ಶಿವಸೇನ ಮುಖಂಡ ರಾಹುಲ್ ಕನ್ವಾಲ್ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿದ್ದರು ಎನ್ನುವ ಕಾರಣಕ್ಕಾಗಿ ನಟ, ಸ್ವಯಂ ಸಿನಿಮಾ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ನಿನ್ನೆ ಪೊಲೀಸರು ಬಂಧಿಸಿ, ಕೋರ್ಟಿಗೆ ಹಾಜರು ಪಡಿಸಿದ್ದರು. ನ್ಯಾಯಾಲಯವು 14 ದಿನಗಳ ಕಾಲ ಖಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಜೈಲಿಗೆ ಹೋದ ಕೆಲವೇ ಗಂಟೆಗಳಲ್ಲಿ ಎದೆನೋವಿನ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಸದ್ಯ ಅವರು ಮುಂಬೈನ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರಂತೆ.
ವಿವಾದಗಳ ಮೂಲಕವೇ ಫೇಮಸ್ ಆಗಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ನಿನ್ನೆ ಮುಂಬೈ ಪೊಲೀಸರು ಬಂಧಿಸಿ, ನ್ಯಾಯಾಲಕ್ಕೆ ಹಾಜರು ಪಡಿಸಿದ್ದರು. ಬೊರಿವಲಿ ನ್ಯಾಯಾಲಯವು ಕಮಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ:ಬಿಗ್ ಬಾಸ್: ಹೋಟೆಲ್ ಊಟದತ್ತ ವಾಲಿದ ಜಶ್ವಂತ್- ನಂದು ಕಣ್ಣೀರು
ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದರು.
ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.