ಆ್ಯಸಿಡ್ ಆರೋಪಿಗೆ ಎನ್‍ಕೌಂಟರ್ ಮಾಡಿ, ನರಳಿ ನರಳಿ ಸಾಯ್ಬೇಕು- ಸಂತ್ರಸ್ತೆ ಪೋಷಕರ ಆಗ್ರಹ

Public TV
2 Min Read
ACID GIRL FAMILY

ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಕೊಂಚ ಚೇತರಿಸಿಕೊಂಡಿದ್ದಾಳೆ. ಆದರೆ ಕಳೆದ 16 ದಿನಗಳಿಂದ ನರಳಾಡ್ತಿದ್ದಾಳೆ. ಇತ್ತ ದಾಳಿಕೋರನಿಗೆ ತಕ್ಕ ಶಿಕ್ಷೆ ಆಗ್ಬೇಕು ಅಂತ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಆರೋಪಿಯನ್ನು ಚಿತ್ರಹಿಂಸೆ ನೀಡಿ ಸಾಯಿಸ್ಬೇಕು ಅಂತ ಕುಟುಂಬಸ್ಥರು ಆಗ್ರಹಿಸ್ತಿದ್ದಾರೆ.

ACID GIRL FAMILY 3

ಹೌದು. 16 ದಿನಗಳ ಬಳಿಕ ಆ್ಯಸಿಡ್ ಸೈಕೋ ನಾಗೇಶ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತ ಮಗಳ ಸ್ಥಿತಿ ಕಂಡು ಕಣ್ಣೀರಲ್ಲಿ ಕೈತೊಳೆಯುತ್ತಿರುವ ಯುವತಿಯ ಕುಟುಂಬಸ್ಥರು ಆ್ಯಸಿಡ್ ನಾಗನಿಗೆ ತಕ್ಕ ಶಿಕ್ಷೆ ಆಗಬೇಕು. ಅವನು ಒಂದೇ ಸಲ ಅಲ್ಲ, ನರಳಿ ನರಳಿ ಸಾಕಬೇಕು. ಅಂತಹ ಶಿಕ್ಷೆ ಕೊಡಿ ಅಂತ ಆಗ್ರಹಿಸಿದ್ದಾರೆ.

ACID GIRL FAMILY 4

ಆ್ಯಸಿಡ್ ಸಂತ್ರಸ್ತೆಯ ಕುಟುಂಬಸ್ಥರು ಪಬ್ಲಿಕ್ ಟಿವಿ ಜೊತೆ ತಮ್ಮ ನೋವು ಹಂಚಿಕೊಂಡಿದ್ದಾರೆ. ಯುವತಿಯ ದೊಡ್ಡಮ್ಮ ಮಾತಾಡಿ, ಚಾಮುಂಡಿ ಮಹಿಷಾಸುರನ ಕೊಂದ ಹಾಗೆ ಆ್ಯಸಿಡ್ ನಾಗನನ್ನ ಕೊಲ್ಲಬೇಕು. ಒಂದೇ ಸಲ ಸಾಯಿಸಬೇಡಿ, ನಮ್ಮ ಮಗಳ ನೋವು ಅವನಿಗೂ ಗೊತ್ತಾಗಬೇಕು. ಅವನಿಗೆ ಕ್ರೂರಾತೀ ಕ್ರೂರ ಶಿಕ್ಷೆ ಕೊಡಬೇಕು ಅಂತಾ ಆಗ್ರಹಿಸಿದ್ರು. ಅವನ ಕಾಲು ಮುರಿದು ಭಿಕ್ಷೆ ಬೇಡಲು ಹಾಕ್ಬೇಕು. ನನ್ನ ಮಗಳ ಮುಖ ನೋಡಿ 15 ದಿನಗಳಾಯ್ತು ಅಂತ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

ACID GIRL FAMILY 1

ಆ ಪಾಪಿ ನಾಗೇಶ್ ಬೇರೆ ಹೆಣ್ಣು ಮಗಳನ್ನಲ್ಲ, ಅವನ ತಾಯಿ ಮುಖ ನೋಡೋದಕ್ಕೂ ಹೆದರಬೇಕು. ಅಂತಹ ಶಿಕ್ಷೆ ಅವನಿಗೆ ಆಗಬೇಕು ಅಂತ ಯುವತಿ ಚಿಕ್ಕಮ್ಮ ಆಗ್ರಹಿಸಿದರು. ಸಂತ್ರಸ್ತೆಯ ಚಿಕ್ಕಪ್ಪ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದ್ರು. ಪೊಲೀಸ್ ಇಲಾಖೆಗೆ ತುಂಬಾ ಧನ್ಯವಾದ, ಪೊಲೀಸರು ಧೈರ್ಯ ತುಂಬಿದ್ರು. ಹೇಳಿದಂತೆ ಅವನನ್ನ ಅರೆಸ್ಟ್ ಮಾಡಿದ್ದಾರೆ ಧನ್ಯವಾದ ಅಂದ್ರು. ಇತ್ತ ಯುವತಿಯ ಸಹೋದರಿ, ನನ್ನ ತಂಗಿ ಅಲ್ಲಿ ನರಳಾಡ್ತಿದ್ದಾಳೆ. ಅವನು ನನ್ನ ತಂಗಿ ಕಣ್ಣ ಮುಂದೆಯೇ ಸಾಯ್ಬೇಕು ಅಂತ ಒತ್ತಾಯಿಸಿದರು.

ACID GIRL FAMILY 2

ಯುವತಿಯ ತಂದೆ, ನಾನು ನಾಗೇಶ್ ಜೊತೆ ನಾಲ್ಕು ಮಾತಾಡಬೇಕು. ಅವನು ಹೀಗೆ ಮಾಡಿದ್ದೇಕೆ ಅಂತ ಕೇಳಬೇಕು. ಇನ್ನೂ ಅವಳು ಊಟ ತಿಂತಿಲ್ಲ. ಪೈಪ್ ಮೂಲಕವೇ ಲಿಕ್ವಿಡ್ ಫುಡ್ ಕೊಡ್ತಿದ್ದೀವಿ ಅಂತ ಕಣ್ಣೀರು ಹಾಕಿದ್ರು. ಇದನ್ನೂ ಓದಿ: ಬೆಂಗಳೂರಿಗೆ ಕರೆತರುವಾಗ ಎಸ್ಕೇಪ್ ಆಗಲು ಯತ್ನ- ಆ್ಯಸಿಡ್ ನಾಗನ ಕಾಲಿಗೆ ಗುಂಡೇಟು

nagesh acid 1

ಒಟ್ಟಿನಲ್ಲಿ ಕಿರಾತಕ ಆ್ಯಸಿಡ್ ನಾಗ ಯುವತಿ ಹಾಗೂ ಕುಟುಂಬ ಜೀವನ ಪೂರ್ತಿಯಾಗಿ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿ ತಾನು ಕಾವಿಧಾರಿ ವೇಷ ಹಾಕಿಕೊಂಡು ನಾಟಕ ಆಡುತ್ತಿದ್ದ ಆರೋಪಿಗೆ ಪೊಲೀಸರು ತಕ್ಕ ಶಿಕ್ಷೆ ನೀಡಲಿ ಅನ್ನೋದೆ ಎಲ್ಲರ ಆಶಯ.

Share This Article