ಚಿಕ್ಕಮಗಳೂರು: ಕಡೂರು (Kaduru) ಪಟ್ಟಣದ ಕಲ್ಲುಗುಂಡಿಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಶೇಖರಿಸಿದ್ದ ವ್ಯಕ್ತಿಯನ್ನು ಚಿಕ್ಕಮಗಳೂರು (Chikkamagaluru)ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಆರೋಪಿ ಕಲ್ಲು ಕೊರೆಗಳಲ್ಲಿ ಸೈಜ್ ಬಳಸುವ 388 ಜಿಲೆಟಿನ್ ಪೆಸ್ಟ್ ಟ್ಯೂಬ್, 250 ಅಡಿ ಬತ್ತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ. ಪೊಲೀಸರು ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದು, ಆತನನ್ನು ಬಂಧಿಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪಿಯುಸಿ ಹುಡುಗನ ಮದುವೆಯಾದ ಮೂರು ಮಕ್ಕಳ ತಾಯಿ!
ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತನ್ನ ಮಗಳನ್ನು ಮದುವೆಯಾಗಬೇಕಿದ್ದ ಭಾವಿ ಅಳಿಯನೊಂದಿಗೆ ಮಹಿಳೆ ಜೂಟ್