Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ನೆನೆದು ಕಣ್ಣೀರಾದ ಅಭಿಮಾನಿಗಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಂಡ್ಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ನೆನೆದು ಕಣ್ಣೀರಾದ ಅಭಿಮಾನಿಗಳು!

Cinema

ಮಂಡ್ಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ನೆನೆದು ಕಣ್ಣೀರಾದ ಅಭಿಮಾನಿಗಳು!

Public TV
Last updated: January 13, 2019 7:33 am
Public TV
Share
3 Min Read
AMBI 2 Copy
Wife of Ambareesh actress Sumalatha, former MP G Madegowda paying tribute during a Geeta Namana- a tribute to Ambareesh at Sir MV Stadium in Mandya on Saturday. -- KPN ### Mandya tribute to Ambareesh
SHARE

ಮಂಡ್ಯ: ಸಕ್ಕರೆ ನಾಡು ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ನೆನೆದು ಸ್ಯಾಂಡಲ್‍ವುಡ್ ಹಿರಿಯ ನಟ, ನಟಿಯರು, ನಿರ್ದೇಶಕರು, ಕಲಾವಿದರು ಸೇರಿದಂತೆ ಅಭಿಮಾನಿಗಳು ಕಣ್ಣೀರಾದರು.

ಅಂಬರೀಶ್ ಅಭಿಮಾನಿಗಳ ಬಳಗವು ಅಂಬಿ ಸಾರ್ಥಕ ನುಡಿನಮನ ಹಾಗೂ ಕನಗನಮರಡಿ ಬಸ್ ದುರಂತದಲ್ಲಿ ಮಡಿದವವರ ಕುಟುಂಬಗಳಿಗೆ ಪರಿಹಾರ ವಿತರಣಾ ಕಾರ್ಯಕ್ರಮವು ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆಸಿತು. ಈ ಕಾರ್ಯಕ್ರಮದಲ್ಲಿ ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್, ನಟ ಶಿವರಾಜ್‍ಕುಮಾರ್, ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಯೋಗರಾಜ್ ಭಟ್, ನಟ ಜಗ್ಗೇಶ್, ಸಾಧುಕೋಕಿಲಾ, ನಿರ್ಮಾಪಕ ರಾಕಲೈನ್ ವೆಂಕಟೇಶ್ ಸೇರಿದಂತೆ ಅನೇಕರು ಭಾಗಿಯಾಗಿ, ಅಂಬರೀಶ್ ಅವರನ್ನು ಸ್ಮರಿಸಿಕೊಂಡರು.

AMBI 2

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಹುತೇಕರ ಭಾಷಣ ಕೇಳಿ ಸುಮಲತಾ ಅಂಬರೀಶ್ ಅವರು ಭಾವುಕರಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಆಗಮಿಸಿದ ಅವರು, ಕನಗನಮರಡಿ ಬಸ್ ದುರಂತದಲ್ಲಿ ಮಡಿದವರ 30 ಜನರ ಕುಟುಂಬಸ್ಥರಿಗೆ ಪರಿಹಾರ ನೀಡಿದರು. ಅದೇ ದಿನ ಅಂಬರೀಶ್ ಕೂಡ ಇಹಲೋಕ ತ್ಯಜಿಸಿದ್ದರು. ಎಲ್ಲವನ್ನೂ ನೆನೆದ ಸುಮಲತಾ  ಕಣ್ಣಲ್ಲಿ ನೀರು ತುಂಬಿ ಬಂತು.

ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಅಂಬರೀಶ್ ಅಣ್ಣನ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಮಂಡ್ಯ ಇಂಡಿಯಾಗೆ ಗೊತ್ತು ಅಂತಾರೆ. ಅದು ಅಂಬರೀಶ್ ಅಣ್ಣನ ಸ್ವತ್ತು. ಯಾರೇ ಬಂದ್ರು ಅದೇ ಗತ್ತು ಎಂದರು. ಬಳಿಕ ವೇದಿಕೆಯ ಮೇಲೆ ಅಭಿಷೇಕ್ ಅವರನ್ನು ತಬ್ಬಿಕೊಂಡು ಸಾಂತ್ವಾನ ಹೇಳಿದರು.

AMBI

ಅಂಬರೀಶ್ ಅಧಿಕಾರಕ್ಕಾಗಿ, ಹಣಕ್ಕಾಗಿ ಎಂದೂ ಆಸೆ ಪಟ್ಟವರಲ್ಲ. ಕಾವೇರಿಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸರಳ ಜೀವಿ, ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದ ಅವರು ಒಂದು ಗತ್ತು ಹೊಂದಿದ್ದರು ಎಂದು ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಹೇಳಿ, ಅಂಬಿ ಜೊತೆಗಿನ ಕ್ಷಣಗಳನ್ನು ಮೆಲುಕು ಹಾಕಿದರು.

ಅಂಬರೀಶ್ ಅವರನ್ನು ಕರ್ಣನಿಗೆ ಹೋಲಿಸಿದ ಹಿರಿಯ ನಟ ದೊಡ್ಡಣ್ಣ ಅವರು, ಕಲಾವಿದರ ಸಂಘದ ಕಟ್ಟಡ ನಿರ್ಮಾಣಕ್ಕೆ ಅಂಬರೀಶ್ ಹೋರಾಡಿದ್ದನ್ನು ನೆನೆಪಿಸಿಕೊಂಡು ಕಣ್ಣೀರಿಟ್ಟರು. ಅಂಬರೀಶ್ ಅವರು ಕನಗನಮರಡಿ ಬಸ್ ದುರಂತ ಕೇಳಿ ಮಗುವಿನಂತೆ ತೊಳಲಾಡಿದರು. ನಾನು ಘಟನಾ ಸ್ಥಳಕ್ಕೆ ಹೋಗಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ವಿಧಿ ಅವರನ್ನು ಅವತ್ತೇ ರಾತ್ರಿ ಕರೆದುಕೊಂಡುಬಿಟ್ಟಿತು ಎಂದು ಸ್ಮರಿಸಿದರು. ಈ ವೇಳೆ ಸ್ಟೇಡಿಯಂನಲ್ಲಿ ಮೌನ ಮನೆಮಾಡಿ, ಅಂಬಿ ಕುಟುಂಬಸ್ಥರು, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹಾಗೂ ಅಭಿಮಾನಿಗಳು ಭಾವುಕರಾದರು.

vlcsnap 2019 01 13 07h18m48s47 e1547344452982

ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ, ಬೆಂಗಳೂರು ಮೊಬೈಲ್ ಇದ್ದಂತೆ, ಮಂಡ್ಯ ಚಾರ್ಜರ್ ಇದ್ದಂತೆ ಎಂದು ರೆಬೆಲ್ ಸ್ಟಾರ್ ಬಗ್ಗೆ ತಮ್ಮದೇ ಶೈಲಿಯಲ್ಲಿ ಡೈಲಾಗ್ ಹೊಡೆದರು. ರಾಜಾಹುಲಿ ಸಿನಿಮಾದ ‘ಗೊಂಬೆ ಆಡ್ಸೋನು’ ಹಾಡಿ ಶೂಟಿಂಗ್ ಮಾಡುವಾಗ ಮಂಡ್ಯದವರಿಗೊಬ್ಬರಿಗೆ ಕೈಮ ಉಂಡೆ, ಮುದ್ದೆ ತರಲು ಅಂಬರೀಶ್ ಹೇಳಿದ್ದರು. ಆದರೆ ಒಬ್ಬರಲ್ಲ ಇಬ್ಬರಲ್ಲ ಅನೇಕರು ಅಂಬರೀಶ್ ಅವರು ಶೂಟಿಂಗ್‍ಗೆ ಬಂದಿದ್ದನ್ನು ಕೇಳಿ ಊಟ ತಂದಿದ್ದರು ಅಂತ ನೆನಪಿಸಿಕೊಂಡರು.

ರಕ್ತಕಣ್ಣಿರು ಚಿತ್ರದ ‘ವೇದಾಂತಗಳು, ಸಿದ್ಧಾಂತಗಳು ಯಾರೋ ಬರೆದಿಟ್ಟ ಕಟ್ಟು ಕಥೆ. ಜೀವನದ ರಸ ಸವಿಯೋಕೆ ನಾನೇ ನಿಮಗೆ ದಂತ ಕಥೆ ಎಂಬ ಹಾಡಿನ ಮೂಲಕ ಅಂಬಿ ಏನು ಎಂಬುದನ್ನು ನಟ, ನಿದೇರ್ಶಕ, ಸಂಗೀತ ನಿರ್ದೇಶಕ ಸಾಧುಕೋಕಿಲಾ ಕಟ್ಟಿಕೊಟ್ಟರು.

