ಪ್ರಾಣಿಗಳನ್ನು ದತ್ತು ಪಡೆದ ದರ್ಶನ್, ಸೃಜನ್ ಲೋಕೇಶ್, ದೇವರಾಜ್ ಕುಟುಂಬ!

Public TV
2 Min Read
DARSHAN SRUJAN

ಮೈಸೂರು: ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬಸ್ಥರು ಇಂದು ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ರು. ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಪಡೆದಿದ್ದು, ನಟ ದೇವರಾಜ್ ಕುಟುಂಬ ಚಿರತೆ, ದರ್ಶನ್ ಮತ್ತು ಸೃಜನ್ ಲೋಕೇಶ್ ರಿಂದ ಜಿರಾಫೆ ಮರಿಯನ್ನು ದತ್ತು ಪಡೆಯಲಾಯಿತು.

MYS 7

ಈ ವೇಳೆ ಜಿರಾಫೆ ಮರಿಗೆ `ತೂಗುಲೋಕ್’ ಎಂದು ಸೃಜನ್ ಲೋಕೇಶ್ ನಾಮಕರಣ ಮಾಡಿದ್ರು. ಈ ಹಿಂದೆ ಇಬ್ಬರು ಸೇರಿ ದತ್ತು ಪಡೆದ ಹುಲಿಗಳು ನಮ್ಮಂತೆಯೆ ಜೊತೆಯಾಗಿ ನಡೆಯುತ್ತಿವೆ. ಮೃಗಾಲಯದಲ್ಲಿ ಹುಲಿಗಳ ವಿಹಾರ ಕಂಡು ಸೃಜನ್ ಸಂತಸ ವ್ಯಕ್ತಪಡಿಸಿದ್ರು. ಹಾಸ್ಯ ನಟ ಕೀರ್ತಿ ಮೊಸಳೆಯನ್ನು ದತ್ತು ಸ್ವೀಕರಿಸಿದ್ರು.

vlcsnap 2018 09 23 13h56m20s91 e1537691602846

ಇತ್ತೀಚೆಗಷ್ಟೇ ದರ್ಶನ್ ಅವರು ಹುಲಿಯೊಂದನ್ನು ದತ್ತು ಪಡೆದಿದ್ದು, ಅದಕ್ಕೆ `ವಿನೀಶ್’ ಅಂತ ಹೆಸರಿಟ್ಟಿದ್ದಾರೆ. ನಾನು ಒಂದು ಹುಲಿನ ದತ್ತು ಪಡೆದುಕೊಂಡಿದ್ದು, ಅದರ ಹೆಸರು `ಅರ್ಜುನ’ ಎಂಬುದಾಗಿ ಇಟ್ಟಿದ್ದೇನೆ. ಒಟ್ಟಿನಲ್ಲಿ ಇಂದು ಎಲ್ಲರೂ ಸೇರಿ ಒಂದಷ್ಟು ಪ್ರಾಣಿಗಳನ್ನು ದತ್ತು ಪಡೆದುಕೊಂಡಿರುವುದು ಸಂತಸದ ವಿಚಾರ ಅಂತ ಸೃಜನ್ ಲೋಕೇಶ್ ತಿಳಿಸಿದ್ರು. ಇದನ್ನೂ ಓದಿ: ಕುಚುಕು ಗೆಳೆಯನನ್ನ ಹಿಂಬಾಲಿಸಿದ ಸೃಜನ್‍ಗೆ ದರ್ಶನ್ ಅಭಿನಂದನೆ

ದರ್ಶನ್ ಕರೆ:
ಇಂದು ನಾವು 5 ಸಾವಿರ ಅಥವಾ 10 ಸಾವಿರ ರೂ. ಗಳನ್ನು ಎಲ್ಲೋ ಕಳೆದು ಬಿಡ್ತೀವಿ. ಹೀಗಾಗಿ 1 ಸಾವಿರದಿಂದ ಹಿಡಿದು 1 ಲಕ್ಷದ 75 ಸಾವಿರದವರೆಗೆ ಪ್ರಾಣಿಗಳನ್ನು ಇಲ್ಲಿ ದತ್ತು ಪಡೆದುಕೊಳ್ಳಬಹುದು. ಅಷ್ಟು ಬೇಡ 10 ಅಥವಾ 20 ಸಾವಿರ ಖರ್ಚು ಮಾಡಿ ಜನರು ಪ್ರಾಣಿಗಳನ್ನು ದತ್ತು ಪಡೆದ್ರೆ ಅವುಗಳ ಸಂತತಿನೂ ಉಳಿಯುತ್ತದೆ. ಹಾಗೆಯೇ ಪ್ರಾಣಿಗಳನ್ನು ಸಾಕುವ ಖುಷಿಯೂ ನಮ್ಮದಾಗುತ್ತದೆ ಅಂತ ಸಲಹೆ ನೀಡಿದ್ರು.

MYS 1 1

ಪ್ರಾಣಿಗಳನ್ನು ಮನೆಯಲ್ಲಿ ಸಾಕಲು ಸಾಧ್ಯವಿಲ್ಲ. ಹೀಗಾಗಿ ಇಲ್ಲೇ ಒಂದು ಪ್ರಾಣಿಯನ್ನು ಸಾಕಬಹುದು. ಹೀಗಾಗಿ ಎಲ್ಲಾ ಜನರು ಇಂತಹ ಒಂದು ಪ್ರಯೋಗಕ್ಕೆ ಕೈ ಜೋಡಿಸಿ ಅಂತ ದರ್ಶನ್ ಇದೇ ವೇಳೆ ಮನವಿ ಮಾಡಿಕೊಂಡರು.

ಅರಣ್ಯ ಇಲಾಖೆ ರಾಯಾಭಾರಿಯಾದ ನಂತರ ಉತ್ತಮ ಗಾಳಿ ಸಿಕ್ಕಿದೆ. ಗಿಡ ಮರ ನೆಟ್ಟು ಸೆಲ್ಫಿ ತೆಗೆದುಕೊಳ್ಳುವುದು ದೊಡ್ಡದಲ್ಲ. ಕ್ರಮವಾಗಿ ಅರಣ್ಯ ಬೆಳೆಸಬೇಕು. ನಾವೂ ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಪ್ರಾಣಿಗಳು ನಾಡಿಗೆ ಬರುತ್ತಿದೆ. ಯುವಕರು ದುಡ್ಡನ್ನು ವಿಕೆಂಡ್ ನೆಪದಲ್ಲಿ ಖರ್ಚು ಮಾಡುತ್ತಾರೆ. ಅದೇ ಹಣವನ್ನು ಉಳಿಸಿ ಪ್ರಾಣಿಗಳನ್ನ ದತ್ತು ಪಡೆಯಲಿ. ಕಾಡು ಪ್ರಾಣಿಗಳನ್ನ ಮನೆಯಲ್ಲಿ ಸಾಕಲು ಸಾಧ್ಯವಿಲ್ಲ. ಈ ಕಾರಣದಿಂದ ಮೃಗಾಲಯಕ್ಕೆ ಬಂದು ದತ್ತು ಪಡೆಯಿರಿ ಅಂತ ಹೇಳುವ ಮೂಲಕ ಪ್ರಾಣಿಗಳ ದತ್ತು ಸ್ವೀಕಾರ ಮಾಡಲು ಯುವಕರಿಗೆ ನಟ ದರ್ಶನ್ ಇದೇ ವೇಳೆ ಕರೆ ನೀಡಿದ್ರು.

MYS 2 2

ದರ್ಶನ್ ಪ್ರೋತ್ಸಾಹ ಅಂದ್ರು ನಟ ದೇವರಾಜ್ ಪತ್ನಿ:
ಇದೇ ವೇಳೆ ನಟ ಪ್ರಜ್ವಲ್ ತಾಯಿ ಮಾತನಾಡಿ, ತುಂಬಾ ಇಷ್ಟವಾಯಿತು. ನನ್ನ ಮಗ ದರ್ಶನ್ ಸರ್ ಅವರು ನನಗೆ ಮಾರ್ಗದರ್ಶನ ಮಾಡಿದ್ರು. ಹೀಗಾಗಿ ನಾನು ಚಿರತೆಯನ್ನು ದತ್ತು ಪಡೆದುಕೊಂಡಿದ್ದೇನೆ. ನನಗೆ ಪ್ರಾಣಿಗಳೆಂದರೆ ನನಗೆ ಮೊದಲಿನಿಂದಲೂ ತುಂಬಾ ಇಷ್ಟ. ಇದೀಗ ಅದಕ್ಕೆ ಪ್ರೋತ್ಸಾಹ ಕೊಟ್ಟಿದ್ದು ನನ್ನ ಮಗ. ಹೀಗಾಗಿ ತುಂಬಾ ಸಂತೋಷವಾಗ್ತಿದೆ. ಇತ್ತೀಚೆಗಷ್ಟೆ ನಾನು ಪ್ರಾಣಿಗಳನ್ನು ನೋಡಿಕೊಂಡು ಬಂದಿದ್ದೇನೆ ಅಂತ ಹೇಳಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

MYS 3 3

Share This Article
Leave a Comment

Leave a Reply

Your email address will not be published. Required fields are marked *