Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!

Bengaluru City

ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!

Public TV
Last updated: December 16, 2019 4:44 pm
Public TV
Share
2 Min Read
Harish Arasu e
SHARE

ಬದುಕಿನ ಅನಿವಾರ್ಯತೆಗಳು ಅದೆತ್ತೆತ್ತ ಅಲೆಸಿದರೂ ಕಲಾಸಕ್ತಿ ಎಂಬುದು ಯಾವ ಮಾಯಕದಲ್ಲಾದರೂ ತನ್ನ ತಕ್ಕೆಗೆ ಸೆಳೆದುಕೊಂಡು ಬಿಡುತ್ತದೆ. ಈ ಮಾತಿಗೆ ಉದಾಹರಣೆಯಂಥಾ ನೂರಾರು ಮಂದಿ ಚಿತ್ರರಂಗದಲ್ಲಿ ಸಿಗುತ್ತಾರೆ. ಅಂಥಾ ತೀವ್ರವಾದ ಸಿನಿಮಾಸಕ್ತಿಯೇ ಅಂಥವರನ್ನೆಲ್ಲ ನಟ ನಟಿಯರಾಗಿ, ಇತರೇ ವಿಭಾಗಗಳ ಪರಿಣಿತರನ್ನಾಗಿ, ಸಾಧಕರನ್ನಾಗಿ ನೆಲೆಗಾಣಿಸಿರುತ್ತದೆ. ಆ ಸಾಲಿನಲ್ಲಿ ಸೇರ್ಪಡೆಗೊಳ್ಳುವ ಹಾದಿಯಲ್ಲಿರುವವರು ಉದಯೋನ್ಮುಖ ನಟ ಹರೀಶ್ ಅರಸು.

ಹರೀಶ್ ಅವರದ್ದು ಬಹುಮುಖ ಪ್ರತಿಭೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬರಹಗಾರರಾಗಿಯೂ ಗುರುತಿಸಿಕೊಂಡಿರುವ ಹರೀಶ್ ಬದುಕಿನ ಅನಿವಾರ್ಯತೆಗೆ ಬಿದ್ದು ನಾನಾ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಸದ್ಯಕ್ಕೆ ಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಸಿನಿಮಾ ಪ್ರಮೋಶನ್ ಕಾರ್ಯದಲ್ಲಿ ಗುರುತಿಸಿಕೊಂಡಿರೋ ಹರೀಶ್ ಪಾಲಿಗೆ ಸಿನಿಮಾ ಎಂಬುದೇ ತನ್ನ ಐಡೆಂಟಿಟಿಯಾಗಬೇಕೆಂಬ ಆಳದ ಬಯಕೆಯಿದೆ. ಬಹುಶಃ ಅದಿಲ್ಲದೇ ಹೋಗಿದ್ದರೆ ನಟನೆಯ ಗುಂಗು ಹತ್ತಿಸಿಕೊಂಡು ಐಟಿ ಕ್ಷೇತ್ರದಿಂದ ಸಿನಿಮಾ ಕ್ಷೇತ್ರದತ್ತ ವಾಲಿಕೊಳ್ಳುವುದು ಸಾಧ್ಯವಾಗುತ್ತಿರಲಿಲ್ಲವೇನೋ…

Harish Arasu c

ಇದುವರೆಗೂ ಹಲವಾರು ಕಿರುಚಿತ್ರಗಳಲ್ಲಿ ನಟಿಸಿ ಅನುಭವ ಹೊಂದಿರುವ ಹರೀಶ್ ಅರಸು ಪೂರ್ಣಪ್ರಮಾಣದಲ್ಲಿ ನಟನಾಗಿ ಗುರುತಿಸಿಕೊಂಡಿದ್ದು ‘ಕನ್ನಡ ದೇಶದೊಳ್’ ಎಂಬ ಸಿನಿಮಾ ಮೂಲಕ. ಅದರಲ್ಲಿ ಅಪ್ಪಟ ಕನ್ನಡಪ್ರೇಮಿ ಹುಡುಗನಾಗಿ ನಟಿಸಿದ್ದ ಅವರು ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿದ್ದರು. ನಟನಾಗಿ ಸಿನಿಮಾದಲ್ಲಿ ಅದು ಅವರ ಪಾಲಿಗೆ ಮೊದಲ ಅನುಭವ. ಅದಕ್ಕೆ ಸಿಕ್ಕ ಪ್ರತಿಕ್ರಿಯೆಗಳಿಂದ ಭರವಸೆ ತುಂಬಿಕೊಂಡಿರುವ ಅವರೀಗ ‘ಧೀರ ಸಾಮ್ರಾಟ್’ ಎಂಬ ಸಿನಿಮಾದಲ್ಲಿ ಮಹತ್ವದ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಒಂದೊಳ್ಳೆ ಕಥೆ ಹೊಂದಿರುವ ಈ ಸಿನಿಮಾದಲ್ಲಿ ಅವರಿಗೆ ಅದಕ್ಕೆ ತಕ್ಕುದಾದ ಪಾತ್ರವೇ ಸಿಕ್ಕಿದೆಯಂತೆ. ಇದರ ಜೊತೆಗೆ ಮತ್ತೊಂದು ಸಿನಿಮಾ ಅವಕಾಶವೂ ಅವರ ಕೈಲಿದೆ. ಅದರ ಬಗ್ಗೆ ಇಷ್ಟರಲ್ಲಿಯೇ ಮಾಹಿತಿಗಳು ಜಾಹೀರಾಗಲಿವೆ.

ಹೀಗೆ ಸಾಫ್ಟ್‍ವೇರ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಲೇ ಸಿನಿಮಾ ರಂಗವನ್ನೇ ಪ್ರಧಾನವಾಗಿ ಆಯ್ಕೆ ಮಾಡಿಕೊಂಡಿರುವ ಹರೀಶ್ ಮೂಲತಃ ಕಡೂರಿನ ವಡೆಯರಳ್ಳಿಯವರು. ಮಧ್ಯಮ ವರ್ಗದ ರೈತಾಪಿ ಕುಟುಂಬದಿಂದ ಬಂದಿರುವ ಅವರಿಗೆ ಹಳ್ಳಿಯ ಸಹಜ ವಾತಾವರಣವೇ ಕಲೆಗಳ ಗುಂಗು ಹತ್ತುವಂತೆ ಮಾಡಿತ್ತು. ಆ ಕಾಲಕ್ಕೆ ಹರೀಶ್ ಅವರನ್ನು ಬಹುವಾಗಿ ಸೆಳೆದುಕೊಂಡಿದ್ದದ್ದು ನೃತ್ಯ. ಹಳ್ಳಿ ಕಾರ್ಯಕ್ರಮಗಳಲ್ಲಿ ಮೈಮರೆತು ಎಲ್ಲರೂ ಮೆಚ್ಚುವಂತೆ ನೃತ್ಯ ಮಾಡುತ್ತಿದ್ದ ಹರೀಶ್ ಆ ಕಾಲದಲ್ಲಿಯೇ ತಮ್ಮ ಹಳ್ಳಿಯಲ್ಲಿ ಪ್ರತಿಭಾವಂತರಾಗಿ ಗುರುತಿಸಿಕೊಂಡಿದ್ದವರು.

Harish Arasu b

ಇವರ ತಾತ ಗಂಗಯ್ಯ ಕಡೂರು ಸೀಮೆಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಾ ನಟನಾಗಿ ಪ್ರಸಿದ್ಧರಾಗಿದ್ದರಂತೆ. ಅವರು ಸುತ್ತಲ ಹತ್ತೂರುಗಳಲ್ಲಿಯೂ ಪ್ರಸಿದ್ಧಿ ಪಡೆದುಕೊಂಡಿರುವವರು. ಬಹುಶಃ ತಾತನ ಕಲಾಸಕ್ತಿಯ ಒಂದಂಶ ಹರೀಶ್ ಅವರೊಳಗೂ ಪ್ರವಹಿಸಿದ್ದರಿಂದಲೇ ಅವರೊಳಗೆ ಕಲಾಸಕ್ತಿ ಹುಟ್ಟಿಕೊಂಡಿದ್ದರೂ ಅಚ್ಚರಿಯೇನಿಲ್ಲ. ಶಾಲಾ ಕಾಲೇಜು ಹಂತದಲ್ಲಿ ಸಿನಿಮಾಸಕ್ತಿ ಇದ್ದರೂ ಆ ಕ್ಷಣದಲ್ಲಿ ಹರೀಶ್ ಅವರಿಗೆ ಬದುಕು ಕಟ್ಟಿಕೊಳ್ಳುವುದೇ ಮುಖ್ಯವಾಗಿತ್ತು. ಇದರಿಂದಾಗಿಯೇ ಸಾಫ್ಟ್‍ವೇರ್ ವಲಯದಲ್ಲಿ ಟ್ರಾನ್ಸ್‍ಪೋರ್ಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸಲಾರಂಭಿಸಿದ್ದರು.

ಆ ನಂತರದಲ್ಲಿ ಸಮಾನ ಮನಸ್ಕರೊಂದಿಗೆ ಸೇರಿಕೊಂಡು ಫೇಸ್‍ಬುಕ್‍ನಲ್ಲಿ ವಾರಕ್ಕೊಂದರಂತೆ ಪ್ರಸಾರವಾಗುತ್ತಿದ್ದ ಸೀರೀಸ್‍ನಲ್ಲಿ ನಟಿಸಲಾರಂಭಿಸಿದ್ದರು. ಆ ನಂತರ ಒಂದಷ್ಟು ಕಿರುಚಿತ್ರಗಳಲ್ಲಿಯೂ ಹರೀಶ್ ನಟಿಸಿದ್ದರು. ಹೀಗೆ ಹಂತ ಹಂತವಾಗಿ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿಕೊಂಡು ಸಾಗಿ ಬಂದ ಹರೀಶ್ ಇದೀಗ ನಟನಾಗಿ ಗುರುತಿಸಿಕೊಂಡಿದ್ದಾರೆ. ಮುಂದೆಯೂ ನಟನಾಗಿಯೇ ನೆಲೆ ಕಂಡುಕೊಳ್ಳುವ ಇರಾದೆಯನ್ನೂ ಹೊಂದಿದ್ದಾರೆ. ಯಾವ ಪಾತ್ರವಾದರೂ ಮಾಡುವ ಛಾತಿ ಹೊಂದಿರೋ ಹರೀಶ್ ಅರಸು ಮತ್ತೊಂದಷ್ಟು ಅವಕಾಶ ಗಿಟ್ಟಿಸಿಕೊಂಡು ನಟನಾಗಿ ನೆಲೆ ಕಂಡುಕೊಳ್ಳುವ ಲಕ್ಷಣಗಳೇ ದಟ್ಟವಾಗಿವೆ.

Harish Arasu a

TAGGED:Dheera SamratHarish ArasuKannada DeshadolPublic TVsandalwoodshort filmsoftwareಕನ್ನಡ ದೇಶದೊಳ್ಕಿರುಚಿತ್ರಧೀರ ಸಾಮ್ರಾಟ್ಪಬ್ಲಿಕ್ ಟಿವಿಸಾಫ್ಟ್ ವೇರ್ಸ್ಯಾಂಡಲ್‍ವುಡ್ಹರೀಶ್ ಅರಸು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
1 hour ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
2 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
2 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
2 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
2 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?