ಬಿಜೆಪಿ ಯುವ ಕಾರ್ಯಕರ್ತರಿಂದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ

Public TV
1 Min Read
swami

ರಾಂಚಿ: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹೊಡೆದು ಹಲ್ಲೆ ಮಾಡಿರುವ ಘಟನೆ ಜಾರ್ಖಂಡ್‍ನ ಪಾಕುರ್ ನಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲು ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಪೊಲೀಸರಿಗೆ ಆದೇಶಿಸಿದ್ದಾರೆ.

ಸ್ವಾಮಿ ಅಗ್ನಿವೇಶ್ ಅವರು ಪಾಕುರಿನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಬಂದು ಅಲ್ಲಿನ ಹೋಟೆಲ್‍ವೊಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಸಮಾರಂಭಕ್ಕೆ ತೆರಳಲು ಹೋಟೆಲ್‍ನಿಂದ ಹೊರಬರುತ್ತಿದ್ದಂತೆ ಸುತ್ತುವರಿದು ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಸ್ಥಳೀಯ ಬುಡಕಟ್ಟು ಜನರನ್ನು ಮತಾಂತರಗೊಳಿಸಲು ಕ್ರೈಸ್ತ ಮಿಷನರಿಗಳ ಪರವಾಗಿ ಪ್ರವಚನ ನೀಡಲು ಆಗಮಿಸಿದ್ದಾರೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ ಎಂದು ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ.

ಸ್ವಾಮಿ ಅಗ್ನಿವೇಶ್‍ಅವರು, ತನ್ನ ಆಗಮನದ ಬಗ್ಗೆ ಪೊಲೀಸ್ ಆಡಳಿತ ವರ್ಗಕ್ಕೆ ತಿಳಿಸಿದ್ದರು. ಆದರೆ ಹೋಟೆಲ್‍ನಿಂದ ಹೊರ ಬರುವ ಸಂದರ್ಭದಲ್ಲಿ ಯಾರು ಇರಲಿಲ್ಲ ಆ ವೇಳೆ ದಾಳಿ ನಡೆಸಲಾಗಿದೆ.

ದಾಳಿಕೋರರು ಮೊದಲಿಗೆ ಘೋಷಣೆಯನ್ನು ಕೂಗಿದ್ದಾರೆ. ಕಪ್ಪು ಧ್ವಜವನ್ನು ತೋರಿಸಿದ್ದಾರೆ. ಅನಂತರ ಅಗ್ನಿವೇಶ್ ಅವರನ್ನು ಹೊಡೆದು ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯೂ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ಪೊಲೀಸರು ಅದರ ಆಧಾರದ ಮೇರೆಗೆ 20 ದಾಳಿಕೋರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಳವಿಲ್ಲ. ಆದರೆ ಸ್ವಾಮಿ ಅಗ್ನಿವೇಶ್ ತನ್ನ ಭದ್ರತೆಗಾಗಿ ಮೊದಲೇ ಸಂಘಟಿಸಬೇಕಾಗಿತ್ತು ಎಂದು ಜಾರ್ಖಂಡ್ ಬಿಜೆಪಿ ವಕ್ತಾರ ಪಿ ಶಾಹ್ದೇವ್ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *