ಬೆಂಗಳೂರು: ಭಾನುವಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಅವರ ಬಾಲ್ಯದ ಗೆಳತಿಯ ಪ್ರೇರಣ ನಿಶ್ಚಿತಾರ್ಥ. ಈಗಾಗಲೇ ಕುಟುಂಬದವರು ಅದ್ಧೂರಿಯಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಧ್ರುವ ಸರ್ಜಾ ತನ್ನ ಬಾಲ್ಯದ ಗೆಳತಿಗೆ ನಿಶ್ಚಿತಾರ್ಥದಲ್ಲಿ ತೊಡಿಸಲು ಕೊಂಡಿರುವ ಉಂಗುರದ ಬೆಲೆ 21 ಲಕ್ಷ ರೂ. ಮೌಲ್ಯದ್ದಾಗಿದ್ದು, ಈ ಉಂಗುರ ವಜ್ರ ಖಚಿತವಾಗಿದೆ. ಇದರ ಸ್ಪೆಷಲ್ ಅಂದರೆ ಮಧ್ಯದಲ್ಲಿರುವ ವಜ್ರದ ಹರಳು 1.45 ಕ್ಯಾರೆಟ್ನ ಡೈಮಂಡ್ ಸಾಲಿಟೇರ್ ಇದ್ದು, ಉಂಗುರದ ಸುತ್ತಲಿನ ವಜ್ರದ ಹರಳುಗಳು 2.600 ಕ್ಯಾರೆಟ್ ಹೊಂದಿದೆ.
ಧ್ರುವ ಸರ್ಜಾರ ಬಾಲ್ಯದ ಗೆಳತಿ ಪ್ರೇರಣಾ ಶಂಕರ್ ಗೆ ಈ ಉಂಗುರ ತೊಡಿಸಿ ಮದುವೆ ನಿಶ್ಚಯ ಮಾಡಿಕೊಳ್ಳಲಿದ್ದಾರೆ. ಬನಶಂಕರಿ ಬಳಿಯ ಧರ್ಮಗಿರಿ ದೇವಾಲಯದ ಆವರಣದಲ್ಲಿ ಧ್ರುವ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆ ನಡೆದಿದೆ. ಆರ್ಟ್ ಡೈರೆಕ್ಟರ್ ಅರುಣ್ ಸಾಗರ್ ಸೆಟ್ ನಿರ್ಮಾಣದಲ್ಲಿ ತೊಡಗಿದ್ದಾರೆ.
ಹಸಿರು ಥೀಮ್ನಲ್ಲಿ ತೆಂಗಿನ ಗರಿಗಳಿಂದ ನಿರ್ಮಾಣವಾಗುತ್ತಿರುವ ಸೆಟ್ಗೆ ಸಾಂಪ್ರದಾಯಿಕ ಪರಿಕರಗಳನ್ನೇ ಡೆಕೋರೇಷನ್ಗೆ ಉಪಯೋಗಿಸಲಾಗಿದೆ. ಬೆಳಗ್ಗೆ 10 ಗಂಟೆಯ ಶುಭ ಮುಹೂರ್ತದಲ್ಲಿ ಧ್ರುವ ಸರ್ಜಾ 50 ಗೋವುಗಳನ್ನ ತರಿಸಿ ಗೋ ಪೂಜೆ ಮಾಡಿ ವಿಶೇಷ ರೀತಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವುದಕ್ಕೆ ಧ್ರುವ ಯೋಚಿಸಿದ್ದು, ಈ ಕಾರ್ಯಕ್ರಮಕ್ಕೆ ಸರ್ಜಾ ಕುಟುಂಬ ಹಾಗೂ ಕನ್ನಡ ಚಿತ್ರರಂಗದ ಸ್ಟಾರ್ ನಟರು ಆಗಮಿಸಿಸಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv