Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?

Bengaluru City

ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?

Public TV
Last updated: December 11, 2017 5:46 pm
Public TV
Share
3 Min Read
ravi belagere beel
SHARE

ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಬೆಳಗೆರೆ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸುವ ಮೊದಲೇ ಸಿಸಿಬಿ ಪೊಲೀಸರ ಪರ ವಕೀಲರು 10 ಕಾರಣಗಳನ್ನು ನೀಡಿ ಜಾಮೀನು ಮಂಜೂರು ಮಾಡದಂತೆ  ಆಕ್ಷೇಪಣೆ ಸಲ್ಲಿಸಿದ್ದಾರೆ.

RAVI BEEL 5

ಆ 10 ಕಾರಣಗಳು:
1. ಆರೋಪಿ ರವಿ ಬೆಳಗೆರೆ ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು, ಇವರು ಕಾನೂನು ತಿಳಿದಂತಹ ಪತ್ರಕರ್ತರಾಗಿದ್ದಾರೆ ಮತ್ತು ಸ್ವಂತ ಪತ್ರಿಕೆ ನಡೆಸುತ್ತಿದ್ದಾರೆ. ಇವುಗಳನ್ನು ತಿಳಿದ ಈ ವ್ಯಕ್ತಿ ಕಾನೂನಿಗೆ ಗೌರವವನ್ನು ನೀಡದೇ ತನ್ನ ಸಹೋದ್ಯೋಗಿಯೊಬ್ಬರನ್ನೇ ಕೊಲೆ ಮಾಡಿಸಲು ಸುಪಾರಿ ನೀಡಿದ ಪ್ರಕರಣದ ಆರೋಪಿಯಾಗಿರುತ್ತಾರೆ.

2. ರವಿಬೆಳಗೆರೆ ರವರು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಈ ಪ್ರಕರಣದಲ್ಲಿ ಮುಂದಿನ ತನಿಖೆಯಲ್ಲಿ ಸಂಗ್ರಹಿಸಬೇಕಾದಂತಹ ಸಾಕ್ಷಾಧಾರಗಳನ್ನು ನಾಶಪಡಿಸುವ ಸಂಭವ ಇರುತ್ತದೆ.

3. ಅಪರಾಧಗಳ ಸಂಬಂಧ ಹೆಚ್ಚು ಹೆಚ್ಚು ಸುದ್ದಿಗಳನ್ನು, ಭೂಗತ ಲೋಕದ ಸುದ್ದಿಗಳನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಭೂಗತ ಪಾತಕಿಗಳೊಂದಿಗೆ ಸಂಪರ್ಕ ಹೊಂದಿದ್ದಂತಹ ಪತ್ರಕರ್ತರಾಗಿದ್ದು, ತಮಗಿರುವ ಈ ಭೂಗತ ಲೋಕದ ಸಂಪರ್ಕವನ್ನು ತಮ್ಮ ವೈಯಕ್ತಿಕ/ವ್ಯವಹಾರಿಕ ಬದುಕಿನ ಸಮಸ್ಯೆಗಳಿಗೆ ಉಪಯೋಗಿಸಿಕೊಂಡು ಕೊಲೆ ಮಾಡಿಸಲು ಸುಪಾರಿ ನೀಡಿದ ಆರೋಪ ಹೊಂದಿರುತ್ತಾರೆ.

4. ಶಸ್ತ್ರ ಪರವಾನಗಿಯನ್ನು ರವಿ ಬೆಳಗೆರೆ ಹೊಂದಿದ್ದು, ಅವರು ಪರವಾನಗಿ ಹೊಂದಿದ್ದ ಶಸ್ತ್ರವನ್ನೇ ಈ ಪ್ರಕರಣದಲ್ಲಿ ಬಳಸಿರುವುದು ಕಂಡು ಬರುತ್ತದೆ.

5. ಬೆಳಗೆರೆ ಹೊಂದಿದ್ದ ಶಸ್ತ್ರ ಪರವಾನಗಿಯ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಹೆಚ್ಚಿನ ಗುಂಡುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಇವರು ಅಪರಾಧದಲ್ಲಿ ಭಾಗಿಯಾಗುವ ಸಲುವಾಗಿಯೇ ಅಕ್ರಮವಾಗಿ ಗುಂಡುಗಳನ್ನು ಹೊಂದಿರುವುದು ದೃಢಪಟ್ಟಿರುತ್ತದೆ.

RAVI BEEL 4

6. ಆರೋಪಿಗೆ ಅಪರಾಧ ಜಗತ್ತಿನ ಮಾಹಿತಿ ಇದ್ದು ತಮ್ಮ ವೃತ್ತಿ ಜೀವನದಲ್ಲಿ ಹಲವಾರು ಪ್ರಕರಣಗಳ ಬಗ್ಗೆ ಅಳವಾದ ಮಾಹಿತಿಯನ್ನು ಹೊಂದಿದ್ದಾರೆ. ತಮಗಿರುವ ಅಪರಾಧ ಜಗತ್ತಿನ ಜ್ಞಾನದಿಂದ ಈ ಪ್ರಕರಣವನ್ನು ಯಾರಿಗೂ ತಿಳಿಯದಂತೆ ಮುತುವರ್ಜಿಯಿಂದ ಯವುದೇ ಸಾಕ್ಷ್ಯಾಧಾರಗಳನ್ನು ಸಿಗದಂತೆ ಮಾಡಲು ಪ್ರಯತ್ನಿಸಿದ್ದು, ಇಂತಹ ಪ್ರಕರಣದಲ್ಲಿ ಹೆಚ್ಚಿನ ವೈಜ್ಞಾನಿಕ ತನಿಖೆಗಾಗಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕಾದ ಅಗತ್ಯತೆ ಇದೆ. ಹೀಗಾಗಿ ಅಲ್ಲಿಯವರೆಗೂ ಆರೋಪಿಯು ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

7. ಬೆಳಗೆರೆ ಬಳಸುತ್ತಿದ್ದ ಐ ಪೋನ್ ಮತ್ತು ಟ್ಯಾಬ್ ಗಳಳನ್ನು ವಶ ಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ತನಿಖೆಗೆ ಸಂಬಂಧಿಸಿದ ಸಾಕ್ಷ್ಯಗಳು ಇರುವ ಸಾಧ್ಯತೆ ಇದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುವ ಸಲುವಾಗಿ ಇವುಗಳನ್ನು ತಜ್ಞರ ಬಳಿ ಕಳುಹಿಸಬೇಕಾದ ಅಗತ್ಯತೆ ಇರುತ್ತದೆ.

8. ಈ ಪ್ರಕರಣದಲ್ಲಿ ಹೆಚ್ಚಿನ ಸಾಕ್ಷಿದಾರರು ಆರೋಪಿ ರವಿಬೆಳಗೆರೆ ಅವರ ಕಚೇರಿಯಲ್ಲಿ ಕೆಲಸ ಮಾಡುವವರೇ ಆಗಿದ್ದು ಇವರುಗಳ ಮೇಲೆ ಆರೋಪಿ ತನ್ನ ಪ್ರಭಾವವನ್ನು ಬೀರಿ ಅವರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಮುಂದೆ ಬರದೇ ಇರುವ ಪರಿಸ್ಥಿತಿ ನಿರ್ಮಾಣ ಮಾಡುವ ಸಂಭವವಿದೆ. ಹೀಗಾಗಿ ಸಾಕ್ಷಿದಾರರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಆರೋಪಿಯೂ ನ್ಯಾಯಾಂಗ ಬಂಧನದಲ್ಲಿರುವುದು ಅತ್ಯವಶ್ಯಕವಾಗಿರುತ್ತದೆ.

9. ಈ ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಆರೋಪಿಯ ರಿವಾಲ್ವರ್, ಡಿ.ಬಿ.ಬಿ.ಎಲ್. ಗನ್ ಮತ್ತು ಜೀವಂತ ಗುಂಡುಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತಜ್ಞರ ವರದಿ ಪಡೆಯಬೇಕಾಗಿರುತ್ತದೆ.

10. ಆರೋಪಿಯ ಕಚೇರಿಯಿಂದ ನಿಷೇಧಿತ ಜಿಂಕೆ ಚರ್ಮ ಮತ್ತು ಆಮೆಯ ಚಿಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ ಈ ವಿಚಾರದ ಬಗ್ಗೆ ಮುಂದಿನ ಕ್ರಮ ಜರುಗಿಸಲು ಅರಣ್ಯ ಇಲಾಖೆ ವಶಕ್ಕೆ ನೀಡಬೇಕಿದೆ. ಇವುಗಳ ಬಗ್ಗೆ ಆರೋಪಿಯು ವಿಚಾರಣೆಯ ಸಮಯದಲ್ಲಿ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಹೀಗಾಗಿ ಇವುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಅವಶ್ಯಕತೆ ಇರುವ ಕಾರಣ ಅಲ್ಲಿಯವರೆಗೂ ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

ಈ ಮೇಲ್ಕಂಡ ಕಾರಣಗಳಿಗೆ ಎ2 ಆರೋಪಿಯಾಗಿರುವ ರವಿಬೆಳಗೆರೆ ರವರನ್ನು ಡಿಸೆಂಬರ್ 11 ರಿಂದ ಡಿಸೆಂಬರ್ 24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ.

https://www.youtube.com/watch?v=1XjJ-a_uFjI

RAVI BEEL 2

RAVI BEEL 3

 

RAVI BEEL 5 1

RAVI BEEL 7

RAVI BEEL 8

RAVI BEEL 9

RAVI BEEL 10

RAVI BEEL 11

RAVI BEEL 13

RAVI BEEL 15

RAVI BEEL 17

RAVI BEEL 18

RAVI BEEL 19

RAVI BEEL 20

RAVI BEEL 1

TAGGED:bailBangalurujudicial custodyObjectionPublic TVravi belageresunil heggaravalliಆಕ್ಷೇಪಣೆಜಾಮೀನುನ್ಯಾಯಾಂಗ ಬಂಧನಪಬ್ಲಿಕ್ ಟಿವಿಬೆಂಗಳೂರುರವಿ ಬೆಳಗೆರೆಸುನೀಲ್ ಹೆಗ್ಗರವಳ್ಳಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
5 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
5 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
6 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
6 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
7 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?