ಬೆಂಗಳೂರು: ಚಾಮರಾಜಪೇಟೆ ಮಾಜಿ ಕಾರ್ಪೊರೇಟರ್ ಪತಿ ಅಯೂಬ್ ಖಾನ್ ಹತ್ಯೆ ಆರೋಪಿ ಮತೀನ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಇದೇ ತಿಂಗಳ ಜುಲೈ 13ರಂದು ಅಯೂಬ್ ಖಾನ್ ಹತ್ಯೆ ಮಾಡಲಾಗಿತ್ತು. 4 ದಿನಗಳಿಂದ ಮಂಡ್ಯ, ರಾಮನಗರ, ಕೋಲಾರ ಸೇರಿದಂತೆ ಹಲವು ಕಡೆಗಳಲ್ಲಿ ಸುತ್ತಾಡಿಕೊಂಡು ಆರೋಪಿ ಮತೀನ್ ಖಾನ್ ತಲೆಮರೆಸಿಕೊಂಡಿದ್ದ. ನಂತರ ನಾಜೀಮಾ ಖಾನ್ ಹಂತಕರ ತಲೆಗೆ 10 ಕೋಟಿ ಆಫರ್ ನೀಡಿರುವ ಬಗ್ಗೆ ವಿಡಿಯೋವೊಂದನ್ನು ಹರಿಬಿಟ್ಟಿದ್ದ. ಇದೀಗ ಕೆಂಗೇರಿ ಬಳಿ ಪೊಲೀಸರು ಮತೀನ್ ಖಾನ್ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಂತ್, ಪಾಂಡ್ಯ ಪರಾಕ್ರಮ ಭಾರತಕ್ಕೆ ಏಕದಿನ ಸರಣಿ – ಇಂಗ್ಲೆಂಡ್ಗೆ ತವರಿನಲ್ಲಿ ಮುಖಭಂಗ
ಏನಿದು ಘಟನೆ?
ಜುಲೈ 13 ರಂದು ಬೆಂಗಳೂರಿನ ಚಾಮರಾಜಪೇಟೆ ಬಳಿಯ ಟಿಪ್ಪು ನಗರದ ಮಾಜಿ ಕಾರ್ಪೋರೇಟರ್ ನಾಜಿಮಾ ಖಾನ್ ಪತಿ ಅಯೂಬ್ ಖಾನ್ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಖುದ್ದು ಅಯೂಬ್ ಖಾನ್ ಅಣ್ಣನ ಮಗ ಮತೀನ್ ಖಾನ್ ಚಾಕು ಇರಿದಿದ್ದ. ನಡುರಸ್ತೆಯಲ್ಲೇ ಕುಸಿದುಬಿದ್ದಿದ್ದ ಆಯೂಬ್ ಖಾನ್ನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರೂ ಬದುಕುಳಿಯಲಿಲ್ಲ. ಇದನ್ನೂ ಓದಿ: ಪರಿಹಾರದ ಹಣ ಪಡೆಯಲು ಜನರು ಉದ್ದೇಶಪೂರ್ವಕವಾಗಿ ಮನೆ ಬೀಳಿಸುತ್ತಿದ್ದಾರೆ – ತಹಶೀಲ್ದಾರ್ ಪತ್ರ ತಂದ ಅನುಮಾನ
ನಂತರ ಪತಿಯ ಹತ್ಯೆ ಖಂಡಿಸಿದ ಪತ್ನಿ ನಾಜೀಮಾ ಖಾನ್ ತನ್ನ ಪತಿ ಹಂತಕರ ತಲೆ ಕಡಿದವರಿಗೆ 10 ಕೋಟಿ ಕೊಡುವುದಾಗಿ ಘೋಷಿಸಿದ್ದರು. ಇದಕ್ಕೆ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಒಂದಷ್ಟು ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದ ಮತೀನ್ ಖಾನ್ `ಹತ್ತಾರು ವರ್ಷಗಳಿಂದ ಮಸೀದಿಯನ್ನು ಅಭಿವೃದ್ದಿ ಮಾಡಿದ್ದೆ, ಅಧ್ಯಕ್ಷ ಸ್ಥಾನ ಕೊಡ್ತಿನಿ ಅಂದಿದ್ದ ಚಿಕ್ಕಪ್ಪ ಅಯೂಬ್ ಖಾನ್ ಕೊನೆ ಕ್ಷಣದಲ್ಲಿ ತನ್ನ ಮಗನನ್ನು ಅಧ್ಯಕ್ಷನಾಗಿ ಮಾಡಿದ್ದ. ಆಗಲೂ ನಾನು ಸುಮ್ಮನಿದ್ದೆ. ಆದರೆ ಅಯೂಬ್ ಖಾನ್ಗೆ ನಾನು ಏರಿಯಾದಲ್ಲಿರೋದು ಇಷ್ಟ ಇರಲಿಲ್ಲ. ಇದೇ ಕಾರಣಕ್ಕೆ ಗಲಾಟೆ ತೆಗೆದು ನನಗೆ ತೊಂದರೆ ಕೊಡ್ತಿದ್ದ. ಕೊಲೆಯಾದ ದಿನ ಕೂಡ ಅಯೂಬ್ ಖಾನ್ ಮತ್ತು ಮಗ ಇಬ್ಬರು ನನ್ನ ಮೇಲೆ ಲಾಂಗ್ನಿಂದ ಹಲ್ಲೆ ಮಾಡೋಕೆ ಮುಂದಾದ್ರು. ಪ್ರಾಣ ರಕ್ಷಣೆ ವೇಳೆ ಚಾಕು ತಗುಲಿ ಅಯೂಬ್ ಖಾನ್ ಮೃತಪಟ್ಟರು. ಅಯೂಬ್ ಖಾನ್ ಹೆಂಡತಿ ನಾಜೀಮಾ, ನನ್ನ ತಲೆ ಕಡಿದು ತಂದವರಿಗೆ ಹತ್ತು ಕೋಟಿ ಕೊಡ್ತೀನಿ ಅಂತಾ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದಾರೆ. ಆ 10 ಕೋಟಿನಾ, ಯಾರಿಗೆ ಕೊಡ್ತೀರಿ ಹೇಳಲಿ, ದರ್ಗಾದವರಿಗೆ, ನನ್ನ ಕುಟುಂಬದವರಿಗೆ ಕೊಡ್ತೀರಾ? ಒಂದು ಕೆಲಸ ಮಾಡಿ ಶಾಸಕ ಜಮೀರ್ ಅಹಮದ್ ಖಾನ್ಗೆ ಕೊಡಲಿ, ನಾನೇ ತಲೆ ಕಡಿದುಕೊಳ್ತೀನಿ’ ಎಂದು ಘೋಷಣೆ ಮಾಡಿದ್ದ.