ಅಪಘಾತದಲ್ಲಿ ಸಿಲುಕಿದ್ದ ಚಾಲಕನ ರಕ್ಷಿಸಲು ಹೋದ ಯುವಕ ಸಾವು

Public TV
1 Min Read
ACCIDENT

ಬೆಂಗಳೂರು: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎಸಿ ಸ್ಲೀಪರ್ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ಈ ಘಟನೆ ಸಂಭವಿಸಿದೆ. ಬಸ್ ಅಪಘಾತದಲ್ಲಿ ಕಬ್ಬಿಣದ ಸರಳುಗಳ ನಡುವೆ ಸಿಲುಕಿದ್ದ, ಚಾಲಕನ ರಕ್ಷಣೆ ಮಾಡಲು ಹೋದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಮಲ್ಲೇಶ್ (25) ಮೃತಪಟ್ಟಿರುವ ದುರ್ದೈವಿ.

ತುಮಕೂರು ಮಾರ್ಗದಲ್ಲಿ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಗೆ ಸೇರಿದ ಎಸಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ತಕ್ಷಣ ಹೆದ್ದಾರಿ ರಸ್ತೆಯಿಂದ ನೀಲಿಗಿರಿ ತೋಪಿಗೆ ನುಗ್ಗಿದ ಬಸ್ ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಾಲಕನ ರಕ್ಷಣೆ ಮಾಡಲು ಹೋದ ಯುವಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಬಸ್ ಚಾಲಕನನ್ನ ಆಸ್ಪತ್ರೆಗೆ ಸೇರಿಸಲಾಗಿದೆ.

ಬಸ್‍ನಲ್ಲಿ ಸುಮಾರು 35 ಪ್ರಯಾಣಿಕರಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

NML ACCDENT AV 14

NML ACCDENT AV 11

NML ACCDENT AV 10

NML ACCDENT AV 8

NML ACCDENT AV 7

NML ACCDENT AV 5

NML ACCDENT AV 4

NML ACCDENT AV 3

NML ACCDENT AV 2

NML ACCDENT AV 1

Share This Article
Leave a Comment

Leave a Reply

Your email address will not be published. Required fields are marked *