ರಾಮನಗರ: ಬಿಡದಿಯ ನಿತ್ಯಾನಂದ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಕಾಣೆಯಾಗಿದ್ದಾನೆ. ನಿತ್ಯಾನಂದನನ್ನು ಹುಡುಕಿಕೊಡುವಂತೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ರಾಮನಗರದಲ್ಲಿ ಇಂದು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ಐಜೂರು ವೃತ್ತದಲ್ಲಿ ಪ್ರತಿಭಟನಕಾರರು ನಿತ್ಯಾನಂದನನ್ನು ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಕರಪತ್ರಗಳನ್ನು, ಭಿತ್ತಿಪತ್ರಗಳನ್ನು ಗೋಡೆಗಳ ಮೇಲೆ, ವಾಹನಗಳ ಮೇಲೆ ಅಂಟಿಸಿದರು.
ಅಲ್ಲದೇ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ನಿತ್ಯಾನಂದ ಕಾಣೆಯಾಗಿದ್ದಾನೆ. ಆತ ಹಲವು ಪ್ರಕರಣಗಳಿಗೆ ಬೇಕಾಗಿರುವ ವ್ಯಕ್ತಿ ಹುಡುಕಿಕೊಡಿ ಎಂದು ಭಿತ್ತಿ ಪತ್ರಗಳನ್ನು ಹಿಡಿದು ಮನವಿ ಮಾಡಿದರು. ಬಂಧನದ ಭೀತಿಯಲ್ಲಿ ಪದೇ ಪದೇ ನ್ಯಾಯಾಲಯಕ್ಕೆ ಗೈರಾಗುತ್ತಿರುವ ನಿತ್ಯಾನಂದ ವಿದೇಶಕ್ಕೆ ಪಲಾಯನ ಮಾಡಿದ್ದಾನೆ. ಕೂಡಲೇ ಆತನನ್ನ ಬಂಧಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv