ಮಂತ್ರಾಲಯದಲ್ಲಿ ನಟ ಜಗ್ಗೇಶ್ ಹುಟ್ಟುಹಬ್ಬ ಆಚರಣೆ

Public TV
1 Min Read
rcr jaggesh

ರಾಯಚೂರು: ರಾಯರ ಸನ್ನಿಧಿ ಮಂತ್ರಾಲಯದಲ್ಲಿ ನವರಸನಾಯಕ ಜಗ್ಗೇಶ್ ಇಂದು ತಮ್ಮ 57ನೇ ಹುಟ್ಟುಹಬ್ಬ ಆಚರಿಸಿಕೊಂಡರು.

ಪ್ರತಿ ವರ್ಷದಂತೆ ಹುಟ್ಟುಹಬ್ಬದ ದಿನ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಜಗ್ಗೇಶ್ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತಪಡಿಸಿದರು.

rcr jaggesh e1584422401617

ಕೊರೊನಾ ಇದು ಮಾನವ ನಿರ್ಮಿತ ವೈರಾಣು. ಅಮೆರಿಕ, ರಷ್ಯಾ ಹಾಗೂ ಚೀನಾ ನಂಬರ್ ಒನ್ ಸ್ಥಾನಕ್ಕಾಗಿ ನಡೆದಿರುವ ಬಯೋಲಾಜಿಕಲ್ ವಾರ್ ಇದು. ಪ್ರಕೃತಿ ಆಗಾಗ ಇಂತಹ ರೋಗಗಳಿಂದ ಮಾನವನಿಗೆ ಎಚ್ಚರಿಸುತ್ತಿದೆ. ಈ ಹಿಂದಿನ ಶತಮಾನದಲ್ಲಿ ಪ್ಲೇಗ್ ಬಂದಿತ್ತು. ಈಗ ಕೊರೊನಾ ಬಂದಿದೆ. ಕೊರೊನಾ ಬಗ್ಗೆ ಭಯಬೇಡ ಜಾಗೃತಿಯಿಂದ ಇರಿ ಎಂದು ಹೇಳಿದರು.

ಇದೇ ವೇಳೆ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಶುಭಾಶಯ ಕೋರಿದರು. ಈ ನಾಡಿನ ಹೆಸರಾಂತ ನಟ, ಹಿರಿಯರ ಮಗ, ರಾಯರು ಪುನೀತ್‍ಗೆ ಆಯು, ಆರೋಗ್ಯ, ಭಾಗ್ಯ ನೀಡಲಿ ಎಂದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ, ಹೋರಾಟಗಾರ ಪಾಟೀಲ್ ಪುಟ್ಟಪ್ಪ ನಿಧನಕ್ಕೆ ಜಗ್ಗೇಶ್ ಸಂತಾಪ ಸೂಚಿಸಿದರು. 102 ವರ್ಷ ಈ ನಾಡು ನುಡಿಗಾಗಿ ಹೋರಾಟ ಮಾಡಿದ ಜೀವ ಅದು. ಅವರು ವಿಶ್ವೇಶ್ವರಯ್ಯನಂತೆ ಈ ನಾಡಿಗೆ ಶ್ರಮಿಸಿದವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *