ಜೀವನ ನಿರ್ವಹಣೆಗೆ ಟ್ಯಾಕ್ಸಿ ಓಡಿಸುತ್ತಿದ್ದ ಶಂಕರ್ ಅಶ್ವಥ್‍ಗೆ ಆಸರೆಯಾದ ದರ್ಶನ್!

Public TV
1 Min Read
SHANKAR ASHWATH DARSHAN COLLAGE

ಬೆಂಗಳೂರು: ಸಿನಿಮಾ ಅವಕಾಶ ಇಲ್ಲದೆ ಊಬರ್ ಕ್ಯಾಬ್ ಓಡಿಸುತ್ತಿರುವ ಹಿರಿಯ ನಟ ಕೆ.ಎಸ್.ಅಶ್ವಥ್ ಅವರ ಪುತ್ರ ಶಂಕರ್ ಅಶ್ವಥ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.

ಶಂಕರ್ ಅಶ್ವಥ್ ಕ್ಯಾಬ್ ಡ್ರೈವರ್ ಆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸುದ್ದಿ ತಿಳಿದ ಬಳಿಕ ಕನ್ನಡ ಚಿತ್ರರಂಗದ ಕೆಲವರು ಶಂಕರ್ ಸಹಾಯಕ್ಕೆ ಮುಂದಾಗಿದ್ದರು. ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶಂಕರ್ ಅಶ್ವಥ್ ಕುಟುಂಬಕ್ಕೆ ಪರೋಕ್ಷವಾಗಿ ನೆರವಾಗಿದ್ದಾರೆ. ಇದನ್ನೂ ಓದಿ: ಜೀವನ ನಿರ್ವಹಣೆಗೆ ಕ್ಯಾಬ್ ಡ್ರೈವರ್ ಆದ ಕೆ.ಎಸ್. ಅಶ್ವಥ್ ಪುತ್ರ!

Shankar ashwath Darshan

ಸದ್ಯ ಚಾಲೆಂಜಿಂಗ್ ಸ್ಟಾರ್ ಅಭಿನಯಿಸುತ್ತಿರುವ ಯಜಮಾನ ಚಿತ್ರದಲ್ಲಿ ಶಂಕರ್ ಅಶ್ವಥ್ ಅವರಿಗೂ ಸಿನಿಮಾದಲ್ಲಿ ಅವಕಾಶ ನೀಡಿ ಎಂದು ದರ್ಶನ್ ಚಿತ್ರತಂಡದ ಹತ್ತಿರ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಶಂಕರ್ ಅಶ್ವಥ್ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದೇನೆ: ಶಂಕರ್ ಅಶ್ವಥ್

ಯಜಮಾನ ಚಿತ್ರದಲ್ಲಿ ನನಗೂ ಅವಕಾಶ ನೀಡುವಂತೆ ದರ್ಶನ್ ಚಿತ್ರತಂಡಕ್ಕೆ ಹೇಳಿದ್ದಾರೆ ಎಂದು ಸ್ವತಃ ಶಂಕರ್ ಅಶ್ವಥ್ ತಮ್ಮ ಫೇಸ್ ಬುಕ್‍ನಲ್ಲಿ ಹೇಳಿಕೊಂಡಿದ್ದಾರೆ. ಸದ್ಯ ಶಂಕರ್ ಅಶ್ವಥ್ ಅವರಿಗೆ ಸಿನಿಮಾ ಅವಕಾಶಗಳು ಹುಡುಕಿಕೊಂಡು ಬರುತ್ತಿದೆ. ಇದನ್ನೂ ಓದಿ: ಶಂಕರ್ ಅಶ್ವಥ್‍ರನ್ನು ಭೇಟಿ ಮಾಡಿದ ಪ್ರಥಮ್

Shankar ashwath Darshan 2

Share This Article
Leave a Comment

Leave a Reply

Your email address will not be published. Required fields are marked *