ಪೊಲೀಸರಲ್ಲಿ ಕ್ಷಮೆಯಾಚಿಸಿದ ದುನಿಯಾ ವಿಜಯ್

Public TV
1 Min Read
duniya vijay

ಬೆಂಗಳೂರು: ನನ್ನಿಂದ ತಪ್ಪಾಗಿದೆ ಕ್ಷಮಿಸಿ. ತಲ್ವಾರ್‌ನಿಂದ ಕೇಕ್ ಕತ್ತರಿಸುವುದು ತಪ್ಪು ಎನ್ನುವುದು ಗೊತ್ತಿರಲಿಲ್ಲ ಎಂದು ದುನಿಯಾ ವಿಜಯ್ ಪೊಲೀಸರ ಮುಂದೆ ಕ್ಷಮೆ ಯಾಚಿಸಿದ್ದಾರೆ.

ನಟ ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬದಂದು ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧ ಗಿರಿನಗರ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ದುನಿಯಾ ವಿಜಯ್ ಇಂದು ಪೊಲೀಸ್ ವಿಚಾರಣೆಗೆ ಹಾಜರಾದರು. ಸತತ ಎರಡು ಗಂಟೆಗಳ ಕಾಲ ದುನಿಯಾ ವಿಜಯ್ ವಿವರಣೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

salaga

ವಿಚಾರಣೆ ಬಳಿಕ ಮಾತನಾಡಿದ ದುನಿಯಾ ವಿಜಯ್, ಘಟನೆ ಸಂಬಂಧ ಎಲ್ಲಾ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇನೆ. ಹುಟ್ಟುಹಬ್ಬದ ವೇಳೆ ಅಭಿಮಾನಿಯೊಬ್ಬ ಕೊಟ್ಟ ತಲ್ವಾರ್‍ನಿಂದ ಕೇಕ್ ಮಾಡಿದೆ. ಆಗ ಅದು ತಪ್ಪು ಎನ್ನುವುದು ನನಗೆ ಗೊತ್ತಾಗಿಲ್ಲ. ಇನ್ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದರು ಸ್ಪಷ್ಟನೆ ನೀಡಿದರು.

ಆಗಿದ್ದೇನು?:
ದುನಿಯಾ ವಿಜಯ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದರು. ಈ ವೇಳೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹೊಸ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಬಳಿಕ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ, ತಮ್ಮ ತಪ್ಪಿನ ಬಗ್ಗೆ ನಟ ವಿಜಯ್ ಒಪ್ಪಿಕೊಂಡು ಕ್ಷಮೆ ಕೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *