Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!

Bengaluru City

ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!

Public TV
Last updated: December 16, 2019 4:44 pm
Public TV
Share
2 Min Read
Harish Arasu e
SHARE

ಬದುಕಿನ ಅನಿವಾರ್ಯತೆಗಳು ಅದೆತ್ತೆತ್ತ ಅಲೆಸಿದರೂ ಕಲಾಸಕ್ತಿ ಎಂಬುದು ಯಾವ ಮಾಯಕದಲ್ಲಾದರೂ ತನ್ನ ತಕ್ಕೆಗೆ ಸೆಳೆದುಕೊಂಡು ಬಿಡುತ್ತದೆ. ಈ ಮಾತಿಗೆ ಉದಾಹರಣೆಯಂಥಾ ನೂರಾರು ಮಂದಿ ಚಿತ್ರರಂಗದಲ್ಲಿ ಸಿಗುತ್ತಾರೆ. ಅಂಥಾ ತೀವ್ರವಾದ ಸಿನಿಮಾಸಕ್ತಿಯೇ ಅಂಥವರನ್ನೆಲ್ಲ ನಟ ನಟಿಯರಾಗಿ, ಇತರೇ ವಿಭಾಗಗಳ ಪರಿಣಿತರನ್ನಾಗಿ, ಸಾಧಕರನ್ನಾಗಿ ನೆಲೆಗಾಣಿಸಿರುತ್ತದೆ. ಆ ಸಾಲಿನಲ್ಲಿ ಸೇರ್ಪಡೆಗೊಳ್ಳುವ ಹಾದಿಯಲ್ಲಿರುವವರು ಉದಯೋನ್ಮುಖ ನಟ ಹರೀಶ್ ಅರಸು.

ಹರೀಶ್ ಅವರದ್ದು ಬಹುಮುಖ ಪ್ರತಿಭೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬರಹಗಾರರಾಗಿಯೂ ಗುರುತಿಸಿಕೊಂಡಿರುವ ಹರೀಶ್ ಬದುಕಿನ ಅನಿವಾರ್ಯತೆಗೆ ಬಿದ್ದು ನಾನಾ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಸದ್ಯಕ್ಕೆ ಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಸಿನಿಮಾ ಪ್ರಮೋಶನ್ ಕಾರ್ಯದಲ್ಲಿ ಗುರುತಿಸಿಕೊಂಡಿರೋ ಹರೀಶ್ ಪಾಲಿಗೆ ಸಿನಿಮಾ ಎಂಬುದೇ ತನ್ನ ಐಡೆಂಟಿಟಿಯಾಗಬೇಕೆಂಬ ಆಳದ ಬಯಕೆಯಿದೆ. ಬಹುಶಃ ಅದಿಲ್ಲದೇ ಹೋಗಿದ್ದರೆ ನಟನೆಯ ಗುಂಗು ಹತ್ತಿಸಿಕೊಂಡು ಐಟಿ ಕ್ಷೇತ್ರದಿಂದ ಸಿನಿಮಾ ಕ್ಷೇತ್ರದತ್ತ ವಾಲಿಕೊಳ್ಳುವುದು ಸಾಧ್ಯವಾಗುತ್ತಿರಲಿಲ್ಲವೇನೋ…

Harish Arasu c

ಇದುವರೆಗೂ ಹಲವಾರು ಕಿರುಚಿತ್ರಗಳಲ್ಲಿ ನಟಿಸಿ ಅನುಭವ ಹೊಂದಿರುವ ಹರೀಶ್ ಅರಸು ಪೂರ್ಣಪ್ರಮಾಣದಲ್ಲಿ ನಟನಾಗಿ ಗುರುತಿಸಿಕೊಂಡಿದ್ದು ‘ಕನ್ನಡ ದೇಶದೊಳ್’ ಎಂಬ ಸಿನಿಮಾ ಮೂಲಕ. ಅದರಲ್ಲಿ ಅಪ್ಪಟ ಕನ್ನಡಪ್ರೇಮಿ ಹುಡುಗನಾಗಿ ನಟಿಸಿದ್ದ ಅವರು ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿದ್ದರು. ನಟನಾಗಿ ಸಿನಿಮಾದಲ್ಲಿ ಅದು ಅವರ ಪಾಲಿಗೆ ಮೊದಲ ಅನುಭವ. ಅದಕ್ಕೆ ಸಿಕ್ಕ ಪ್ರತಿಕ್ರಿಯೆಗಳಿಂದ ಭರವಸೆ ತುಂಬಿಕೊಂಡಿರುವ ಅವರೀಗ ‘ಧೀರ ಸಾಮ್ರಾಟ್’ ಎಂಬ ಸಿನಿಮಾದಲ್ಲಿ ಮಹತ್ವದ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಒಂದೊಳ್ಳೆ ಕಥೆ ಹೊಂದಿರುವ ಈ ಸಿನಿಮಾದಲ್ಲಿ ಅವರಿಗೆ ಅದಕ್ಕೆ ತಕ್ಕುದಾದ ಪಾತ್ರವೇ ಸಿಕ್ಕಿದೆಯಂತೆ. ಇದರ ಜೊತೆಗೆ ಮತ್ತೊಂದು ಸಿನಿಮಾ ಅವಕಾಶವೂ ಅವರ ಕೈಲಿದೆ. ಅದರ ಬಗ್ಗೆ ಇಷ್ಟರಲ್ಲಿಯೇ ಮಾಹಿತಿಗಳು ಜಾಹೀರಾಗಲಿವೆ.

ಹೀಗೆ ಸಾಫ್ಟ್‍ವೇರ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಲೇ ಸಿನಿಮಾ ರಂಗವನ್ನೇ ಪ್ರಧಾನವಾಗಿ ಆಯ್ಕೆ ಮಾಡಿಕೊಂಡಿರುವ ಹರೀಶ್ ಮೂಲತಃ ಕಡೂರಿನ ವಡೆಯರಳ್ಳಿಯವರು. ಮಧ್ಯಮ ವರ್ಗದ ರೈತಾಪಿ ಕುಟುಂಬದಿಂದ ಬಂದಿರುವ ಅವರಿಗೆ ಹಳ್ಳಿಯ ಸಹಜ ವಾತಾವರಣವೇ ಕಲೆಗಳ ಗುಂಗು ಹತ್ತುವಂತೆ ಮಾಡಿತ್ತು. ಆ ಕಾಲಕ್ಕೆ ಹರೀಶ್ ಅವರನ್ನು ಬಹುವಾಗಿ ಸೆಳೆದುಕೊಂಡಿದ್ದದ್ದು ನೃತ್ಯ. ಹಳ್ಳಿ ಕಾರ್ಯಕ್ರಮಗಳಲ್ಲಿ ಮೈಮರೆತು ಎಲ್ಲರೂ ಮೆಚ್ಚುವಂತೆ ನೃತ್ಯ ಮಾಡುತ್ತಿದ್ದ ಹರೀಶ್ ಆ ಕಾಲದಲ್ಲಿಯೇ ತಮ್ಮ ಹಳ್ಳಿಯಲ್ಲಿ ಪ್ರತಿಭಾವಂತರಾಗಿ ಗುರುತಿಸಿಕೊಂಡಿದ್ದವರು.

Harish Arasu b

ಇವರ ತಾತ ಗಂಗಯ್ಯ ಕಡೂರು ಸೀಮೆಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಾ ನಟನಾಗಿ ಪ್ರಸಿದ್ಧರಾಗಿದ್ದರಂತೆ. ಅವರು ಸುತ್ತಲ ಹತ್ತೂರುಗಳಲ್ಲಿಯೂ ಪ್ರಸಿದ್ಧಿ ಪಡೆದುಕೊಂಡಿರುವವರು. ಬಹುಶಃ ತಾತನ ಕಲಾಸಕ್ತಿಯ ಒಂದಂಶ ಹರೀಶ್ ಅವರೊಳಗೂ ಪ್ರವಹಿಸಿದ್ದರಿಂದಲೇ ಅವರೊಳಗೆ ಕಲಾಸಕ್ತಿ ಹುಟ್ಟಿಕೊಂಡಿದ್ದರೂ ಅಚ್ಚರಿಯೇನಿಲ್ಲ. ಶಾಲಾ ಕಾಲೇಜು ಹಂತದಲ್ಲಿ ಸಿನಿಮಾಸಕ್ತಿ ಇದ್ದರೂ ಆ ಕ್ಷಣದಲ್ಲಿ ಹರೀಶ್ ಅವರಿಗೆ ಬದುಕು ಕಟ್ಟಿಕೊಳ್ಳುವುದೇ ಮುಖ್ಯವಾಗಿತ್ತು. ಇದರಿಂದಾಗಿಯೇ ಸಾಫ್ಟ್‍ವೇರ್ ವಲಯದಲ್ಲಿ ಟ್ರಾನ್ಸ್‍ಪೋರ್ಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸಲಾರಂಭಿಸಿದ್ದರು.

ಆ ನಂತರದಲ್ಲಿ ಸಮಾನ ಮನಸ್ಕರೊಂದಿಗೆ ಸೇರಿಕೊಂಡು ಫೇಸ್‍ಬುಕ್‍ನಲ್ಲಿ ವಾರಕ್ಕೊಂದರಂತೆ ಪ್ರಸಾರವಾಗುತ್ತಿದ್ದ ಸೀರೀಸ್‍ನಲ್ಲಿ ನಟಿಸಲಾರಂಭಿಸಿದ್ದರು. ಆ ನಂತರ ಒಂದಷ್ಟು ಕಿರುಚಿತ್ರಗಳಲ್ಲಿಯೂ ಹರೀಶ್ ನಟಿಸಿದ್ದರು. ಹೀಗೆ ಹಂತ ಹಂತವಾಗಿ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿಕೊಂಡು ಸಾಗಿ ಬಂದ ಹರೀಶ್ ಇದೀಗ ನಟನಾಗಿ ಗುರುತಿಸಿಕೊಂಡಿದ್ದಾರೆ. ಮುಂದೆಯೂ ನಟನಾಗಿಯೇ ನೆಲೆ ಕಂಡುಕೊಳ್ಳುವ ಇರಾದೆಯನ್ನೂ ಹೊಂದಿದ್ದಾರೆ. ಯಾವ ಪಾತ್ರವಾದರೂ ಮಾಡುವ ಛಾತಿ ಹೊಂದಿರೋ ಹರೀಶ್ ಅರಸು ಮತ್ತೊಂದಷ್ಟು ಅವಕಾಶ ಗಿಟ್ಟಿಸಿಕೊಂಡು ನಟನಾಗಿ ನೆಲೆ ಕಂಡುಕೊಳ್ಳುವ ಲಕ್ಷಣಗಳೇ ದಟ್ಟವಾಗಿವೆ.

Harish Arasu a

TAGGED:Dheera SamratHarish ArasuKannada DeshadolPublic TVsandalwoodshort filmsoftwareಕನ್ನಡ ದೇಶದೊಳ್ಕಿರುಚಿತ್ರಧೀರ ಸಾಮ್ರಾಟ್ಪಬ್ಲಿಕ್ ಟಿವಿಸಾಫ್ಟ್ ವೇರ್ಸ್ಯಾಂಡಲ್‍ವುಡ್ಹರೀಶ್ ಅರಸು
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
7 minutes ago
Charmadi Ghat Elephant
Chikkamagaluru

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Public TV
By Public TV
12 minutes ago
Mohan Raj 2
Bengaluru City

ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್‌ ಆದ ಮೋಹನ!

Public TV
By Public TV
29 minutes ago
Villagers protested against illegal stone mining in several places in Anavatti Shivamogga
Districts

ಅಕ್ರಮ ಕಲ್ಲು ಗಣಿಗಾರಿಕೆ ಸ್ಫೋಟಕ್ಕೆ ಗರ್ಭಿಣಿಯರಿಗೆ ರಕ್ತಸ್ರಾವ – ಕ್ರಮಕೈಗೊಳ್ಳದ ಸಚಿವರ ವಿರುದ್ಧ ಆಕ್ರೋಶ

Public TV
By Public TV
46 minutes ago
Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
1 hour ago
Ram Mandir
Latest

Ayodhya | ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?