2002 ರ ಗುಜರಾತ್‌ ಗಲಭೆ ಪ್ರಕರಣ – ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

Public TV
1 Min Read
Teesta Setalvad 2

ನವದೆಹಲಿ: 2002 ರ ಗುಜರಾತ್‌ ಗಲಭೆ (2002 Gujarat Riots) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ (Teesta Setalvad) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ಬುಧವಾರ ಜಾಮೀನು ನೀಡಿದೆ.

ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಆರ್‌. ಗವಾಯಿ, ಎ.ಎಸ್‌. ಬೋಪಣ್ಣ ಮತ್ತು ದೀಪಂಕರ್‌ ದತ್ತಾ ಅವರಿದ್ದ ತ್ರಿಸದಸ್ಯ ಪೀಠವು, ತೀಸ್ತಾ ಸೆಟಲ್ವಾಡ್‌ ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿದೆ. ಅಲ್ಲದೇ ತೀಸ್ತಾ ಅವರಿಗೆ ಜಾಮೀನು ನೀಡಿದೆ. ಇದನ್ನೂ ಓದಿ: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು

Supreme Court

ಸೆಟಲ್ವಾಡ್‌ ವಿರುದ್ಧ ಚಾರ್ಜ್‌ಸೀಟ್‌ ಸಲ್ಲಿಸಿರುವುದನ್ನು ನ್ಯಾಯಾಲಯ ಅವಲೋಕಿಸಿದೆ. ಕಸ್ಟಡಿ ವಿಚಾರಣೆಯ ಅಗತ್ಯವನ್ನು ತೆಗೆದುಹಾಕಲಾಗಿದೆ. ಆದಾಗ್ಯೂ, ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿ ಜಾಮೀನು ನೀಡಿದೆ.

ಗುಜರಾತ್‌ ಗಲಭೆ ಪ್ರಕರಣದಲ್ಲಿ ನಿರಪರಾಧಿಗಳಿಗೆ ಶಿಕ್ಷೆಯಾಗಲು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ತೀಸ್ತಾರನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಸಿಕ್ಕಿತ್ತು. ಇದನ್ನೂ ಓದಿ: ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

ಜಾಮೀನು ಅವಧಿ ಮುಗಿದಿದ್ದರಿಂದ ನ್ಯಾಯಾಲಯಕ್ಕೆ ಶರಣಾಗುವಂತೆ ಗುಜರಾತ್‌ ಹೈಕೋರ್ಟ್‌ ಜು. 1 ರಂದು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ತೀಸ್ತಾ ಅವರು ಮತ್ತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article