ಸ್ಯಾಂಡಲ್ವುಡ್ ನಟ ದಿಗಂತ್ ಮಂಚಾಲೆ ಸ್ಪೈನಲ್ ಮೈನರ್ ಇಂಜುರಿ ಆಗಿದೆ ಎಂದು ದಿಗಂತ್ ತಂದೆ ತಂದೆ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ. ಇದೀಗ ದಿಗಂತ್ ಆರೋಗ್ಯ ಸ್ಥಿತಿಯ ಕುರಿತು ಮಾಧ್ಯಮಕ್ಕೆ ದಿಗಂತ್ ತಂದೆ ಪ್ರತಿಕ್ರಿಯೆ ನೀಡಿದ್ದಾರೆ.
ನಟ ದಿಗಂತ್ ತಮ್ಮ ಕುಟುಂಬ ಸಮೇತ ಗೋವಾ ಪ್ರವಾಸದಲ್ಲಿದ್ದರು. ಅಂತೆಯೇ ಬೀಚ್ನಲ್ಲಿ ಸ್ಟಂಟ್ ಮಾಡಲು ಹೋಗಿ ಕುತ್ತಿಗೆಗೆ ಏಟು ಮಾಡಿಕೊಂಡಿದ್ದಾರೆ. ಕೂಡಲೇ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿರುವ ನಟನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. ಸದ್ಯ ನಟ ಚಿಕಿತ್ಸೆ ಪಡೆಯುತ್ತಿರುವುದರ ಬಗ್ಗೆ ದಿಗಂತ್ ತಂದೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದಿಗಂತ್ಗೆ ಆಗಿರೋದು ಸಣ್ಣ ಗಾಯ, ಗಾಬರಿಪಡುವ ಅಗತ್ಯವಿಲ್ಲ: ಯೋಗರಾಜ್ ಭಟ್
ಡಾಕ್ಟರ್ ಹೇಳಿದ್ದಾರೆ ಏನೂ ಆಗಲ್ಲ ಅಂತ. ಒಂದೆರಡು ದಿನಗಳಲ್ಲಿ ಎದ್ದು ಓಡಾಡ್ತಾನೆ ಅಂತ ಹೇಳಿದ್ದಾರೆ. ಇನ್ಸಿಡೆಂಟ್ ಬಗ್ಗೆ ನಾನು ನೋಡಿಲ್ಲ. ಓಡಾಡುವಾಗ ಬೀಳೋದು ಸಹಜ. ಇದೀಗ ಚೆನ್ನಾಗಿ ಮಾತನಾಡ್ತಿದ್ದಾನೆ. ದಿಗಂತ್ನನ್ನು ಆಪರೇಷನ್ ಕರೆದುಕೊಂಡು ಹೋಗಿದ್ದಾರೆ. ಮೈನರ್ ಇಂಜುರಿ ಆಗಿರೋದ್ರಿಂದ ಈಗಲೇ ಆಪರೇಷನ್ ಮಾಡ್ತೀವಿ ಅಂತ ಕರೆದುಕೊಂಡು ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಆಗಬಾರದು ಅಂತ ಈಗಲೇ ಆಪರೇಷನ್ ಮಾಡಲಿದ್ದಾರೆ. ಇನ್ನು ಡಾ.ವಿಧ್ಯಾದರ್ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ 3 ಗಂಟೆಗಳ ಕಾಲ ನಡೆಯಲಿದೆ ಅಂತಾ ದಿಗಂತ್ ತಂದೆ ಶ್ರೀ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ.