ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಬಳ್ಳಾರಿಯಿಂದ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಮರುಳುವಾಗ ಮಾರ್ಗದ ಮಧ್ಯೆ ಅವರು ಕಾರು ಅಪಘಾತಕ್ಕೀಡಾಗಿದೆ.
ಇಂದು ಬೆಳಗಿನ ಜಾವ ಸುಮಾರು 4 ಗಂಟೆಗೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಹಾನಿ ಉಂಟಾಗಿಲ್ಲ. ಧ್ರುವ ಸರ್ಜಾ ಕಾರಿನ ಹಿಂದಿನ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದ ವೇಳೆ ಕಾರಿನಲ್ಲಿ ಧ್ರುವ ಅವರ ಜೊತೆಗೆ ಕೆಲವು ಸ್ನೇಹಿತರು ಕೂಡ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ‘ಪೊಗರು’ ಚಿತ್ರದ ಚಿತ್ರೀಕರಣಕ್ಕಾಗಿ ಧ್ರುವ ಸರ್ಜಾ ಅವರು 15 ದಿನಗಳಿಂದ ಬಳ್ಳಾರಿಯಲ್ಲಿ ಬೀಡು ಬಿಟ್ಟಿದ್ದಾರೆ.
ಪೊಗರು ರೊಮ್ಯಾಂಟಿಕ್ ಆಕ್ಷನ್ ಚಿತ್ರವಾಗಿದ್ದು, ಧ್ರುವ ಸರ್ಜಾ ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ಶಾನ್ವಿ ಶ್ರೀವಾತ್ಸವ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ನಂದಕಿಶೋರ್ ನಿರ್ಮಿಸುತ್ತಿದ್ದು, ಬಿ.ಕೆ ಗಂಗಾಧರ್ ನಿರ್ಮಿಸುತ್ತಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲೂ ಪೊಗರು ರಿಲೀಸ್ ಆಗಲಿದೆ.