ನಟ ದರ್ಶನ್ (Darshan) ಅವರ ಕೈಗೆ ಬಲವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಅವರು ಆಪರೇಷನ್ (Operation) ಗೆ ಒಳಗಾಗಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದರ್ಶನ್ ಅವರೇ ಹೇಳಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಇಂದು ಆಸ್ಪತ್ರೆಗೆ ಅಡ್ಮಿಟ್ ಆಗಿ , ನಾಳೆ ಆಪರೇಷನ್ ಗೆ ಒಳಗಾಗಲಿದ್ದೇನೆ ಎಂದಿದ್ದಾರೆ.
ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗಾಗಲೇ ದರ್ಶನ್ ಅವರ ಕೈಗೆ ಆಪರೇಷನ್ ಆಗಬೇಕಿತ್ತು. ಆದರೆ, ಈ ಸಭೆಗೆ ಬರುತ್ತೇನೆ ಎಂದು ಸುಮಲತಾ ಅವರಿಗೆ ದರ್ಶನ್ ಮಾತು ಕೊಟ್ಟಿದ್ದರಂತೆ. ಮಾತು ತಪ್ಪಬಾರದು ಎನ್ನುವ ಕಾರಣಕ್ಕಾಗಿ ಆಪರೇಷನ್ ನನ್ನೇ ಮುಂದೂಡಿದ್ದಾರಂತೆ ದರ್ಶನ್.
ಶೂಟಿಂಗ್ ಸಮಯದಲ್ಲಿ ಅವರ ಕೈಗೆ ಏಟು ಬಿದ್ದಿದೆ ಎಂದು ಹೇಳಲಾಗುತ್ತಿದ್ದು, ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಈಗ ಆಪರೇಷನ್ ಗೆ ಒಳಗಾಗಲು ಅವರು ಮುಂದಾಗಿದ್ದಾರೆ.