ನವರಸ ನಾಯಕ ಜಗ್ಗೇಶ್ (Jaggesh) ಕಾಲು ಮುರಿದುಕೊಂಡಿದ್ದಾರೆ. ಈ ವಿಷಯವನ್ನು ಅವರೇ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡು ಫೋಟೋವನ್ನು ಶೇರ್ ಮಾಡಿರುವ ಅವರು, ‘ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ (Fractured leg) . ಪಾದದ ಮೂಳೆ ಮುರಿದಿದೆ. ಆರು ವಾರಗಳ ಕಾಲ ದಿಗ್ಭಂಧನ’ ಎಂದು ಬರೆದುಕೊಂಡಿದ್ದಾರೆ.
ಸದ್ಯ ಜಗ್ಗೇಶ್ ಯಾವುದೇ ಸಿನಿಮಾ ಶೂಟಿಂಗ್ ನಲ್ಲಿ ಇರದೇ ಇರುವ ಕಾರಣದಿಂದಾಗಿ ಇವರ ಕಾಲು ಮುರಿತ ಯಾರಿಗೂ ತೊಂದರೆ ಮಾಡದು. ಆದರೂ, ವೈದ್ಯರು ಸಲಹೆಯಂತೆ ವಿಶ್ರಾಂತಿ ಪಡೆದುಕೊಳ್ಳಿ. ಬೇಗ ಕಾಲು ಗುಣಮುಖವಾಗಲಿ ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ. ನೆಚ್ಚಿನ ನಟನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ.
ಇತ್ತೀಚೆಗಷ್ಟೇ ಜಗ್ಗೇಶ್ ಅವರ ರಾಘವೇಂದ್ರ ಸ್ಟೋರ್ಸ್ (Raghavendra Stores) ಸಿನಿಮಾ ರಿಲೀಸ್ ಆಗಿತ್ತು. ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲವಾದ್ದರೂ, ಒಂದೊಳ್ಳೆ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ ಜಗ್ಗೇಶ್ ರಂಗನಾಯಕ ಚಿತ್ರದಲ್ಲಿ ನಟಿಸಿದ್ದಾರೆ. ಗುರು ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕು.