ಗದಗ: ಮದುವೆಗೆ ಮುಗಿಸಿಕೊಂಡು ಗ್ರಾಮಕ್ಕೆ ಮರಳಬೇಕಿದ್ದ ಮಗು ಹಾಗೂ ಓರ್ವ ಮಹಿಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಬಳಿ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕೊಂಗವಾಡ ಗ್ರಾಮದ ಪಂಚಾಕ್ಷರಯ್ಯ (3) ಹಾಗೂ ಅಕ್ಕಮ್ಮ (44) ಮೃತ ದುರ್ದೈವಿಗಳು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಕೊಂಗವಾಡದಿಂದ ಕ್ರೂಸರ್ ನಲ್ಲಿ ಗಜೇಂದ್ರಗಡದ ಕಾಲಕಾಲೇಶ್ವರ ದೇವಸ್ಥಾನದಲ್ಲಿದ್ದ ಮದುವೆಗೆ ಹೋಗಿ, ಅಲ್ಲಿಂದ ಮರಳುತ್ತಿದ್ದರು. ಸೂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅತಿಯಾದ ವೇಗವೇ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.