ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಖುಷಿ ಆಯ್ತು: ನಂದ ಕಿಶೋರ್

Public TV
1 Min Read
nanda kishore

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ (Darshan) 5 ತಿಂಗಳ ನಂತರ ಜಾಮೀನು (Bail) ಸಿಕ್ಕಿರೋದು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಈ ಕುರಿತು ನಟನ ಆಪ್ತ ‌’ಪೊಗರು’ ಚಿತ್ರದ ಡೈರೆಕ್ಟರ್ ನಂದ ಕಿಶೋರ್ (Nanda Kishore) ಪ್ರತಿಕ್ರಿಯಿಸಿ, ದರ್ಶನ್‌ಗೆ ಜಾಮೀನು ಸಿಕ್ಕಿದ್ದು, ಖುಷಿ ಆಯ್ತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

Darshan 2

ಎಲ್ಲರಿಗೂ ನಮಸ್ಕಾರ ಒಂದು ಸಂತೋಷದ ಸುದ್ದಿ ಅಂತಲೇ ಹೇಳಬಹುದು. ನಾನು ದೇವಸ್ಥಾನದಲ್ಲಿದ್ದೆ ಈಗ ಗೊತ್ತಾಯ್ತು. ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ ತುಂಬಾ ತುಂಬಾ ಸಂತೋಷ ಆಯಿತು. ಅವರಿಗೆ, ಅವರ ಕುಟುಂಬಸ್ಥರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ. ಕನ್ನಡ ಚಿತ್ರರಂಗದಲ್ಲಿ ಮತ್ತೆ ಸಂಭ್ರಮ ಮನೆ ಮಾಡುತ್ತದೆ. ಎಲ್ಲರಿಗೂ ಹ್ಯಾಪಿ ದೀಪಾವಳಿ ಎಂದು ನಂದ ಕಿಶೋರ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

nanda kishore 1

ಅಂದಹಾಗೆ, ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Share This Article