ಸ್ಯಾಂಡಲ್ವುಡ್ ನಟ ದಿಗಂತ್ ಮಂಚಾಲೆ ಅವರ ಕುತ್ತಿಗೆಗೆ ಪೆಟ್ಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಏರ್ಲಿಫ್ಟ್ ಮೂಲಕ ಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ದಿಗಂತ್ಗೆ ಏನೂ ಆಗಿಲ್ಲ, ಆತಂಕ ಪಡಬೇಡಿ ಎಂದು ಅಭಿಮಾನಿಗಳಿಗೆ ದಿಗಂತ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ನಟ ತೆರಳಿದ್ದರು. ಸಮುದ್ರ ತಟದಲ್ಲಿ ಸೊಮರ್ ಸಾಲ್ಟ್ ಹೊಡೆಯುವ ವೇಳೆ ಮಿಸ್ಸಾಗಿ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕೂಡಲೇ ಗೋವಾದಲ್ಲಿಯೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಪತ್ನಿ ಐಂದ್ರಿತಾ ರೇ ಕೂಡ ದಿಗಂತ್ ಜೊತೆ ಇದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ದಿಗಂತ್ಗೆ ಪೆಟ್ಟು: ಕೆಲವೇ ಕ್ಷಣಗಳಲ್ಲಿ ಬೆಂಗ್ಳೂರಿಗೆ ಏರ್ಲಿಫ್ಟ್
Live Tv