Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಕವಿ ಕುವೆಂಪುರವರ ನೆನಪು ಮೆಲುಕು ಹಾಕಿದ ನಟ ಜಗ್ಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಷ್ಟ್ರಕವಿ ಕುವೆಂಪುರವರ ನೆನಪು ಮೆಲುಕು ಹಾಕಿದ ನಟ ಜಗ್ಗೇಶ್

Cinema

ರಾಷ್ಟ್ರಕವಿ ಕುವೆಂಪುರವರ ನೆನಪು ಮೆಲುಕು ಹಾಕಿದ ನಟ ಜಗ್ಗೇಶ್

Public TV
Last updated: January 19, 2022 2:58 pm
Public TV
Share
3 Min Read
jaggesh 2
SHARE

ಬೆಂಗಳೂರು: ಸಿನಿಮಾ ಚಿತ್ರೀಕರಣದ ಬ್ಯುಸಿ ವೇಳೆಯಲ್ಲೂ ನವರಸ ನಟ ಜಗ್ಗೇಶ್ ಅವರು ಕುವೆಂಪು ಅವರ ಮನೆ ಕುಪ್ಪಳ್ಳಿಗೆ ಭೇಟಿ ನೀಡಿ, ಕುವೆಂಪು ಅವರ ನೆನಪನ್ನು ಮೆಲುಕು ಹಾಕುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.

ಸದ್ಯ ಜಗ್ಗೇಶ್ ಅವರು ರಾಘವೇಂದ್ರ ಸ್ಟೋರ್ಸ್ ಚಿತ್ರೀಕರಣದ ನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದಾರೆ. ಚಿತ್ರೀಕರಣದಲ್ಲಿ 2 ಗಂಟೆ ವಿರಾಮ ಸಿಕ್ಕಿತು. ಸಮಯ ವ್ಯರ್ಥ ಮಾಡಲು ಮನಸ್ಸು ಬರಲಿಲ್ಲ. 14 ಕಿಮೀ ದೂರದಲ್ಲಿ ನನ್ನ ನೆಚ್ಚಿನ ಕವಿ ಕುವೆಂಪು ಅವರ ಮನೆ ನೆನಪಾಯಿತು ಹೋಗಿಬಿಟ್ಟೆ. ಅವರ ಮನೆಯ ಆವರಣಕ್ಕೆ ಕಾಲಿಟ್ಟಾಗ ನನಗರಿಯದೆ ರೋಮಾಂಚನ ಆಯಿತು. ಕುವೆಂಪು ಅವರ ಮನೆ ಒಂದು ಮೂಲೆಯು ಬಿಡದಂತೆ ತಾಳ್ಮೆಯಿಂದ ಸುತ್ತು ಹಾಕಿದೆ ಎಂದು ಬರೆದುಕೊಂಡು ಕುವೆಂಪು ಅವರ ಮನೆಯ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

Jaggesh 1

ಅವರ ಬಾಲ್ಯದಿಂದ ಕೊನೆಯವರೆಗೂ ಬಳಸಿದ ವಸ್ತುಗಳು, ಅವರ ಮಗ ಪೂರ್ಣಚಂದ್ರ ತೇಜಸ್ವಿ ಅವರು ಕೂಡಿಟ್ಟ ತನ್ನ ತಂದೆಯ ಅಮೂಲ್ಯ ಚಿತ್ರ ಭಂಡಾರ, ಕುವೆಂಪು ಅವರ ತಾತ, ತಂದೆ-ತಾಯಿ ಬಂಧುಗಳು ಬಳಸಿದ ಪುರಾತನ ವಸ್ತುಗಳನ್ನೆಲ್ಲಾ ನೋಡಿದೆ. ಅವರ ಪ್ರಥಮ ಬರವಣಿಗೆ ಅವರ ಗುರುಗಳಿಗೆ ಅರ್ಪಣೆಯ ನುಡಿಮುತ್ತು. ಅದರಲ್ಲಿ ತಿದ್ದಿ ಬರೆದ ಪದಪುಂಜ ನನ್ನನ್ನು ಅವರ ಕಾಲಕ್ಕೆ ಕರೆದೊಯ್ಯಿತು. ಅವರು ಹುಟ್ಟಿದ ವರ್ಷ 1904 ಎಂದಾಗ ಅಯ್ಯೋ ಸಾಯಿಬಾಬಾ ಬದುಕಿದ್ದರೆ ಆಗ ಎಂದು ಮನಚಿಂತಿಸಿತು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by ???????????????????????????? ???????????????????????????????????????????????????? (@actor_jaggesh)

