ಬೆಂಗಳೂರು: ಆಕಸ್ಮಿಕವಾಗಿ ಬೆಂಕಿ ಹೊತ್ತಿ ಸಂಪೂರ್ಣ ಮನೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಹೊರವಲಯ ನೆಲಮಂಗಲ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
- Advertisement 2
ಗ್ರಾಮದ ರೈತ ಬೆಟ್ಟಯ್ಯ ಎಂಬುವರಿಗೆ ಸೇರಿದ ಮನೆ ಇದಾಗಿತ್ತು. ಬೇಸಿಗೆ ಆರಂಭದಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಹುಲ್ಲಿನ ಬಣವೆಗೆ ಬೆಂಕಿ ತಗುಲಿದೆ. ನಂತರ ರೈತನ ಮನೆಯನ್ನ ಬೆಂಕಿ ಆವರಿಸಿ ನೋಡುನೋಡುತ್ತಲೇ, ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಘಟನೆಯಿಂದ ರೈತ ಕುಟುಂಬ ಕಂಗಾಲಾಗಿದೆ. ಇನ್ನೂ ಈ ಘಟನೆಗೆ ಕಾರಣ ಮನೆಯ ಪಕ್ಕದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ತಗುಲಿದ ನಂತರ ಮನೆಗೆಲ್ಲಾ ವ್ಯಾಪಿಸಿದೆ. ಇದನ್ನೂ ಓದಿ: ಸಮಾನತೆಯ ಸಂದೇಶದೊಂದಿಗೆ ವಿದ್ಯಾರ್ಥಿನಿಯರಿಂದ ಬೈಕ್ ರ್ಯಾಲಿ
- Advertisement 3
- Advertisement 4
ಅದೃಷ್ಟವಶಾತ್ ಯಾವುದೇ ಅವಗಢ ಸಂಭವಿಸಿಲ್ಲ. ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ. ನಂತರ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿ ತಹಬದಿಗೆ ತರಲಾಯಿತು. ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.