ಶಿವಮೊಗ್ಗ: ಬೊಲೆರೋ ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ.
ಬಾಳೆಕೊಪ್ಪ ಗ್ರಾಮದ ನಿವಾಸಿಗಳಾದ ಗಿರೀಶ್ (23) ಅವಿನಾಶ್ (25) ಮೃತ ದುರ್ದೈವಿಗಳು. ಬೈಕ್ಗೆ ಡಿಕ್ಕಿ ಹೊಡೆದ ನಂತರ ಬೊಲೆರೋ ವಾಹನ ಪಲ್ಟಿಯಾಗಿದೆ. ಘಟನೆ ನಂತರ ಬೊಲೆರೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ತಾಯಿ ಶವದೊಂದಿಗೆ 10 ದಿನ ಮನೆಯಲ್ಲೇ ಕಾಲ ಕಳೆದ ಮಗಳು
ಬೊಲೆರೋ ವಾಹನ ಸಾಗರದಿಂದ ರಾಣಿಬೆನ್ನೂರಿಗೆ ಮೀನು ಸಾಗಿಸುತ್ತಿತ್ತು. ಬೈಕ್ ಸವಾರರು ಶಿವಮೊಗ್ಗದಿಂದ ತಮ್ಮ ಸ್ವಗ್ರಾಮ ಬಾಳೆಕೊಪ್ಪಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿನ್ನ ಹೆಸರು ಮೊಹಮ್ಮದ್? – ಬಿಜೆಪಿ ಮಾಜಿ ಕಾರ್ಪೊರೇಟರ್ ಪತಿಯಿಂದ ಹಲ್ಲೆಗೊಳಗಾದ ವೃದ್ಧ ಸಾವು