ಕುವೆಂಪು ತಂದೆಯ ಜೊತೆ ಕುಳಿತ ಬಾಲಕನ ಚಿತ್ರ ಹಾಗೂ ಅವರ ತಂದೆಯ ಮುಖ ಲಕ್ಷಣ ಒಬ್ಬ ಪಾಳೆಗಾರನಂತೆ ಭಾಸವಾಯಿತು. ಅವರ ತಾಯಿ ಬಳಸಿದ ಅಡುಗೆ ಸಾಮಗ್ರಿಗಳನ್ನು ನೋಡಿ ನನ್ನ ಅಜ್ಜಿ ಮನೆ ನೆನಪಾಯಿತು. ಅವರದ್ದು ಎಂತಹ ಅದ್ಭುತ ವಂಶ. ಇಂಥ ಪರಿಸರದಲ್ಲಿ ಅವರು ಹುಟ್ಟಿದ ಮನೆ ಇರುವುದನ್ನು ನೋಡಿ ಸಂತೋಷವಾಯಿತು. ಕುವೆಂಪು ಅವರ ಎರಡನೆಯ ಮಗನ ಹೆಂಡತಿ ನೋಡಿ ನನ್ನ ಸೊಸೆ ನೆನಪಾದಳು. ಜಾತಿಗಳ ಲೆಕ್ಕ ತಪ್ಪದೆ ಹೆಜ್ಜೆ ಹಾಕುವ ಆ ಕಾಲದಲ್ಲಿ ಕವಿಗಳಿಗೆ ಎಂತಹ ವಿಶಾಲ ಹೃದಯವಿತ್ತು. ವಿದೇಶಿ ಹೆಣ್ಣನ್ನು ಮನೆ ಸೊಸೆಯಾಗಿ ತುಂಬಿಸಿಕೊಂಡು ವಿಶೇಷ ವ್ಯಕ್ತಿಯಾಗಿ ಕುವೆಂಪುರವರು ಹೃದಯದಲ್ಲಿ ಉಳಿದು ಬಿಟ್ಟರು.

jaggesh 1 1

ನಾನು ನಮ್ಮ ತಂದೆಯನ್ನು ಅಣ್ಣ ಎಂದು ಕರೆಯುತ್ತಿದ್ದೆ. ಕುವೆಂಪು ಅವರ ಮಗನು ಅವರನ್ನು ಅಣ್ಣ ಎಂದು ಕರೆಯುತ್ತಿದ್ದರು ಎಂದಾಗ ನನ್ನ ಮನ ನನ್ನ ಅಪ್ಪನ ಕಡೆ ವಾಲಿತು. ಇದರಿಂದ ಭಾವುಕನಾಗಿ ಬಿಟ್ಟೆ. ಕುವೆಂಪು ಅವರು ತಮ್ಮ ಪತ್ನಿಯನ್ನು ಎಷ್ಟು ಪ್ರೀತಿಸುತ್ತಿದ್ದರು ಎನ್ನಲು ಅವರ ಮಾತು ತಿಳಿಸುತ್ತದೆ. ನನ್ನ ಧರ್ಮ ಪತ್ನಿ ಇದ್ದಿದ್ದರೆ ನಾನು ಶತವರ್ಷ ಬದುಕುತ್ತಿದ್ದೆ ಎಂದು ಹೇಳಿದ್ದು, ಎಂಥ ಅರ್ಥಪೂರ್ಣ ದಾಂಪತ್ಯ ಅವರದ್ದು ಅಲ್ಲವೆ ಎಂದರು.

kuvempu

ನನಗೆ ಅವರ ನೋಡುವ ಅವಕಾಶ ಸಿಗಲಿಲ್ಲ. ಆದರೆ ಅವರ ಬಿಳಿಮುಡಿ ಕತ್ತರಿಸಿ ಶೇಖರಿಸಿ ಇಟ್ಟದ್ದು, ನೋಡಿ ಅವರನ್ನೇ ನೋಡಿದಷ್ಟು ಆನಂದವಾಯಿತು. ಅವರ ಮನೆಯ ಮುಂದೆ ಕೂತು ಫೋಟೋ ತೆಗೆಸಿಕೊಳ್ಳಲು ಕೂತಾಗ ಮನಸಲ್ಲಿ ಅವರೊಟ್ಟಿಗೆ ನನ್ನ ಹಿಂದಿನ ಜನ್ಮದಲ್ಲಿ ಕೂತಂತೆ ಭ್ರಮಿಸಿದೆ. ರಾಮಕೃಷ್ಣ ಪರಮಹಂಸರ ಶಿಷ್ಯರಲ್ಲಿ ದೀಕ್ಷೆ ಪಡೆದ ವಿಷಯವಂತು ನನ್ನ ಮನಸ್ಸಿಗೆ ಹೇಳಲಾಗದ ಆನಂದವಾಯಿತು. ಕಾರಣ ಆಧ್ಯಾತ್ಮಿಕ ಮಾರ್ಗದಲ್ಲಿ ಸಣ್ಣ ಹೆಜ್ಜೆ ಹಾಕುತ್ತಿರುವುದರಿಂದ ಆ ನಡೆಯ ಆನಂದವಾಗಿದೆ. ಒಟ್ಟಾರೆ ರಾಜ ಮಹಾರಾಜರು ಆಶೀರ್ವಾದ, ದೇಶ ವಿದೇಶದಲ್ಲಿ ಓದುಗ ಅಭಿಮಾನಿಗಳು, ಸತ್ತ ಮೇಲು ಸಾವಿರ ವರ್ಷ ನೆನಪಲ್ಲಿ ಉಳಿಯುವ ಸಾಧನೆ, ಪ್ರಶಸ್ತಿ ಪುರಸ್ಕಾರಕ್ಕೆ ಇವರಿಂದ ಗೌರವ ಬಂದದ್ದೇನು ಅನ್ನಿಸುವಷ್ಟು ಪ್ರಶಸ್ತಿಗಳು ಇವರಿಗೆ ಸಂದಿವೆ. ಇದಕ್ಕೆ ಅಲ್ಲವೆ ಹೇಳೋದು ಬದುಕಿದರೆ ರಾಜನಂತೆ ಬದುಕು ಸತ್ತಮೇಲೆ ದೇವರಾಗು ಎಂದು ಹೇಳುತ್ತಾ ಕುವೆಂಪು ಅವರನ್ನು ನೆನೆಪು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತ – ದಿವ್ಯಾ ಸುರೇಶ್‌ಗೆ ಗಾಯ

kuvempu 1

ಕುವೆಂಪು ಬದುಕೆ ಅದ್ಭುತ ಅನುಕರಣೀಯ ಅಮೋಘವಾಗಿದೆ. ಇಂದು ನನ್ನ ಸಮಯ ಸಾರ್ಥಕ ಅನ್ನಿಸಿತು. ಸಮಯ ಸಿಕ್ಕರೆ ರಸ ಋಷಿ ಮನೆಗೆ ನೀವು ಹೋಗಿ ಬನ್ನಿ ಎಂದು ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಜಗ್ಗೇಶ್ ಅವರ ಈ ಪೋಸ್ಟ್ ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾ ಖಾತೆಯಿಂದ ಪತಿಯ ಹೆಸರು ಕೈಬಿಟ್ಟ ನಟ ಚಿರಂಜೀವಿ ಪುತ್ರಿ ಶ್ರೀಜಾ

TAGGED:instagramjaggeshkuppalliKuvempuಇನ್‍ಸ್ಟಾಗ್ರಾಮ್ಕುಪ್ಪಳ್ಳಿಕುವೆಂಪುಜಗ್ಗೇಶ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?