ಮುದ್ದು ಮನಸ್ಸೆ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ (Arun Ram Gowda), ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು.ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು. ಆನಂತರ ಸಿನಿಮಾ ರಂಗದಿಂದ ದೂರವಾದರು. ಒಳ್ಳೊಳ್ಳೆ ಚಿತ್ರಗಳನ್ನು ಮಾಡಿದ್ದವರು ಸಡನ್ನಾಗಿ ದೂರವಾಗಿದ್ದು ಯಾಕೆ ಎಂಬ ಪ್ರಶ್ನೆ ಮೂಡಿತ್ತು.
- Advertisement 2
ಇದೀಗ ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬ. ಈ ದಿನದಂದು ತಮ್ಮ ಚಿತ್ರದ ಮೊದಲ ಗ್ಲಿಂಪ್ಸನ್ನು (First Glimpse) ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ
- Advertisement 3
- Advertisement 4
ಇದೊಂದು ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಸಿನಿಮಾ ಎಂದು ತಿಳಿಸಿರುವ ಅರುಣ್ ರಾಮ್ ಗೌಡ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ನುರಿತರವೇ ಇರುತ್ತಾರೆ ಎನ್ನುತ್ತಾರೆ ಅರು ಗೌಡ.
ಮುಂದುವರೆದು ಮಾತನಾಡಿರುವ ಅವರು, ‘ನನ್ನ ಹುಟ್ಟುಹಬ್ಬದ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇನೆ’ ಎಂದು ಹೇಳಿದ್ದಾರೆ.
Web Stories