Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

Bengaluru City

ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

Public TV
Last updated: June 19, 2023 3:38 pm
Public TV
Share
3 Min Read
Siddaramaiah 8
SHARE

ಬೆಂಗಳೂರು: ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್ (NCCF), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (NAFED) ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಅಲ್ಲಿಂದ ಅಕ್ಕಿ (Rice) ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಅವರು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಆಹಾರ ಮಂಡಳಿಯಿಂದ (FCI) 34 ರೂ. ಅಕ್ಕಿ, 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆಜಿ ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

rice

ವಾರ್ಷಿಕ 10,092 ಕೋಟಿ ರೂ.:
ಅನ್ನಭಾಗ್ಯ (Anna Bhagya Scheme) ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.

siddaramaiah 1 5

ಪಂಜಾಬ್ ಸರ್ಕಾರದೊಂದಿಗೆ ಚರ್ಚೆ:
ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ಧವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಂಜಾಬ್‌ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಮಹಿಳೆಯರ `ಶಕ್ತಿ’ಗೆ ಶೀಘ್ರವೇ ಹೊಸ ಮಾರ್ಗಸೂಚಿ – ವಾರಕ್ಕೆ ಮುಂಚೆ ಬುಕ್ಕಿಂಗ್ ಕಡ್ಡಾಯ ಸಾಧ್ಯತೆ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ:
ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದು ಭರವಸೆ ನೀಡಿದರು.

ಕೇಂದ್ರ ಸಹಕರಿಸಬೇಕು:
ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಅವರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕಕ್ಕೆ ನೀರು ಬಿಡಬಾರದೆಂದು ಮಹಾರಾಷ್ಟ್ರದ ರೈತರು ಬ್ಯಾರೇಜ್ ಬಂದ್ ಮಾಡಿದ್ದು, ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸುದ್ದಿಗಾರರು ಮುಖ್ಯಮಂತ್ರಿಗಳು ಗಮನಕ್ಕೆ ತಂದಾಗ, ಅಲ್ಲಿನ ರೈತರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಾಗುವುದು ಎಂದರು.

ನಮ್ಮಲ್ಲಿ ಗೊಂದಲವಿಲ್ಲ:
ಸರ್ಕಾರ 5 ವರ್ಷಗಳ ಅವಧಿ ಮುಗಿಸುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳು ನಮ್ಮಲ್ಲಿಲ್ಲ ಎಂದು ಸ್ಪಷ್ಟ ಪಡಿಸಿದರು.

ಜಿಎಸ್‌ಟಿ ಸಮಿತಿಗೆ ಅರ್ಹರು:
ಜಿಎಸ್‌ಟಿ ಸಮಿತಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಬಹುದಿತ್ತು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಕೃಷ್ಣಬೈರೇಗೌಡರನ್ನು ಕಳಿಸಲು ಅವಕಾಶವಿದೆ. ಅದಕ್ಕೆ ಅವರು ಅರ್ಹರು ಕೂಡ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಕೈ ಜೋಡಿಸಲು ಹಿಂದೇಟು – ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿ ಅನುಮಾನ

TAGGED:Anna Bhagya schemebjpcongressNAFEDNCCFRicesiddaramaiahಅಕ್ಕಿಅನ್ನಭಾಗ್ಯ ಯೋಜನೆಎನ್‌ಸಿಸಿಎಫ್ಕಾಂಗ್ರೆಸ್ನಾಫೆಡ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
25 minutes ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
43 minutes ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
1 hour ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
1 hour ago
bagalkote riot case hindu activist arrested
Bagalkot

ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ

Public TV
By Public TV
2 hours ago
GBA
Bengaluru City

ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?