರೋಧಿಸಿ ಆದೇಶ ವಾಪಸ್ ತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಮಾರಾಮಾರಿ – ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
- Advertisement 3
- Advertisement 4
ಕಳೆದೆರಡು ದಿನಗಳ ಹಿಂದೆ ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದನ್ನೂ ಓದಿ: ಪಂಚಮಸಾಲಿ ಸಮುದಾಯದಲ್ಲಿ ಕಲಹ – ನಿರಾಣಿ ಕೊಟ್ಟ ವಸ್ತು ಮರಳಿಸಲು ಮುಂದಾದ ಸ್ವಾಮೀಜಿ
ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನವಾದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇತ್ತ ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮಾರಾಮಾರಿ ನಡೆದಿದೆ.
ಗಲಾಟೆ ವೇಳೆ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಸಂಶೋಧನಾ ವಿವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಎರಡೂ ವಿದ್ಯಾರ್ಥಿ ಸಂಘಟನೆಗಳ ಸದಸ್ಯರ ನಡುವೆ ವಾಗ್ವಾದ ನಡೆದು ಜಗಳವಾಗಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದರು.