Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?

Public TV
Last updated: December 11, 2017 5:46 pm
Public TV
Share
3 Min Read
ravi belagere beel
SHARE

ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಬೆಳಗೆರೆ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸುವ ಮೊದಲೇ ಸಿಸಿಬಿ ಪೊಲೀಸರ ಪರ ವಕೀಲರು 10 ಕಾರಣಗಳನ್ನು ನೀಡಿ ಜಾಮೀನು ಮಂಜೂರು ಮಾಡದಂತೆ  ಆಕ್ಷೇಪಣೆ ಸಲ್ಲಿಸಿದ್ದಾರೆ.

RAVI BEEL 5

ಆ 10 ಕಾರಣಗಳು:
1. ಆರೋಪಿ ರವಿ ಬೆಳಗೆರೆ ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು, ಇವರು ಕಾನೂನು ತಿಳಿದಂತಹ ಪತ್ರಕರ್ತರಾಗಿದ್ದಾರೆ ಮತ್ತು ಸ್ವಂತ ಪತ್ರಿಕೆ ನಡೆಸುತ್ತಿದ್ದಾರೆ. ಇವುಗಳನ್ನು ತಿಳಿದ ಈ ವ್ಯಕ್ತಿ ಕಾನೂನಿಗೆ ಗೌರವವನ್ನು ನೀಡದೇ ತನ್ನ ಸಹೋದ್ಯೋಗಿಯೊಬ್ಬರನ್ನೇ ಕೊಲೆ ಮಾಡಿಸಲು ಸುಪಾರಿ ನೀಡಿದ ಪ್ರಕರಣದ ಆರೋಪಿಯಾಗಿರುತ್ತಾರೆ.

2. ರವಿಬೆಳಗೆರೆ ರವರು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಈ ಪ್ರಕರಣದಲ್ಲಿ ಮುಂದಿನ ತನಿಖೆಯಲ್ಲಿ ಸಂಗ್ರಹಿಸಬೇಕಾದಂತಹ ಸಾಕ್ಷಾಧಾರಗಳನ್ನು ನಾಶಪಡಿಸುವ ಸಂಭವ ಇರುತ್ತದೆ.

3. ಅಪರಾಧಗಳ ಸಂಬಂಧ ಹೆಚ್ಚು ಹೆಚ್ಚು ಸುದ್ದಿಗಳನ್ನು, ಭೂಗತ ಲೋಕದ ಸುದ್ದಿಗಳನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಭೂಗತ ಪಾತಕಿಗಳೊಂದಿಗೆ ಸಂಪರ್ಕ ಹೊಂದಿದ್ದಂತಹ ಪತ್ರಕರ್ತರಾಗಿದ್ದು, ತಮಗಿರುವ ಈ ಭೂಗತ ಲೋಕದ ಸಂಪರ್ಕವನ್ನು ತಮ್ಮ ವೈಯಕ್ತಿಕ/ವ್ಯವಹಾರಿಕ ಬದುಕಿನ ಸಮಸ್ಯೆಗಳಿಗೆ ಉಪಯೋಗಿಸಿಕೊಂಡು ಕೊಲೆ ಮಾಡಿಸಲು ಸುಪಾರಿ ನೀಡಿದ ಆರೋಪ ಹೊಂದಿರುತ್ತಾರೆ.

4. ಶಸ್ತ್ರ ಪರವಾನಗಿಯನ್ನು ರವಿ ಬೆಳಗೆರೆ ಹೊಂದಿದ್ದು, ಅವರು ಪರವಾನಗಿ ಹೊಂದಿದ್ದ ಶಸ್ತ್ರವನ್ನೇ ಈ ಪ್ರಕರಣದಲ್ಲಿ ಬಳಸಿರುವುದು ಕಂಡು ಬರುತ್ತದೆ.

5. ಬೆಳಗೆರೆ ಹೊಂದಿದ್ದ ಶಸ್ತ್ರ ಪರವಾನಗಿಯ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಹೆಚ್ಚಿನ ಗುಂಡುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಇವರು ಅಪರಾಧದಲ್ಲಿ ಭಾಗಿಯಾಗುವ ಸಲುವಾಗಿಯೇ ಅಕ್ರಮವಾಗಿ ಗುಂಡುಗಳನ್ನು ಹೊಂದಿರುವುದು ದೃಢಪಟ್ಟಿರುತ್ತದೆ.

RAVI BEEL 4

6. ಆರೋಪಿಗೆ ಅಪರಾಧ ಜಗತ್ತಿನ ಮಾಹಿತಿ ಇದ್ದು ತಮ್ಮ ವೃತ್ತಿ ಜೀವನದಲ್ಲಿ ಹಲವಾರು ಪ್ರಕರಣಗಳ ಬಗ್ಗೆ ಅಳವಾದ ಮಾಹಿತಿಯನ್ನು ಹೊಂದಿದ್ದಾರೆ. ತಮಗಿರುವ ಅಪರಾಧ ಜಗತ್ತಿನ ಜ್ಞಾನದಿಂದ ಈ ಪ್ರಕರಣವನ್ನು ಯಾರಿಗೂ ತಿಳಿಯದಂತೆ ಮುತುವರ್ಜಿಯಿಂದ ಯವುದೇ ಸಾಕ್ಷ್ಯಾಧಾರಗಳನ್ನು ಸಿಗದಂತೆ ಮಾಡಲು ಪ್ರಯತ್ನಿಸಿದ್ದು, ಇಂತಹ ಪ್ರಕರಣದಲ್ಲಿ ಹೆಚ್ಚಿನ ವೈಜ್ಞಾನಿಕ ತನಿಖೆಗಾಗಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕಾದ ಅಗತ್ಯತೆ ಇದೆ. ಹೀಗಾಗಿ ಅಲ್ಲಿಯವರೆಗೂ ಆರೋಪಿಯು ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

7. ಬೆಳಗೆರೆ ಬಳಸುತ್ತಿದ್ದ ಐ ಪೋನ್ ಮತ್ತು ಟ್ಯಾಬ್ ಗಳಳನ್ನು ವಶ ಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ತನಿಖೆಗೆ ಸಂಬಂಧಿಸಿದ ಸಾಕ್ಷ್ಯಗಳು ಇರುವ ಸಾಧ್ಯತೆ ಇದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುವ ಸಲುವಾಗಿ ಇವುಗಳನ್ನು ತಜ್ಞರ ಬಳಿ ಕಳುಹಿಸಬೇಕಾದ ಅಗತ್ಯತೆ ಇರುತ್ತದೆ.

8. ಈ ಪ್ರಕರಣದಲ್ಲಿ ಹೆಚ್ಚಿನ ಸಾಕ್ಷಿದಾರರು ಆರೋಪಿ ರವಿಬೆಳಗೆರೆ ಅವರ ಕಚೇರಿಯಲ್ಲಿ ಕೆಲಸ ಮಾಡುವವರೇ ಆಗಿದ್ದು ಇವರುಗಳ ಮೇಲೆ ಆರೋಪಿ ತನ್ನ ಪ್ರಭಾವವನ್ನು ಬೀರಿ ಅವರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಮುಂದೆ ಬರದೇ ಇರುವ ಪರಿಸ್ಥಿತಿ ನಿರ್ಮಾಣ ಮಾಡುವ ಸಂಭವವಿದೆ. ಹೀಗಾಗಿ ಸಾಕ್ಷಿದಾರರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಆರೋಪಿಯೂ ನ್ಯಾಯಾಂಗ ಬಂಧನದಲ್ಲಿರುವುದು ಅತ್ಯವಶ್ಯಕವಾಗಿರುತ್ತದೆ.

9. ಈ ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಆರೋಪಿಯ ರಿವಾಲ್ವರ್, ಡಿ.ಬಿ.ಬಿ.ಎಲ್. ಗನ್ ಮತ್ತು ಜೀವಂತ ಗುಂಡುಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತಜ್ಞರ ವರದಿ ಪಡೆಯಬೇಕಾಗಿರುತ್ತದೆ.

10. ಆರೋಪಿಯ ಕಚೇರಿಯಿಂದ ನಿಷೇಧಿತ ಜಿಂಕೆ ಚರ್ಮ ಮತ್ತು ಆಮೆಯ ಚಿಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ ಈ ವಿಚಾರದ ಬಗ್ಗೆ ಮುಂದಿನ ಕ್ರಮ ಜರುಗಿಸಲು ಅರಣ್ಯ ಇಲಾಖೆ ವಶಕ್ಕೆ ನೀಡಬೇಕಿದೆ. ಇವುಗಳ ಬಗ್ಗೆ ಆರೋಪಿಯು ವಿಚಾರಣೆಯ ಸಮಯದಲ್ಲಿ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಹೀಗಾಗಿ ಇವುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಅವಶ್ಯಕತೆ ಇರುವ ಕಾರಣ ಅಲ್ಲಿಯವರೆಗೂ ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

ಈ ಮೇಲ್ಕಂಡ ಕಾರಣಗಳಿಗೆ ಎ2 ಆರೋಪಿಯಾಗಿರುವ ರವಿಬೆಳಗೆರೆ ರವರನ್ನು ಡಿಸೆಂಬರ್ 11 ರಿಂದ ಡಿಸೆಂಬರ್ 24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ.

https://www.youtube.com/watch?v=1XjJ-a_uFjI

RAVI BEEL 2

RAVI BEEL 3

 

RAVI BEEL 5 1

RAVI BEEL 7

RAVI BEEL 8

RAVI BEEL 9

RAVI BEEL 10

RAVI BEEL 11

RAVI BEEL 13

RAVI BEEL 15

RAVI BEEL 17

RAVI BEEL 18

RAVI BEEL 19

RAVI BEEL 20

RAVI BEEL 1

TAGGED:bailBangalurujudicial custodyObjectionPublic TVravi belageresunil heggaravalliಆಕ್ಷೇಪಣೆಜಾಮೀನುನ್ಯಾಯಾಂಗ ಬಂಧನಪಬ್ಲಿಕ್ ಟಿವಿಬೆಂಗಳೂರುರವಿ ಬೆಳಗೆರೆಸುನೀಲ್ ಹೆಗ್ಗರವಳ್ಳಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
3 hours ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
3 hours ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
4 hours ago
Amit shah
Latest

ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

Public TV
By Public TV
4 hours ago
big bulletin 20 August 2025 part 1
Big Bulletin

ಬಿಗ್‌ ಬುಲೆಟಿನ್‌ 20 August 2025 ಭಾಗ-1

Public TV
By Public TV
4 hours ago
big bulletin 20 August 2025 part 2
Big Bulletin

ಬಿಗ್‌ ಬುಲೆಟಿನ್‌ 20 August 2025 ಭಾಗ-2

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?