ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ನಟ ರಕ್ಷಿತ್ ಶೆಟ್ಟಿ ಅವರಿಗೆ ಕಲಾತಪಸ್ವಿ ಎಂದು ಹೇಳುತ್ತಾ ಅವರ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ, “ನಾನು ಕಂಡ ಅದ್ಭುತ ಸಜ್ಜನಿಕೆಯ ಕಲಾಬಂಧು. ಸದಾ ಸಿನಿಮಾಗಾಗಿ ತುಡಿಯುವ ಕಲಾತಪಸ್ವಿ. ಇವನಿಗೆ ದೇವರ ದಯೆಯಿಂದ ಇನ್ನೂ ಎತ್ತರದ ದಿನಗಳು ಕಾದಿದೆ ಎಂದು ನನ್ನ ಮನ ಹೇಳಿತು. ನಮ್ಮ ಯಶಸ್ಸು ಕಬಳಿಸಿ ಮೇಲೇರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ. ಇದು ಪ್ರಾಪಂಚಿಕ ವಾಮಮಾರ್ಗ ತಂತ್ರ. ಇಂಥವರನ್ನು ನಗುತ್ತಾ ಪಕ್ಕ ತಳ್ಳುವ ಕಲೆ ಕರಗತವಾಗಲಿ ಮುಂದೆ ಎಂದು ಹೇಳುತ್ತಾ ಶುಭರಾತ್ರಿ, ಸವಿಗನಸು ಎಂದು ಟ್ವೀಟ್ ಮಾಡಿದ್ದಾರೆ.
ನಾನುಕಂಡ ಅದ್ಭುತ ಸಜ್ಜನಿಕೆಯ ಕಲಾಬಂಧು.ಸದಾ ಸಿನಿಮಾಗಾಗಿ ತುಡಿಯುವ ಕಲಾತಪಸ್ವಿ.ಇವನಿಗೆ ದೇವರ ದಯೆಯಿಂದ ಇನ್ನು ಎತ್ತರದ ದಿನಗಳು ಕಾದಿದೆ ಎಂದು ನನ್ನಮನ ಹೇಳಿತು.ನಮ್ಮಯಶಸ್ಸು ಕಬಳಿಸಿ ಮೇಲೆರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ.ಇದು ಪ್ರಾಪಂಚಿಕ ವಾಮಮಾರ್ಗ ತಂತ್ರ!ಇಂಥವರ ನಗುತ್ತ ಪಕ್ಕತಳ್ಳುವ ಕಲೆ ಕರಗತವಾಗಲಿ ಮುಂದೆ!
ಶುಭರಾತ್ರಿ.ಸವಿಗನಸು. pic.twitter.com/Vj6uCC2g4O
— ನವರಸನಾಯಕ ಜಗ್ಗೇಶ್ (@Jaggesh2) October 5, 2018
ಜಗ್ಗೇಶ್ ಅವರ ಟ್ವೀಟ್ಗೆ ಅಭಿಮಾನಿಗಳು ರೀ-ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ನೀವು ಹೇಳಿದಂತೆ 100% ಆಗುತ್ತದೆ ಎಂದು ಒಬ್ಬರು ಟ್ವೀಟ್ ಮಾಡಿದ್ದಾರೆ. ಮತ್ತೊಬ್ಬರು ಶುಭರಾತ್ರಿಗೆ ಒಂದೊಳ್ಳೆಯ ಮಾತು ನಿಮ್ಮಿಂದ ನಾವು ಕೇಳುವಂತಾಗಲಿ ಎಂದು ರೀ-ಟ್ವೀಟ್ ಮಾಡಿದ್ದಾರೆ. ಈ ವೇಳೆ ಮತ್ತೊಬ್ಬರು ಅಭಿಮಾನಿ ನಿಮಗೆ ರಕ್ಷಿತ್ ಮೇಲೆ ಅಷ್ಟೊಂದು ಲವ್ ಎಂದು ಕೇಳಿದಾಗ ಅದಕ್ಕೆ ಜಗ್ಗೇಶ್ ಅವರು ನನ್ನ ಮಗನಷ್ಟೆ ಪ್ರೀತಿಸುವೆ ಎಂದು ಹೇಳಿದ್ದಾರೆ.
ನನ್ನ ಮಗನಷ್ಟೆ ಪ್ರೀತಿಸುವೆ.. https://t.co/SrxfXWhXUJ
— ನವರಸನಾಯಕ ಜಗ್ಗೇಶ್ (@Jaggesh2) October 6, 2018
ಸದ್ಯ ಜಗ್ಗೇಶ್ ಹಾಗೂ ರಕ್ಷಿತ್ ಶೆಟ್ಟಿ ಈ ಹಿಂದೆ 2015ರಲ್ಲಿ ತೆರೆಕಂಡ ಯೋಗರಾಜ್ ಭಟ್ ನಿರ್ದೇಶನದ ‘ವಾಸ್ತು ಪ್ರಕಾರ’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಚಿತ್ರದಲ್ಲಿ ಅನಂತ್ ನಾಗ್, ಪಾರೂಲ್ ಯಾದವ್, ಐಶಾನಿ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv