ಮಡಿಕೇರಿ: ಮಡಿಕೇರಿ ದಸರಾ (Mdikeri Dasara) ದಶಮಂಟಪಗಳ ಶೋಭಯಾತ್ರೆ (Procession) ವೇಳೆ ಮಂಟಪವೊಂದರ ಟ್ರಾಕ್ಟರ್ (Tractor) ಮಗುಚಿ ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ.
ಶೋಭಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತ್ತು. ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ಬುಧವಾರ ನಸುಕಿನ ಜಾವ 3:30ರ ವೇಳೆ ಮಗುಚಿದೆ. ಇದರಿಂದ ಮೂವರಿಗೆ ಗಾಯಗಳಾಗಿವೆ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಅಪಾರ ನೂಕುನುಗ್ಗಲು ಉಂಟಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಪರದಾಡಿದರು. ಇದನ್ನೂ ಓದಿ: ಕೋಲಿನಿಂದ ಹೊಡೆದಾಡೋ ಜಾತ್ರೆ- ಮೂವರ ಸ್ಥಿತಿ ಗಂಭೀರ, ನೂರಕ್ಕೂ ಹೆಚ್ಚು ಮಂದಿಗೆ ಗಾಯ
ಈ ಕುರಿತು ಪ್ರತಿಕ್ರಿಯಿಸಿದ ದೇಗುಲ ಸಮಿತಿಯ ಸದಸ್ಯರೊಬ್ಬರು, ದೇಗುಲದ ಸಮೀಪ ಹಾಗೂ ಮೆರವಣಿಗೆಯಲ್ಲಿ ಒಟ್ಟು ಎರಡು ಪ್ರದರ್ಶನ ನೀಡಿದ್ದೆವು. ನಸುಕಿನ ಜಾವ 4 ಗಂಟೆಗೆ ತೀರ್ಪುಗಾರರ ಮುಂದೆ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಆ ಸ್ಥಳ ತಲುಪುವ ಮುನ್ನ ಟ್ರಾಕ್ಟರ್ ಮಗುಚಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಚೇರಿ ಲಾಕರ್ನಲ್ಲಿದ್ದ 1.24 ಕೋಟಿ ಕಳವು
Web Stories