vlcsnap 2019 01 13 07h09m08s132 e1547344496404

ಹಿರಿಯ ನಟಿ ಬಿ.ಸರೋಜಾದೇವಿ ಮಾತನಾಡಿ, ಅಂಬಿ ಏನನ್ನೂ ಬಯಸಿದವನಲ್ಲ. ಎಲ್ಲವೂ ಆತನನ್ನೇ ಹುಡುಕಿಕೊಂಡು ಬಂದಂತಿದ್ದು. ಆದರೆ ಸುಮಲತಾ ಅವರನ್ನು ಹೆಚ್ಚು ಇಷ್ಟಪಟ್ಟ ಅಂಬಿ, ಮಡದಿಯಾಗಿ ಪಡೆದರು. ರಾಜನಾಗಿಯೇ ಬಂದ ರೆಬೆಲ್ ಸ್ಟಾರ್ ರಾಜನಾಗೇ ಹೋದ ಎಂದ ಅವರು, ನನ್ನ ಆಯಸ್ಸು ಕೊಡ್ತೀನಿ ಅಂದ್ರೆ ಯಾರಿಗೆ ಬೇಕು ನಿಮ್ಮ ನೆಕ್ಲೇಸ್ ಕೊಡಿ ಅಂತ ಅಂಬರೀಶ್ ಒಮ್ಮೆ ಹಾಸ್ಯ ಮಾಡಿದ್ದರು ಎಂದು ನೆನೆದು ಕಣ್ಣೀರಾದರು.

ಅಂಬರೀಶ್ ಪುತ್ರ ಅಭಿಷೇಕ್ ಮಾತನಾಡಿ, ನಮ್ಮಪ್ಪನ ಬಗ್ಗೆ ಹೆಚ್ಚಾಗಿ ನಾನು ಏನು ಹೇಳಲ್ಲ. ಅಂಬರೀಶ್ ಅವರು ಹೇಗಿದ್ದರು, ಹೇಗೆ ಹೋದರು ಅಂತ ನಿಮಗೆ ಗೊತ್ತು. ಹಣ ಮುಖ್ಯ ಅಲ್ಲ ಮಗನೇ ಜನ ಮುಖ್ಯ ಅಂತ ಅಪ್ಪ ಯಾವಾಗ್ಲೂ ಹೇಳುತ್ತಿದ್ದರು. ಅಂತ್ಯಸಂಸ್ಕಾರದಲ್ಲಿಯೂ ಅಭಿಮಾನವನ್ನು ಮಂಡ್ಯ ಜನತೆ ಮೆರೆಯಿತು. ನಿಮಗೆ ನಾನು ಚಿರಋಣಿ ಎಂದರು.

vlcsnap 2019 01 13 07h10m09s235 e1547344539171

ಅಭಿಷೇಕ್ ಮಾತನಾಡುವಾಗ ಕೆಲ ಅಭಿಮಾನಿಗಳು ಕೂಗಾಡುತ್ತಿದ್ದರು. ಈ ವೇಳೆ ಅಂಬಿ ಸ್ಟೇಲ್‍ನಲ್ಲಿಯೇ ಅಭಿಷೇಕ್ ಕೂಗಾಡಿ ನಮ್ಮಪ್ಪನಿಗೂ ಕೇಳಲಿ ಎಂದು ಭಾವುಕರಾದರು. ನಮ್ಮ ತಾಯಿ ನಿಮ್ಮ ಪ್ರೀತಿಯಲ್ಲಿ ಒಂದಿಷ್ಟು ಭಾಗ ಮಗ ಅಭಿಷೇಕ್ ಕೊಡಿ ಅಂತ ಕೇಳಿದ್ದಾರೆ. ಅಪ್ಪ ನಡೆದ ದಾರಿಯಲ್ಲಿ ನಡೆದರೆ ಅಷ್ಟೇ ಪ್ರೀತಿ ನಮಗೆ ಕೊಡುತ್ತಾರೆ ಎಂದು ಸುಮಲತಾ ಅವರಿಗೆ ಅಭಿಷೇಕ್ ಇದೇ ವೇಳೆ ಹೇಳಿದರು.

https://www.youtube.com/watch?v=vRxf0E_5PXE

https://www.youtube.com/watch?v=tv9fwk6eo9Q

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:abhishekAmbareeshmandyaPublic TVrebel starRocking Star YashRockline VenkateshSumalathaಅಭಿಷೇಕ್ಪಬ್ಲಿಕ್ ಟಿವಿಮಂಡ್ಯರಾಕಿಂಗ್ ಸ್ಟಾರ್ ಯಶ್ರಾಕ್‍ಲೈನ್ ವೆಂಕಟೇಶ್ರೆಬೆಲ್ ಸ್ಟಾರ್ ಅಂಬರೀಶ್ಸುಮಲತಾ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Dowry Harassment Belagavi Housewife Suicide
Belgaum

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

Public TV
By Public TV
24 minutes ago
haris house ED raid
Bengaluru City

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

Public TV
By Public TV
31 minutes ago
YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
56 minutes ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
2 hours ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
2 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?