Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮಂಡ್ಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ನೆನೆದು ಕಣ್ಣೀರಾದ ಅಭಿಮಾನಿಗಳು!

Public TV
Last updated: January 13, 2019 7:33 am
Public TV
Share
3 Min Read
AMBI 2 Copy
Wife of Ambareesh actress Sumalatha, former MP G Madegowda paying tribute during a Geeta Namana- a tribute to Ambareesh at Sir MV Stadium in Mandya on Saturday. -- KPN ### Mandya tribute to Ambareesh
SHARE

ಮಂಡ್ಯ: ಸಕ್ಕರೆ ನಾಡು ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ನೆನೆದು ಸ್ಯಾಂಡಲ್‍ವುಡ್ ಹಿರಿಯ ನಟ, ನಟಿಯರು, ನಿರ್ದೇಶಕರು, ಕಲಾವಿದರು ಸೇರಿದಂತೆ ಅಭಿಮಾನಿಗಳು ಕಣ್ಣೀರಾದರು.

ಅಂಬರೀಶ್ ಅಭಿಮಾನಿಗಳ ಬಳಗವು ಅಂಬಿ ಸಾರ್ಥಕ ನುಡಿನಮನ ಹಾಗೂ ಕನಗನಮರಡಿ ಬಸ್ ದುರಂತದಲ್ಲಿ ಮಡಿದವವರ ಕುಟುಂಬಗಳಿಗೆ ಪರಿಹಾರ ವಿತರಣಾ ಕಾರ್ಯಕ್ರಮವು ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆಸಿತು. ಈ ಕಾರ್ಯಕ್ರಮದಲ್ಲಿ ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್, ನಟ ಶಿವರಾಜ್‍ಕುಮಾರ್, ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಯೋಗರಾಜ್ ಭಟ್, ನಟ ಜಗ್ಗೇಶ್, ಸಾಧುಕೋಕಿಲಾ, ನಿರ್ಮಾಪಕ ರಾಕಲೈನ್ ವೆಂಕಟೇಶ್ ಸೇರಿದಂತೆ ಅನೇಕರು ಭಾಗಿಯಾಗಿ, ಅಂಬರೀಶ್ ಅವರನ್ನು ಸ್ಮರಿಸಿಕೊಂಡರು.

AMBI 2

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಹುತೇಕರ ಭಾಷಣ ಕೇಳಿ ಸುಮಲತಾ ಅಂಬರೀಶ್ ಅವರು ಭಾವುಕರಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಆಗಮಿಸಿದ ಅವರು, ಕನಗನಮರಡಿ ಬಸ್ ದುರಂತದಲ್ಲಿ ಮಡಿದವರ 30 ಜನರ ಕುಟುಂಬಸ್ಥರಿಗೆ ಪರಿಹಾರ ನೀಡಿದರು. ಅದೇ ದಿನ ಅಂಬರೀಶ್ ಕೂಡ ಇಹಲೋಕ ತ್ಯಜಿಸಿದ್ದರು. ಎಲ್ಲವನ್ನೂ ನೆನೆದ ಸುಮಲತಾ  ಕಣ್ಣಲ್ಲಿ ನೀರು ತುಂಬಿ ಬಂತು.

ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಅಂಬರೀಶ್ ಅಣ್ಣನ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಮಂಡ್ಯ ಇಂಡಿಯಾಗೆ ಗೊತ್ತು ಅಂತಾರೆ. ಅದು ಅಂಬರೀಶ್ ಅಣ್ಣನ ಸ್ವತ್ತು. ಯಾರೇ ಬಂದ್ರು ಅದೇ ಗತ್ತು ಎಂದರು. ಬಳಿಕ ವೇದಿಕೆಯ ಮೇಲೆ ಅಭಿಷೇಕ್ ಅವರನ್ನು ತಬ್ಬಿಕೊಂಡು ಸಾಂತ್ವಾನ ಹೇಳಿದರು.

AMBI

ಅಂಬರೀಶ್ ಅಧಿಕಾರಕ್ಕಾಗಿ, ಹಣಕ್ಕಾಗಿ ಎಂದೂ ಆಸೆ ಪಟ್ಟವರಲ್ಲ. ಕಾವೇರಿಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸರಳ ಜೀವಿ, ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದ ಅವರು ಒಂದು ಗತ್ತು ಹೊಂದಿದ್ದರು ಎಂದು ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಹೇಳಿ, ಅಂಬಿ ಜೊತೆಗಿನ ಕ್ಷಣಗಳನ್ನು ಮೆಲುಕು ಹಾಕಿದರು.

ಅಂಬರೀಶ್ ಅವರನ್ನು ಕರ್ಣನಿಗೆ ಹೋಲಿಸಿದ ಹಿರಿಯ ನಟ ದೊಡ್ಡಣ್ಣ ಅವರು, ಕಲಾವಿದರ ಸಂಘದ ಕಟ್ಟಡ ನಿರ್ಮಾಣಕ್ಕೆ ಅಂಬರೀಶ್ ಹೋರಾಡಿದ್ದನ್ನು ನೆನೆಪಿಸಿಕೊಂಡು ಕಣ್ಣೀರಿಟ್ಟರು. ಅಂಬರೀಶ್ ಅವರು ಕನಗನಮರಡಿ ಬಸ್ ದುರಂತ ಕೇಳಿ ಮಗುವಿನಂತೆ ತೊಳಲಾಡಿದರು. ನಾನು ಘಟನಾ ಸ್ಥಳಕ್ಕೆ ಹೋಗಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ವಿಧಿ ಅವರನ್ನು ಅವತ್ತೇ ರಾತ್ರಿ ಕರೆದುಕೊಂಡುಬಿಟ್ಟಿತು ಎಂದು ಸ್ಮರಿಸಿದರು. ಈ ವೇಳೆ ಸ್ಟೇಡಿಯಂನಲ್ಲಿ ಮೌನ ಮನೆಮಾಡಿ, ಅಂಬಿ ಕುಟುಂಬಸ್ಥರು, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹಾಗೂ ಅಭಿಮಾನಿಗಳು ಭಾವುಕರಾದರು.

vlcsnap 2019 01 13 07h18m48s47 e1547344452982

ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ, ಬೆಂಗಳೂರು ಮೊಬೈಲ್ ಇದ್ದಂತೆ, ಮಂಡ್ಯ ಚಾರ್ಜರ್ ಇದ್ದಂತೆ ಎಂದು ರೆಬೆಲ್ ಸ್ಟಾರ್ ಬಗ್ಗೆ ತಮ್ಮದೇ ಶೈಲಿಯಲ್ಲಿ ಡೈಲಾಗ್ ಹೊಡೆದರು. ರಾಜಾಹುಲಿ ಸಿನಿಮಾದ ‘ಗೊಂಬೆ ಆಡ್ಸೋನು’ ಹಾಡಿ ಶೂಟಿಂಗ್ ಮಾಡುವಾಗ ಮಂಡ್ಯದವರಿಗೊಬ್ಬರಿಗೆ ಕೈಮ ಉಂಡೆ, ಮುದ್ದೆ ತರಲು ಅಂಬರೀಶ್ ಹೇಳಿದ್ದರು. ಆದರೆ ಒಬ್ಬರಲ್ಲ ಇಬ್ಬರಲ್ಲ ಅನೇಕರು ಅಂಬರೀಶ್ ಅವರು ಶೂಟಿಂಗ್‍ಗೆ ಬಂದಿದ್ದನ್ನು ಕೇಳಿ ಊಟ ತಂದಿದ್ದರು ಅಂತ ನೆನಪಿಸಿಕೊಂಡರು.

ರಕ್ತಕಣ್ಣಿರು ಚಿತ್ರದ ‘ವೇದಾಂತಗಳು, ಸಿದ್ಧಾಂತಗಳು ಯಾರೋ ಬರೆದಿಟ್ಟ ಕಟ್ಟು ಕಥೆ. ಜೀವನದ ರಸ ಸವಿಯೋಕೆ ನಾನೇ ನಿಮಗೆ ದಂತ ಕಥೆ ಎಂಬ ಹಾಡಿನ ಮೂಲಕ ಅಂಬಿ ಏನು ಎಂಬುದನ್ನು ನಟ, ನಿದೇರ್ಶಕ, ಸಂಗೀತ ನಿರ್ದೇಶಕ ಸಾಧುಕೋಕಿಲಾ ಕಟ್ಟಿಕೊಟ್ಟರು.

vlcsnap 2019 01 13 07h09m08s132 e1547344496404

ಹಿರಿಯ ನಟಿ ಬಿ.ಸರೋಜಾದೇವಿ ಮಾತನಾಡಿ, ಅಂಬಿ ಏನನ್ನೂ ಬಯಸಿದವನಲ್ಲ. ಎಲ್ಲವೂ ಆತನನ್ನೇ ಹುಡುಕಿಕೊಂಡು ಬಂದಂತಿದ್ದು. ಆದರೆ ಸುಮಲತಾ ಅವರನ್ನು ಹೆಚ್ಚು ಇಷ್ಟಪಟ್ಟ ಅಂಬಿ, ಮಡದಿಯಾಗಿ ಪಡೆದರು. ರಾಜನಾಗಿಯೇ ಬಂದ ರೆಬೆಲ್ ಸ್ಟಾರ್ ರಾಜನಾಗೇ ಹೋದ ಎಂದ ಅವರು, ನನ್ನ ಆಯಸ್ಸು ಕೊಡ್ತೀನಿ ಅಂದ್ರೆ ಯಾರಿಗೆ ಬೇಕು ನಿಮ್ಮ ನೆಕ್ಲೇಸ್ ಕೊಡಿ ಅಂತ ಅಂಬರೀಶ್ ಒಮ್ಮೆ ಹಾಸ್ಯ ಮಾಡಿದ್ದರು ಎಂದು ನೆನೆದು ಕಣ್ಣೀರಾದರು.

ಅಂಬರೀಶ್ ಪುತ್ರ ಅಭಿಷೇಕ್ ಮಾತನಾಡಿ, ನಮ್ಮಪ್ಪನ ಬಗ್ಗೆ ಹೆಚ್ಚಾಗಿ ನಾನು ಏನು ಹೇಳಲ್ಲ. ಅಂಬರೀಶ್ ಅವರು ಹೇಗಿದ್ದರು, ಹೇಗೆ ಹೋದರು ಅಂತ ನಿಮಗೆ ಗೊತ್ತು. ಹಣ ಮುಖ್ಯ ಅಲ್ಲ ಮಗನೇ ಜನ ಮುಖ್ಯ ಅಂತ ಅಪ್ಪ ಯಾವಾಗ್ಲೂ ಹೇಳುತ್ತಿದ್ದರು. ಅಂತ್ಯಸಂಸ್ಕಾರದಲ್ಲಿಯೂ ಅಭಿಮಾನವನ್ನು ಮಂಡ್ಯ ಜನತೆ ಮೆರೆಯಿತು. ನಿಮಗೆ ನಾನು ಚಿರಋಣಿ ಎಂದರು.

vlcsnap 2019 01 13 07h10m09s235 e1547344539171

ಅಭಿಷೇಕ್ ಮಾತನಾಡುವಾಗ ಕೆಲ ಅಭಿಮಾನಿಗಳು ಕೂಗಾಡುತ್ತಿದ್ದರು. ಈ ವೇಳೆ ಅಂಬಿ ಸ್ಟೇಲ್‍ನಲ್ಲಿಯೇ ಅಭಿಷೇಕ್ ಕೂಗಾಡಿ ನಮ್ಮಪ್ಪನಿಗೂ ಕೇಳಲಿ ಎಂದು ಭಾವುಕರಾದರು. ನಮ್ಮ ತಾಯಿ ನಿಮ್ಮ ಪ್ರೀತಿಯಲ್ಲಿ ಒಂದಿಷ್ಟು ಭಾಗ ಮಗ ಅಭಿಷೇಕ್ ಕೊಡಿ ಅಂತ ಕೇಳಿದ್ದಾರೆ. ಅಪ್ಪ ನಡೆದ ದಾರಿಯಲ್ಲಿ ನಡೆದರೆ ಅಷ್ಟೇ ಪ್ರೀತಿ ನಮಗೆ ಕೊಡುತ್ತಾರೆ ಎಂದು ಸುಮಲತಾ ಅವರಿಗೆ ಅಭಿಷೇಕ್ ಇದೇ ವೇಳೆ ಹೇಳಿದರು.

https://www.youtube.com/watch?v=vRxf0E_5PXE

https://www.youtube.com/watch?v=tv9fwk6eo9Q

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:abhishekAmbareeshmandyaPublic TVrebel starRocking Star YashRockline VenkateshSumalathaಅಭಿಷೇಕ್ಪಬ್ಲಿಕ್ ಟಿವಿಮಂಡ್ಯರಾಕಿಂಗ್ ಸ್ಟಾರ್ ಯಶ್ರಾಕ್‍ಲೈನ್ ವೆಂಕಟೇಶ್ರೆಬೆಲ್ ಸ್ಟಾರ್ ಅಂಬರೀಶ್ಸುಮಲತಾ
Share This Article
Facebook Whatsapp Whatsapp Telegram

Cinema Updates

Pavithra Gowda 1
ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ
Bengaluru City Cinema Latest Sandalwood Top Stories
darshan renukaswamy pavithra gowda
`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?
Cinema Court Karnataka Latest Main Post Sandalwood States Top Stories
Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest

You Might Also Like

Chinnaswamy Stadium Stampede Case Daughters earring stolen divyanshi mother Ashwini Complaint filed against Bowring Hospital
Bengaluru City

ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಗಳ ಕಿವಿಯೋಲೆ ಕಳವು – ಬೌರಿಂಗ್ ಆಸ್ಪತ್ರೆಯ ವಿರುದ್ಧ ದೂರು

Public TV
By Public TV
4 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | RCB ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ ಒಪ್ಪಿಗೆ

Public TV
By Public TV
8 minutes ago
Konareddy
Bengaluru City

ಮಹದಾಯಿಗೆ ಕೇಂದ್ರ ಅನುಮತಿ ಕೊಡಲ್ಲ ಅನ್ನೋಕೆ ಇವರ‍್ಯಾರು: ಗೋವಾ ಸಿಎಂ ವಿರುದ್ಧ ಕೋನರೆಡ್ಡಿ ಗರಂ

Public TV
By Public TV
8 minutes ago
HK Patil
Bengaluru City

ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

Public TV
By Public TV
44 minutes ago
KJ George 1
Bengaluru City

ಸ್ಮಾರ್ಟ್ ಮೀಟರ್ ಹಗರಣ ಆರೋಪ – ಕೋರ್ಟ್ ತೀರ್ಪಿಗೆ ನಾನು ಬದ್ಧ: ಸಚಿವ ಜಾರ್ಜ್

Public TV
By Public TV
1 hour ago
PM Modi 2 1
Latest

ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?