ರಕ್ತಚಂದನ ಕಳ್ಳರ ಮೇಲೆ ದಾಳಿ- ತಹಶೀಲ್ದಾರ್‌ಗೆ ಡಿವೈಎಸ್‍ಪಿಯಿಂದ ನಿಂದನೆ

Public TV
1 Min Read
CNG copy 1

ಚಾಮರಾಜನಗರ: ರಕ್ತಚಂದನ ಮರವನ್ನು ಕಡಿಯುವ ವಿಷಯದಲ್ಲಿ ಎಸಿಬಿ ವಿಭಾಗದ ಡಿವೈಎಸ್‍ಪಿ, ತಹಶೀಲ್ದಾರ್‌ಗೆ ಬಾಯಿಗೆ ಬಂದಂತೆ ನಿಂದಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಸರ್ಕಾರಿ ಜಮೀನಿನಲ್ಲಿ ರಕ್ತ ಚಂದನ ಮರ ಕಡಿಯುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರೊಬೇಷನರಿ ತಹಶೀಲ್ದಾರ್ ಸುದರ್ಶನ್ ಅವರು ಗ್ರಾಮ ಸಹಾಯಕನನ್ನು ಸ್ಥಳಕ್ಕೆ ಪರಿಶೀಲನೆಗೆ ಕಳುಹಿಸಿದ್ದರು. ಈ ವೇಳೆ ಎಸಿಬಿ ಡಿವೈಎಸ್‍ಪಿ ಪಿ ಪ್ರಸಾದ್ ಅವರು ಸ್ಥಳಕ್ಕೆ ಬಂದ ಗ್ರಾಮ ಸಹಾಯಕರನ್ನು ಕರೆದು ಕ್ಲಾಸ್ ತಗೊಂಡಿದ್ರು. ಅಲ್ಲದೇ ತಹಶೀಲ್ದಾರ್ ಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

VNG 1 copy

ಮರವಿದ್ದ ಜಾಗದ ಪಕ್ಕದಲ್ಲೇ ಚಿಕ್ಕಬಳ್ಳಾಪುರ ಎಸಿಬಿ ಡಿವೈಎಸ್‍ಪಿ ಪಿ ಪ್ರಸಾದ್‍ರ ಜಮೀನು ಇದ್ಯಂತೆ. ಹೀಗಾಗಿ ತಹಶೀಲ್ದಾರ್‌ಗೆ ಪೊಲೀಸ್ ಅಧಿಕಾರಿ ಪ್ರಸಾದ್ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಠಾಣೆಯಲ್ಲಿ ಡಿವೈಎಸ್‍ಪಿ ಪ್ರಸಾದ್ ವಿರುದ್ಧ ತಹಶೀಲ್ದಾರ್ ದೂರು ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *