ಬೆಂಗಳೂರು: ಕಾರು ಮತ್ತು ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ.
ಕಾರು ಹಾಸನದಿಂದ ನೆಲಮಂಗಲದ ಕಡೆಗೆ ಬರುತಿತ್ತು. ಆದರೆ ಯಂಟಗಾನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಎರಡು ಬೈಕುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದವರು ಮತ್ತು ಬೈಕ್ ಸವಾರರು ಸೇರಿ ಎಂಟು ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಜಖಂ ಆಗಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿವರಾತ್ರಿ ಹಬ್ಬದ ದಿನವೇ ತಡರಾತ್ರಿ ಆದಿಚುಂಚನಗಿರಿಯ ಕಾಲಭೈರವೇಶ್ವರನ ದರ್ಶನಕ್ಕೆ ತೆರಳಿದ್ದ ಕುಟುಂಬ ವಾಪಸ್ ಬೆಂಗಳೂರಿಗೆ ಬರುತಿತ್ತು. ಆಗ ಭೀಕರ ಅಪಘಾತದ ಸಂಭವಿಸಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ್ದರು. ಈಗ ಇಂದು ಅದೇ ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಈ ಅಪಘಾತ ನೆಲಮಂಗಲ ಸಂಚಾರಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv