-ಮೃತ ಕುಟುಂಬದವರಿಗೆ 1 ಲಕ್ಷ ರೂ. ಪರಿಹಾರ ಧನ
ಮಂಡ್ಯ: ಇತ್ತೀಚೆಗೆ ಜಿಲ್ಲೆಯ ಗುತ್ತಲು ರಸ್ತೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.
ಕಳೆದ ಮಂಗಳವಾರ ಮಂಡ್ಯದ ಗುತ್ತಲು ರಸ್ತೆಯಲ್ಲಿ ಯಮಸ್ವರೂಪಿಯಾಗಿ ಬಂದ ಲಾರಿ ನಾಲ್ವರನ್ನು ಬಲಿ ಪಡೆದು, ಹತ್ತು ಮಂದಿಗೆ ಗಾಯಗಳಾಗಿತ್ತು. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಮನೆಗೆ ನಟ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ನಿಖಿಲ್ ಬಳಿ ಮನೆಯವರು ಅಪಘಾತದ ಸನ್ನಿವೇಶವನ್ನು ವಿವರಿಸುತ್ತಾ ಕಣ್ಣೀರು ಹಾಕಿದ್ದಾರೆ. ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದ ನಿಖಿಲ್, ತಮ್ಮ ಕೈಲಾದ ಸಹಾಯ ಮಾಡುವ ಭರವಸೆ ನೀಡಿದ್ದಾರೆ.
- Advertisement 2
- Advertisement 3
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್, ಇಂದು ಕುಮಾರಸ್ವಾಮಿ ಅವರು ಬರಬೇಕಿತ್ತು. ಆದರೆ ಕೆಲಸದ ಒತ್ತಡದಿಂದ ಬರಲು ಸಾಧ್ಯವಾಗಿಲ್ಲ. ಅವರ ಪರವಾಗಿ ನಾನು ಜವಬ್ದಾರಿಯನ್ನು ವಹಿಸಿ ಬಂದು ಭೇಟಿ ಮಾಡಿ ಸಾಂತ್ವಾನ ಹೇಳಿದ್ದೇನೆ. ಈಗಾಗಲೇ ಸರ್ಕಾರ ಮೃತ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಣ ಘೋಷಿಸಿದೆ. ಜೊತೆಗೆ ಗಾಯಾಳುಗಳಿಗೆ ಚಿಕಿತ್ಸೆಯನ್ನೂ ಕೊಡಿಸಲಾಗುತ್ತದೆ ಎಂದು ಹೇಳಿದ್ದಾರೆ.
- Advertisement 4
ಮೃತ ಕುಟುಂಬದವರಿಗೆ ನಿಖಿಲ್ ಕುಮಾರಸ್ವಾಮಿ ವೈಯಕ್ತಿಕವಾಗಿ ತಲಾ 1 ಲಕ್ಷ ಪರಿಹಾರ ನೀಡಿದ್ದಾರೆ. ಉದ್ಯೋಗದ ಭರವಸೆ ಕೂಡ ನೀಡಿದ್ದಾರೆ. ನಂತರ ಮಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಇದೇ ವೇಳೆ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರೋ ಪತಿಗೆ ಹೆಚ್ಚು ಗಾಯವಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಪರೇಷನ್ಗೆ ಹಣವಿಲ್ಲ ಎಂದಾಗ ಸ್ವತಃ ನಿಖಿಲ್ ವೈದ್ಯರಿಗೆ ಕರೆ ಮಾಡಿ ನಾನು ನಿಮ್ಮನ್ನು ಬಂದು ಭೇಟಿ ಮಾಡುತ್ತೇನೆ. ಆಪರೇಷನ್ ಮಾಡಿ ಅಂತ ಹೇಳಿದ್ದಾರೆ. ನಿಖಿಲ್ ತಾಯಿ ಹೃದಯ ನೋಡಿದ ಸ್ಥಳೀಯ ನಾಯಕರು ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv