ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರ ಮರಣ ಹೊಂದಿದ್ದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ನಟ ನಿಖಿಲ್ ಸಾಂತ್ವನ ಹೇಳಿದ್ದಾರೆ.
ಗುಡಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ನಿಖಿಲ್ ಪುತ್ರನನ್ನು ಕಳೆದುಕೊಂಡ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಪ್ರತಿಯೊಬ್ಬ ಭಾರತೀಯನಲ್ಲೂ ಜೀರ್ಣಿಸಿಕೊಳ್ಳಲಾಗದ ನೋವು ಇಂದು ಕಾಡುತ್ತಿದೆ. ಯೋಧರ ಸಾವಿಗೆ ಆಕ್ರೋಶದ ಕಿಚ್ಚು ಎಲ್ಲರಲ್ಲಿದ್ದು, ನಿಜಕ್ಕೂ ಬೇಸರ ತಂದಿದೆ. ಸೈನಿಕರ ಋಣದಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ಉಗ್ರ ಚಟುವಟಿಕೆಗಳು ನಡೆಯದಂತೆ ಸರ್ಕಾರ ಕ್ರಮಕೈಗೊಳ್ಳಬೇಕಿದೆ ಎಂದು ತಿಳಿಸಿದರು.
ಯೋಧರು ನಮ್ಮ ದೇಶದ ಆಸ್ತಿಯಾಗಿದ್ದು, ಈ ಪ್ರತಿಯೊಂದು ಕ್ಷಣ, ನಿಮಿಷ ಅವರು ಕೊಟ್ಟಿರುವ ನೆಮ್ಮದಿಯ ಕ್ಷಣಗಳಾಗಿದೆ. ನಾವು ಎಷ್ಟೇ ಯೋಧರ ಕುಟುಂಬಕ್ಕೆ ಸಾಂತ್ವನ ಹೇಳಿದರೂ ಕೂಡ ಅವರ ಮಗನನ್ನು ವಾಪಸ್ ತಂದು ಕೊಡಲು ಸಾಧ್ಯವಿಲ್ಲ ಎಂಬ ಅರಿವು ನನಗಿದೆ. ಅವರ ಕುಟುಂಬ ನೋಡಿದರೆ ಹೊಟ್ಟೆಯಲ್ಲಿ ಬೆಂಕಿ ಹಚ್ಚಿದ ಹಾಗೆ ಆಗುತ್ತದೆ. ವೀರ ಯೋಧರಿಗೆ ಈ ರೀತಿ ಏನೂ ಆಗದಂತೆ ಕೇಂದ್ರ ಸರ್ಕಾರ ಕ್ರಮ ವಹಿಸಲಿ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv