ಬೆಂಗಳೂರು: ಲೋಕಸಭಾ ಚುನಾಚಣೆ ಫಲಿತಾಂಶ ಪ್ರಕಟವಾದ ಬಳಿಕ ನಿಖಿಲ್ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬುಧವಾರ ಅಂಬರೀಶ್ ಅವರ ಹುಟ್ಟುಹಬ್ಬ ನಿಮಿತ್ತ ನಿಖಿಲ್ ವಿಶ್ ಮಾಡಿದ್ದಾರೆ.
ನಟ ಅಂಬರೀಶ್ ಅವರ ಹುಟ್ಟುಹಬ್ಬದ ವಿಶೇಷವಾಗಿ ನಿಖಿಲ್ ಕುಮಾರ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಂಬಿ ಬಗ್ಗೆ ಬರೆದು ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.
“ಹುಟ್ಟುಹಬ್ಬದ ಶುಭಾಶಯಗಳು ಅಂಬರೀಶ್ ಅಣ್ಣ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮ ಜೊತೆಗೆ ಕಳೆದ ಕೆಲವು ಅದ್ಭುತ ನೆನಪುಗಳು ನಮ್ಮ ಜೊತೆ ಇವೆ. ಆ ಸಮಯವನ್ನು ಸದಾ ಗೌರವಿಸುತ್ತೇನೆ. ನಿಮ್ಮ ಬಗ್ಗೆ ಹೇಳಲು ತುಂಬ ಇದೆ. ಆದರೆ ಎಲ್ಲವನ್ನು ಹೇಳಲು ನನ್ನ ಬಳಿ ಪದಗಳೇ ಇಲ್ಲ. ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಇಷ್ಟು ಮಾತ್ರ ಹೇಳಲು ಸಾಧ್ಯ” ಎಂದು ಅಂಬಿಯ ಬಗ್ಗೆ ತಮ್ಮ ಮನದ ಮಾತನ್ನು ಹೇಳಿಕೊಂಡಿದ್ದಾರೆ.
ಅಂಬರೀಶ್ ಅವರ ಜೊತೆಗಿದ್ದ ತಮ್ಮ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅಂಬರೀಶ್ ಹುಟ್ಟುಹಬ್ಬದ ದಿನದ ಹಿನ್ನೆಲೆಯಲ್ಲಿ ಕಳೆದ ದಿನ ಮಂಡ್ಯದಲ್ಲಿ ಅದ್ಧೂರಿಯಾಗಿ ಸಮಾರಂಭ ಮಾಡಿದ್ದು, ಸುಮಲತಾ ಅಂಬರೀಶ್ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ದರು.
https://www.instagram.com/p/ByDckJOnYsY/