ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ರಾಜಕೀಯ ಅಖಾಡಕ್ಕಿಳಿದಿರುವ ನಟ ಕಿಚ್ಚ ಸುದೀಪ್ (Kiccha Sudeep) ಸ್ಟಾರ್ ಪ್ರಚಾರಕರಾಗಿ ಬಿಜೆಪಿ ಅಭ್ಯರ್ಥಿಗಳ (BJP Candidates) ಪರ ಪ್ರಚಾರ ನಡೆಸುತ್ತಿದ್ದಾರೆ.
ಮಂಗಳವಾರ ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ನಗರ ಹಾಗೂ ಬೀಳಗಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದರು. ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಪರ, ರೋಡ್ ಶೋ ಆರಂಭಿಸಿದ ಕಿಚ್ಚ ಸುದೀಪ್, ನಗರದ ಕಟ್ಟೆ ಕೆರೆಯಿಂದ, ದೇಸಾಯಿ ಸರ್ಖ್ ವರೆಗೆ ರೋಡ್ ಶೋ ನಡೆಸಿದರು. ಬೀಳಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಪರವಾಗಿಯೂ ಪ್ರಚಾರ ನಡೆಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ ಹರಿಪ್ರಸಾದ್
ಕಿಚ್ಚ ಸುದೀಪ್ ಹೋದಲೆಲ್ಲಾ ರಸ್ತೆಯುದ್ದಕ್ಕೂ ಅಭಿಮಾನಿಗಳು ಕಿಕ್ಕಿರಿದಿದ್ದರು. ಬೀಳಗಿ ಕ್ಷೇತ್ರದ ಅಂಬೇಡ್ಕರ್ ವೃತ್ತದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಗಳ ಒತ್ತಾಯದ ಮೇರೆಗೆ `ಸಾವು ಅಂದ್ರೆ ಭಯಪಡೋದಕ್ಕೆ ಗಲ್ಗಲ್ಲಿ ತಿರ್ಗೋ ಕಂತ್ರಿ, ಕಜ್ಜಿ ಗೂಂಡಾ ರೌಡಿ ಅನ್ಕೊಂಡ್ರೆನೋ ನನ್ನನ್ನ, ಮದಕರಿ…. ವೀರ ಮದಕರಿ…’ ಚಿತ್ರದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ ಹರಿಪ್ರಸಾದ್
ಇದೇ ವೇಳೆ ಮಾತನಾಡಿ, ನೀವು ಮದಕರಿ ಡೈಲಾಗ್ ಕೇಳ್ತೀರಾ ಸರ್, ಆದ್ರೆ ನಾನು ಜಾತಿಯತೆ ಮಾಡ್ತೀನಿ ಅಂತಾರೆ, ಆದ್ರೆ ನಾವು ಸಿನೆಮಾರಂಗದವ್ರು. ಆದ್ರೆ ಮೂರು ಬಾರಿ ಗೆದ್ದಿರುವ ನಿರಾಣಿಯವರ ಮೇಲೆ ಜನರ ಪ್ರೀತಿ ಸಾಕಷ್ಟಿದೆ. 75 ಸಾವಿರ ಜನರಿಗೆ ನಿರಾಣಿಯವರು ಉದ್ಯೋಗ ನೀಡಿದ್ದಾರೆ. ಈ ಬಾರಿಯೂ ಬಹುಮತದಿಂದ ನಿರಾಣಿಯವರನ್ನ ಗೆಲ್ಲಿಸಿ ಅಂತಾ ಮನವಿ ಮಾಡಿದರು.