ತೆಲುಗು ನಟ ನರೇಶ್ (Naresh) ಮತ್ತು ಪತ್ನಿ ರಮ್ಯಾ ರಘುಪತಿ (Ramya Raghupathi) ಗಲಾಟೆ ಬೂದಿ ಮುಚ್ಚಿದ ಕೆಂಡದಂತೆ ಆಗಾಗ್ಗೆ ನಿಗಿನಿಗಿಸುತ್ತದೆ. ಈವರೆಗೂ ಸುಮ್ಮನೆ ಇದ್ದ ನರೇಶ್, ಇದೀಗ ಏಕಾಏಕಿ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ತಮ್ಮ ಹೆಂಡತಿ ವಿಪರೀತ ತೊಂದರೆ ಕೊಡುತ್ತಿದ್ದಾರೆ. ನನ್ನನ್ನು ಕೊಲ್ಲಲ್ಲು ಹಲವರು ನನ್ನ ಮನೆ ಸುತ್ತ ತಿರುಗುತ್ತಾರೆ. ರಮ್ಯಾಳಿಂದ ಆಗಿ ನಾನು ನೆಮ್ಮದಿ ಕಳೆದುಕೊಂಡಿದ್ದೇನೆ. ಕೂಡಲೇ ನನಗೆ ಬಿಡುಗಡೆ ಕೊಡಿ ಎಂದು ಅವರು ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.
ರಮ್ಯಾ ಮತ್ತು ನರೇಶ್ ಡಿವೋರ್ಸ್ (Divorced) ಕೇಸ್ ಕೋರ್ಟಿನಲ್ಲಿದೆ. ನರೇಶ್ ವಿಚ್ಚೇದನ ಕೊಡಲು ಒಪ್ಪಿದರೂ, ರಮ್ಯಾ ನಿರಾಕರಿಸುತ್ತಿದ್ದಾರೆ. ಮಗನ ಭವಿಷ್ಯದ ದೃಷ್ಟಿಯಿಂದ ಮತ್ತೆ ತಾವು ನರೇಶ್ ಜೊತೆ ಬದುಕು ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಪವಿತ್ರಾ ಲೋಕೇಶ್ ಜೊತೆ ಮದುವೆ ಆಗಲು ನರೇಶ್ ನನ್ನು ಬಿಡುವುದಿಲ್ಲ ಎಂದು ಮಾಧ್ಯಮಗಳ ಮುಂದೆಯೂ ಹೇಳಿಕೊಂಡಿದ್ದಾರೆ. ಡಿವೋರ್ಸ್ ಕೇಸ್ ಜಟಿಲವಾಗುತ್ತಿದ್ದಂತೆಯೇ ಮತ್ತೆ ನರೇಶ್ ಕೋರ್ಟ್ ಮುಂದೆ ನಿಂತಿದ್ದಾರೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್ಮೆಂಟ್
ರಮ್ಯಾ ಈಗಾಗಲೇ ನರೇಶ್ ಮನೆ ಸೇರಿದ್ದಾರೆ. ಅದೇ ಮನೆಯಲ್ಲೇ ವಾಸ ಮಾಡುವುದಾಗಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ದೂರ ಆಗುವ ಪ್ರಶ್ನೆಯೇ ಇಲ್ಲವೆಂದು ಪ್ರತಿಕ್ರಿಯಿಸಿದ್ದಾರೆ. ಈ ಹಠವೇ ನರೇಶ್ ಗೆ ನುಂಗಲಾರದ ತುಪ್ಪವಾಗಿದೆ. ರಮ್ಯಾ ಅವರಿಂದ ದೂರವಾಗಿ ಪವಿತ್ರಾ ಲೋಕೇಶ್ ಜೊತೆ ಮದುವೆ ಆಗುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಅವರು ಹೊಸ ವರ್ಷದಂದು ಪವಿತ್ರಾಗೆ ಮುತ್ತು ಕೊಟ್ಟಿದ್ದ ವಿಡಿಯೋವನ್ನು ರಿಲೀಸ್ ಮಾಡಿದ್ದರು ಎಂದು ಹೇಳಲಾಗಿತ್ತು.
ಈ ನಡೆಗೆ ವಿರೋಧವನ್ನೂ ವ್ಯಕ್ತ ಪಡಿಸಿದ್ದ ರಮ್ಯಾ, ಈ ವಿಡಿಯೋ ಆಚೆ ಬಂದ ನಂತರ ಮತ್ತಷ್ಟು ಗರಂ ಆಗಿದ್ದಾರೆ. ಯಾವುದೇ ಕಾರಣಕ್ಕೂ ಇಬ್ಬರನ್ನೂ ಸುಖವಾಗಿ ಇರುವುದಕ್ಕೆ ಬಿಡುವುದಿಲ್ಲ ಎಂದು ಅವರು ಶಪಥ ಮಾಡಿದ್ದಾರೆ. ಹಾಗಾಗಿಯೇ ಸೀದಾ ನರೇಶ್ ಮನೆಗೆ ಬಂದು ರಮ್ಯಾ ಠಿಕಾಣಿ ಹೂಡಿದ್ದಾರೆ. ರಮ್ಯಾ ಮನೆಗೆ ಬರುತ್ತಿದ್ದಂತೆಯೇ ನರೇಶ್ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k