ಖ್ಯಾತ ನಟ ಹಾಗೂ ನಿರ್ದೇಶಕ ಸೂರ್ಯ ಕಿರಣ್ (Surya Kiran) ನಿಧನರಾಗಿದ್ದಾರೆ. ತೆಲುಗು ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಸೂರ್ಯ ಕಿರಣ್ ಅವರಿಗೆ ಜಾಂಡೀಸ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಕೇವಲ 48ರ ಹರೆಯದ ಸೂರ್ಯ ಕಿರಣ್ ಸಿನಿಮಾ ಮತ್ತು ಕಿರುತೆರೆ ರಂಗದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ರಾಜು ಬೈ ಮತ್ತು ಸತ್ಯಂ, ಬ್ರಹ್ಮಾಸ್ತ್ರ, ಚಾಪ್ಟರ್ 6 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಜೊತೆಗೆ ಬಿಗ್ ಬಾಸ್ ತೆಲುಗು ಸೀಸನ್ ನಲ್ಲೂ ಇವರು ಭಾಗಿಯಾಗಿದ್ದರು.
ಮೂಲತಃ ಕೇರಳದವರಾದ ಸೂರ್ಯ, ಹುಟ್ಟಿ ಬೆಳೆದದ್ದೆಲ್ಲ ಚೆನ್ನೈನಲ್ಲಿ. ಸಿನಿಮಾ ನಟರಾಗಿ ನೂರಾರು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ವೈಯಕ್ತಿಕ ಬದುಕಿನಲ್ಲಿ ಸೋತಿದ್ದರು ಎನ್ನುವ ಮಾಹಿತಿ ಕೂಡ ಇದೆ.