ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿಶ್ಚಿತಾರ್ಥ ಶಾಸ್ತ್ರಕ್ಕೆ ಅದ್ಧೂರಿಯಾಗಿ ತಯಾರಿ ನಡೆಯುತ್ತಿದೆ.
ಬೆಂಗಳೂರಿನ ಬನಶಂಕರಿ ಬಳಿಯ ಧರ್ಮಗಿರಿ ದೇವಾಲಯದ ಆವರಣದಲ್ಲಿ ಡಿಸೆಂಬರ್ 9 ರಂದು ಅಂದರೆ ನಾಳೆ ನಡೆಯುವ ಧ್ರುವ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಆರ್ಟ್ ಡೈರೆಕ್ಟರ್ ಅರುಣ್ ಸಾಗರ್ ಸೆಟ್ ನಿರ್ಮಾಣದಲ್ಲಿ ತೊಡಗಿದ್ದಾರೆ.
ಹಸಿರು ಥೀಮ್ನಲ್ಲಿ ತೆಂಗಿನ ಗರಿಗಳಿಂದ ನಿರ್ಮಾಣವಾಗುತ್ತಿರುವ ಸೆಟ್ಗೆ ಸಾಂಪ್ರದಾಯಿಕ ಪರಿಕರಗಳನ್ನೇ ಡೆಕೋರೇಷನ್ಗೆ ಉಪಯೋಗಿಸಲಾಗಿದೆ. ಬೆಳಗ್ಗೆ 10 ಗಂಟೆಯ ಶುಭ ಮುಹೂರ್ತದಲ್ಲಿ ಧ್ರುವ ಸರ್ಜಾ, ಬಾಲ್ಯದ ಗೆಳತಿ ಪ್ರೇರಣಾ ಶಂಕರ್ ಗೆ ಉಂಗುರ ತೊಡಿಸಿ ಮದುವೆ ನಿಶ್ಚಯ ಮಾಡಿಕೊಳ್ಳಲಿದ್ದಾರೆ.
ಧ್ರುವ ಸರ್ಜಾ ನಿಶ್ಚಿತಾರ್ಥಕ್ಕೆ 50 ಗೋವುಗಳನ್ನ ತರಿಸಿ ಗೋ ಪೂಜೆ ಮಾಡಿ ವಿಭಿನ್ನ ರೀತಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವುದಕ್ಕೆ ಧ್ರುವ ಅವರು ವಿಶೇಷವಾಗಿ ಯೋಚಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ಜಾ ಕುಟುಂಬ ಹಾಗೂ ಕನ್ನಡ ಚಿತ್ರರಂಗದ ಸ್ಟಾರ್ ನಟರು ಕೂಡ ಆಗಮಿಸಲಿದ್ದಾರೆ.
ನಟ ಧ್ರುವ ಸರ್ಜಾ ಹಾಗೂ ಪ್ರೇರಣಾ ಶಂಕರ್ ಅವರ ನಿಶ್ಚಿತಾರ್ಥ ಆಮಂತ್ರಣ ಪತ್ರಿಕೆಯನ್ನು ಸಿಂಪಲ್ ಆಗಿ ಮಾಡಿಸಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ಇಬ್ಬರ ಫೋಟೋ ಜೊತೆಗೆ ವಿವರಗಳನ್ನು ನೀಡಲಾಗಿದೆ. ಇದೇ ಭಾನುವಾರ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ.
ಧ್ರುವ ಹಾಗೂ ಪ್ರೇರಣಾರದ್ದು 16 ವರ್ಷದ ಪ್ರೀತಿಯಾಗಿದ್ದು, ಧ್ರುವಗೆ 16 ವರ್ಷವಿದ್ದಾಗ ಅವರು ಪ್ರೀತಿಯಲ್ಲಿ ಬಿದ್ದಿದ್ದರು. ಸದ್ಯ ಈಗ ಅವರು ಪ್ರೇರಣಾ ಜೊತೆ ಮದುವೆ ಆಗುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv