ಇನ್ಮುಂದೆ ಇಂತಹ ಸಿನಿಮಾ ಮಾಡುವ ನಿರ್ದೇಶಕರಿಗೆ ನನ್ನ ಮೊದಲ ಆದ್ಯತೆ: ದರ್ಶನ್

Public TV
1 Min Read
Darshan 3 900x600 1

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಸಿನಿಮಾರಂಗದಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದಾರೆ. ಇವರು ಒಂದು ಸಿನಿಮಾ ಮುಗಿಯುವವರೆಗೂ ಮತ್ತೊಂದು ಚಿತ್ರದ ಬಗ್ಗೆ ಮತ್ತು ಡೇಟ್ಸ್ ಗಳ ಬಗ್ಗೆ ಆಗಲಿ ಎಲ್ಲಿಯೂ ಮಾತನಾಡುವುದಿಲ್ಲ.

ದರ್ಶನ್ ಕೆಲಸದಲ್ಲಿ ಯಾವಾಗಲೂ ಶಿಸ್ತು ಕಾಪಾಡುತ್ತಾರೆ. ಅಷ್ಟೇ ಅಲ್ಲದೇ ನಿರ್ದೇಶಕರಿಗೆ ಇಷ್ಟೇ ದಿನ ಡೇಟ್ಸ್ ಕೊಡುವುದು ಎಂದು ನಿರ್ಧಾರ ಮಾಡುತ್ತಾರೆ. ಆದರೆ ಕೆಲವೇ ಕೆಲ ನಿರ್ದೆಶಕರಿಗೆ ಚಾಲೆಂಜಿಂಗ್ ಸ್ಟಾರ್ ಮೊದಲ ಆದ್ಯತೆ ಕೊಡುತ್ತೇನೆ ಎಂದು ಹೇಳಿದ್ದಾರೆ.

ದರ್ಶನ್ ಅಭಿನಯದ 50 ನೇ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. 50 ನೇ ಚಿತ್ರ ಪೌರಾಣಿಕ ಸಿನಿಮಾ ಆಗಿರುವುದರಿಂದ ಖುಷಿಯಾಗಿದ್ದಾರೆ. ಪೌರಾಣಿಕ ಮತ್ತು ಐತಿಹಾಸಿಕ ಸಿನಿಮಾ ಮಾಡಲು ಬರುವ ನಿರ್ದೇಶಕರಿಗೆ ದರ್ಶನ್ ಮೊದಲ ಆದ್ಯತೆ ನೀಡುತ್ತಾರೆ ಎಂದು ತಿಳಿದು ಬಂದಿದೆ.

Darshan

ದರ್ಶನ್ ಕಾಲ್ ಶೀಟ್ ಪಡೆದುಕೊಳ್ಳಲು ನಿರ್ದೇಶಕರು ಕ್ಯೂನಲ್ಲಿ ನಿಂತಿರುತ್ತಾರೆ. ಇಂತಹ ಸಮಯದಲ್ಲಿ ಐತಿಹಾಸಿಕ ಮತ್ತು ಪೌರಾಣಿಕ ಕಥೆ ಮಾಡಿರುವ ನಿರ್ದೇಶಕರಿಗೆ ದರ್ಶನ್ ಡೇಟ್ಸ್ ಕೊಡುತ್ತಾರಾ ಎನ್ನುವ ಪ್ರಶ್ನೆಗೆ ದರ್ಶನ್ ಉತ್ತರಿಸಿದ್ದು, ಅಂತಹ ನಿರ್ದೇಶಕ ಮತ್ತು ನಿರ್ಮಾಪಕರಿಗೆ ಆದ್ಯತೆ ನೀಡುತ್ತೇನೆ. ಅದಕ್ಕಾಗಿ ಕಮರ್ಷಿಯಲ್ ಚಿತ್ರಗಳನ್ನ ಪಕ್ಕಕ್ಕೆ ಇಡುತ್ತೇನೆ ಎಂದು ತಿಳಿಸಿದ್ದಾರೆ.

ಕನ್ನಡ ಸಿನಿಮಾರಂಗದಲ್ಲಿ ಐತಿಹಾಸಿಕ ಮತ್ತು ಪೌರಾಣಿಕ ಚಿತ್ರಗಳನ್ನ ನಿರ್ಮಾಣ ಮಾಡುವವರು ತುಂಬಾ ಕಡಿಮೆ. ಇಂತಹ ಚಿತ್ರ ಮಾಡುತ್ತೀನಿ ಅಂತ ಬರುವವರೇ ಕಡಿಮೆ. ಆದ್ದರಿಂದ ಅಂತಹ ಅವಕಾಶ ಸಿಕ್ಕಾಗ ಖಂಡಿತ ಬಿಡುವುದಿಲ್ಲ ಅಂತ ದರ್ಶನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *